AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ, ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಡೆತ್​ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ

ಗಂಡ ಹಾಗೂ ಅತ್ತೆ ಮಾವನ ಕಿರುಕುಳಕ್ಕೆ ಬೇಸತ್ತು ಸುರೇಖಾ ಡೆತ್ನೋಟ್ ಬರೆದಿಟ್ಟು ಗ್ರಾಮದಿಂದ ಮೂರು ಕಿ.ಮೀ ದೂರದಲ್ಲಿರುವ ತೋಟದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮದುವೆಯಾದ ದಿನದಿಂದಲೂ ಹೆಂಡತಿಗೆ ಪತಿ ಕಿರುಕುಳ ನೀಡುತ್ತಿದ್ದ.

ಪತಿ, ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಡೆತ್​ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ
ಸುರೇಖಾ ಶ್ರೀನಾಥ್ ನಾಯಕ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
TV9 Web
| Edited By: |

Updated on: Aug 26, 2021 | 1:21 PM

Share

ಬೆಳಗಾವಿ: ಪತಿ, ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ಸುರೇಖಾ ಶ್ರೀನಾಥ್ ನಾಯಕ (21) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಗಂಡ ಹಾಗೂ ಅತ್ತೆ ಮಾವನ ಕಿರುಕುಳಕ್ಕೆ ಬೇಸತ್ತು ಸುರೇಖಾ ಡೆತ್ನೋಟ್ ಬರೆದಿಟ್ಟು ಗ್ರಾಮದಿಂದ ಮೂರು ಕಿ.ಮೀ ದೂರದಲ್ಲಿರುವ ತೋಟದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮದುವೆಯಾದ ದಿನದಿಂದಲೂ ಹೆಂಡತಿಗೆ ಪತಿ ಕಿರುಕುಳ ನೀಡುತ್ತಿದ್ದ. ಕಾಲ ಗುಣ ಸರಿ ಇಲ್ಲ. ನೀನು ದರಿದ್ರ ಎಂದು ಟಾರ್ಚರ್ ಕೊಡುತ್ತಿದ್ದರಂತೆ. ಪತಿಯ ಕುಟುಂಬಸ್ಥರ ಮಾತಿಗೆ ನೊಂದಿದ್ದ ಸುರೆಖಾ ನಾಲ್ಕು ದಿನದ ಹಿಂದೆ ಮನೆ ಬಿಟ್ಟು ಹೋಗಿದ್ದರು. ನಿನ್ನೆ‌ ಸಂಜೆ ತೋಟದ ಮನೆಯಲ್ಲಿದ್ದ ಬಾವಿಯಲ್ಲಿ ಸುರೇಖಾ ಶವವಾಗಿ ಪತ್ತೆಯಾಗಿದ್ದಾರೆ.

ನನ್ನ ಹಾದಿ ಕಾಯಬೇಡ ನಾನು ಸತ್ತು ಹೋಗುತ್ತೇನೆ. ನನಗೆ ಸಾಕಾಗಿದೆ. ನನಗೆ ಶನಿ ಹತ್ತಿದೆ. ನೀನು ಬೇರೆ ಮದುವೆ ಮಾಡಿಕೊಂಡು ಸುಖವಾಗಿರು ಎಂದು ಸುರೇಖಾ ತಮ್ಮ ಡೆತ್ ನೋಟ್ನಲ್ಲಿ ಬರೆದಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿಯನ್ನು ಕೊಂದು ಸಾವು ಎಂದ ಪತಿ ಅರೆಸ್ಟ್ ಇನ್ನು ಮತ್ತೊಂದು ಕಡೆ ಪತ್ನಿ ಕೊಂದು ಅಪಘಾತವೆಂದು ಬಿಂಬಿಸಲೆತ್ನಿಸಿದ್ದ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹುಲಿಕಲ್ ಕ್ರಾಸ್ ಬಳಿ ಹಂತಕ ಮಹೇಶ್(32)ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮಹೇಶ್, ಪತ್ನಿಯನ್ನು ಕೊಂದು ಅಪಘಾತವಾಗಿ ಸಾವು ಎಂದು ಬಿಂಬಿಸಲೆತ್ನಿಸಿದ್ದ. ಅಪಘಾತವಾಗಿ ಪತ್ನಿ ಮೃತಪಟ್ಟು ತನಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದ. ಸದ್ಯ ಈಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

3 ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಉಪ್ಪಾರಕೊಪ್ಪಲಿನ ಪ್ರೀತಿ(23) ಜೊತೆ ಮಹೇಶ್ಗೆ ವಿವಾಹವಾಗಿತ್ತು. ಆದ್ರೆ ಇವರ ನಡುವೆ ಕೌಟುಂಬಿಕ ಕಲಹ ನಡೆದು ಪತ್ನಿಯನ್ನ ಮಹೇಶ್ ಕೊಂದಿದ್ದ. ನಿನ್ನೆ ಬೆಳಗ್ಗೆ ಅಪಘಾತವಾಗಿದೆ ಎಂದು ಸಂಬಂಧಿಕರಿಗೆ ಮಾಹಿತಿ ನೀಡಿದ್ದ. ಆದ್ರೆ ಅಪಘಾತದ ಸ್ಥಳ ನೋಡಿ ಅನುಮಾನಗೊಂಡಿದ್ದ ಪೊಲೀಸರು ಮಹೇಶ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ಮಹೇಶ್ ತಪ್ಪೊಪ್ಪಿಕೊಂಡಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಗರಸಭೆ ಮಾಜಿ ಅಧ್ಯಕ್ಷನ ವಿರುದ್ಧ ದಬ್ಬಾಳಿಕೆ ಆರೋಪ, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ