AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂದಾನಗರಿ ಬೆಳಗಾವಿಯಲ್ಲಿ ಕಾಡಾನೆ ಪ್ರತ್ಯೇಕ್ಷ; ಹರಸಾಹಸಪಟ್ಟು ಕಾಡಿಗಟ್ಟಿದ ಅರಣ್ಯ ಇಲಾಖೆ

ಕುಂದಾನಗರಿ ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ಕಾಡಾನೆ ಪ್ರತ್ಯೇಕವಾಗಿತ್ತು. ಒಂಟಿ ಸಲಗ ಕಂಡು ಜನರು ಗಾಭರಿಗೊಂಡಿದ್ದರು. ಬಳಿಕ ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟು ಮತ್ತೆ ಕಾಡಿಗೆ ಅಟ್ಟಿದ್ದಾರೆ. ಸತತ ಆರು ಗಂಟೆ ಕಾರ್ಯಾಚರಣೆ ಬಳಿಕ ಒಂಟಿ ಸಲಗ ಸುರಕ್ಷಿತ ನಾಡಿನಿಂದ ಕಾಡಿಗೆ ತೆರಳಿದ್ದಾನೆ.

Sahadev Mane
| Edited By: |

Updated on: Mar 01, 2024 | 8:10 PM

Share

ಬೆಳಗಾವಿ, ಮಾ.01: ಕುಂದಾನಗರಿ ಬೆಳಗಾವಿ(Belagavi)ಯಲ್ಲಿ ಇಂದು(ಮಾ.01) ಮಹಾರಾಷ್ಟ್ರ ಕಾಡಿನಿಂದ ಬಂದಿದ್ದ ಗಜರಾಜ ಬೆಳ್ಳಂ ಬೆಳಗ್ಗೆ ಪ್ರತ್ಯಕ್ಷನಾಗಿದ್ದ. ಬೆಳಗಾವಿಯ ವೈಭವ ನಗರದಲ್ಲಿ ಮೊದಲಿಗೆ ಕಾಡಾನೆಯನ್ನ(Wild Elephant) ಜನರು ನೋಡಿದ್ದಾರೆ. ತಕ್ಷಣವೇ ಬೆಳಗಾವಿ ಎಪಿಎಂಸಿ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಇತ್ತ ಪೊಲೀಸರು ತಕ್ಷಣ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಬರುವುದರಲ್ಲಿ ಒಂಟಿ ಸಲಗ ಶಾಹು ನಗರದಲ್ಲಿ ಮತ್ತೆ ಕಾಣಿಸಿಕೊಂಡಿದೆ. ಅಲ್ಲಿಂದ ಆನೆ ನಡೆದಿದ್ದೇ ದಾರಿ ಎಂಬಂತೆ ಹೋಲಗದ್ದೆ, ನಗರ ಪ್ರದೇಶದಲ್ಲಿ ಹೆಜ್ಜೆ ಹಾಕುತ್ತಾ ಸಾಗಿದ್ದಾನೆ. ಯಾವಾಗ ಕಾಡಾನೆ ಮತ್ತೆ ಸಾರ್ವಜನಿಕ ಪ್ರದೇಶದತ್ತ ಮುಖ ಮಾಡಿತೋ, ಅವಾಗ ಅರಣ್ಯ ಇಲಾಖೆ ಸಿಬ್ಬಂದಿ ಪಟಾಕಿ ಸಿಡಿಸಿ ಸರಿದಾರಿಗೆ ತಂದಿದ್ದಾರೆ.

ದಾರಿ ಮಧ್ಯೆ ಬಂದ ಬೈಕ್, ವಾಟರ್ ಟ್ಯಾಂಕ್, ಹೋದಲ್ಲಿನ ಬೆಳೆಗಳನ್ನ ನಾಶ ಮಾಡುತ್ತಾ ಸಾಗಿದ್ದಾನೆ. ಕಂಗ್ರಾಳಿ ಅಲತಗಾ ಮಧ್ಯೆ ಬರುತ್ತಿದ್ದಂತೆ ಕೆರಳಿದ ಗಜರಾಜ್, ಅರಣ್ಯ ಇಲಾಖೆ ಸಿಬ್ಬಂದಿಯನ್ನ ಬೆನ್ನಟ್ಟಿ ಹಿಮ್ಮೆಟ್ಟಿಸಿದ್ದಾನೆ. ಇತ್ತ ಆನೆ ಬಂದ ಸುದ್ದಿ ಹರಡುತ್ತಿದ್ದಂತೆ ನಗರದ ಜನ ಸೇರಿ ಗ್ರಾಮೀಣ ಭಾಗದ ಜನರು ಆನೆ ನೋಡಲು ಅದನ್ನ ಹಿಂಬಾಲಿಸಿಕೊಂಡು ಹೊರಟರು. ತಕ್ಷಣ ಅಲರ್ಟ್ ಆದ ಪೊಲೀಸರು ಜನರು ಆನೆ ಬಳಿ ಹೋಗದಂತೆ ನೋಡಿಕೊಂಡಿದ್ದಾರೆ.

ಇದನ್ನೂ ಓದಿ:ಒಂಟಿ ಕಾಡಾನೆ ದಾಂಧಲೆ: ಆಶಾ ಕಾರ್ಯಕರ್ತೆ ಸೇರಿದಂತೆ ಇಬ್ಬರು ಮಹಿಳೆಯರು, ಮೂರು ಹಸು ದಾರುಣ ಸಾವು

ಇನ್ನು ಕಾಡಿನಿಂದ ನಾಡಿಗೆ ಬಂದ ಕಾಡಾನೆ ನೀರಿಗಾಗಿ ಆರಂಭದಲ್ಲಿ ಪರದಾಡಿತು. ಜಮೀನೊಂದರಲ್ಲಿದ್ದ ನೀರಿನ ಸಿಂಟೆಕ್ಸ್ ಉರುಳಿಸಿ ನೀರು ಕುಡಿಯಲು ಯತ್ನಿಸಿತು. ನೀರು ಸಿಗದಿದ್ದಾಗ ಅಲ್ಲಿಂದ ಮತ್ತೆ ಜಮೀನಿನತ್ತ ಮುಖ ಮಾಡಿತು. ಒಂಟಿ ಸಲಗ ಹೋಗುವುದನ್ನ ಕಂಡ ಕೆಲವರು ಭಯಭೀತಿಯಿಂದ ಮನೆಯಿಂದ ಹೊರಗೆ ಬರಲಿಲ್ಲ. ಈ ಮಧ್ಯೆ ಕಂಗ್ರಾಳಿ ಬಳಿ ಗಜರಾಜ ಸ್ನಾನ ಮಾಡೋ ದೃಶ್ಯಗಳು ಅಂತೂ ಮನಹೋಕವಾಗಿತ್ತು. ಪೊಲೀಸ್ ಮತ್ತು ಅರಣ್ಯ ಇಲಾಖೆ 60 ಜನ ಸಿಬ್ಬಂದಿ ತಂಡವು ಸತತ ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಳಗಾವಿ ಶಾಹು ನಗರದಿಂದ ಮಹಾರಾಷ್ಟ್ರ ಕೋಣವಾಡ ಗ್ರಾಮದ ಅರಣ್ಯದವರೆಗೂ ಬೆನ್ನಟ್ಟಿ ಕಾಡಾನೆಯನ್ನ ಮರಳಿ ಗೂಡಿಗೆ ಸೇರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ