AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುವರ್ಣಸೌಧದ ಮೆಟ್ಟಿಲು ಮೇಲೆ ಶಾವಿಗೆ ಒಣ ಹಾಕಿದ್ದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ತೆಗೆದು ಹಾಕಿಲ್ಲ; ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ

ಬೆಳಗಾವಿ ಸುವರ್ಣಸೌಧದ ಮುಖ್ಯ ದ್ವಾರದ ಮೆಟ್ಟಿಲು ಮೇಲೆ ಶಾವಿಗೆ ಒಣ ಹಾಕಿದ್ದ ಮಲ್ಲವ್ವಾಳನ್ನು ಕೆಲಸದಿಂದ ತೆಗೆದಿದ್ದ ವಿಚಾರವಾಗಿ ಮಾತನಾಡಿದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಲ್ಲವ್ವಾ ಅವರನ್ನ ಕೆಲಸದಿಂದ ತೆಗೆದು ಹಾಕಿರಲಿಲ್ಲ, ಇನ್ನೊಂದು ಸೈಟ್ ನಲ್ಲಿ ಕೆಲಸ ನೀಡಲಾಗಿತ್ತು.

ಸುವರ್ಣಸೌಧದ ಮೆಟ್ಟಿಲು ಮೇಲೆ ಶಾವಿಗೆ ಒಣ ಹಾಕಿದ್ದ ಕಾರ್ಮಿಕ ಮಹಿಳೆಯನ್ನು  ಕೆಲಸದಿಂದ ತೆಗೆದು ಹಾಕಿಲ್ಲ; ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 03, 2022 | 4:15 PM

ಬೆಂಗಳೂರು: ಬೆಳಗಾವಿ (Belagavi) ಸುವರ್ಣಸೌಧದ (suvarna soudha) ಮುಖ್ಯ ದ್ವಾರದ ಮೆಟ್ಟಿಲು ಮೇಲೆ ಶಾವಿಗೆ ಒಣ ಹಾಕಿದ್ದ ಮಲ್ಲವ್ವಾಳನ್ನು ಕೆಲಸದಿಂದ ತೆಗೆದಿದ್ದ ವಿಚಾರವಾಗಿ  ಮಾತನಾಡಿದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ (Nitesh Patil) ಮಲ್ಲವ್ವಾ ಅವರನ್ನ ಕೆಲಸದಿಂದ ತೆಗೆದು ಹಾಕಿರಲಿಲ್ಲ, ಇನ್ನೊಂದು ಸೈಟ್ ನಲ್ಲಿ ಕೆಲಸ ನೀಡಲಾಗಿತ್ತು. ಸುವರ್ಣ ಸೌಧಕ್ಕೆ ಭೇಟಿ ನೀಡಿದಾಗಲೇ ಕೆಲಸದಿಂದ ತೆಗೆಯದಂತೆ, ವೇತನ ಕಟ್ ಮಾಡದಂತೆ ಹೇಳಿದ್ದೆ. ಬೇರೆ ಸ್ಥಳದಲ್ಲಿ ಕೆಲಸ ನೀಡಿತ್ತು ಅಲ್ಲಿಂದ ಮತ್ತೆ ಸುವರ್ಣಸೌಧದಲ್ಲಿ ಕೆಲಸ ನೀಡುವಂತೆ ಹೇಳಿದ್ದೇನೆ ಎಂದರು.

ಎಲ್ಲಾ ಕೆಲಸ ಮಾಡುವ ಕಾರ್ಮಿಕರಿಗೆ ಸುವರ್ಣಸೌಧ ಘನತೆ ಎತ್ತಿ ಹಿಡಿಯುವಂತೆ ಸೂಚನೆ ನೀಡಿದ್ದೇನೆ. ಗಂಡ ಮೃತಪಟ್ಟ ಬಳಿಕ ತವರು ಮನೆ ಕೊಂಡಸಕೊಪ್ಪದಲ್ಲಿದ್ದಾರೆ‌‌. ಮಹಿಳೆಗೆ ಸರ್ಕಾರದ ವತಿಯಿಂದ ಬಸ್ತವಾಡ ಗ್ರಾಮದಲ್ಲಿ ಜಾಗ ಕೊಟ್ಟು ಮನೆ ಕೊಡುತ್ತೇವೆ ಎಂದು ಹೇಳಿದರು.

ಇದನ್ನು ಓದಿ: 12 ವರ್ಷವಾದ್ರೂ ವರ್ಗಾವಣೆ ಸಿಗುತ್ತಿಲ್ಲ: ಕಲ್ಯಾಣ ಕರ್ನಾಟಕ ಶಿಕ್ಷಕರ ಅಳಲು

ಜೂನ್​ 1 ರಂದು ಬೆಳಗಾವಿ  ಸುವರ್ಣಾಸೌಧದ ಮುಖ್ಯ ದ್ವಾರದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಗಿಸಲು ಹಾಕಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ಕಳಿಸಲಾಗಿದೆ. ಸ್ವಚ್ಛತಾ ಕಾರ್ಯ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರನಿಗೆ ಇಲಾಖೆ ನೋಟಿಸ್ ಕಳಿಸಿದ್ದು ಕೊಂಡಸಕೊಪ್ಪ ಗ್ರಾಮದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.

ದಿನಗೂಲಿ ಆಧಾರದ ಮೇಲೆ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆಯನ್ನು ಗುತ್ತಿಗೆದಾರ ಕೆಲಸದಿಂದ ವಜಾ ಮಾಡಿದ್ದಾರೆ. ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ಸಮಜಾಯಿಷಿ ನೀಡಿದ್ದು. ಘಟನೆ ಮರುಕಳಿಸಿದಂತೆ ಎಲ್ಲಾ ಗುತ್ತಿಗೆದಾರರಿಗೂ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯಿಂದ ನೋಟಿಸ್ ಕಳಿಸಲಾಗಿದೆ. ನೋಟಿಸ್ ನೀಡಿದ ಬಗ್ಗೆ ಬೆಳಗಾವಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ಗೆ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿ: ಕುಸಿಯುತ್ತಿರುವ ಗದಗ ಜಿಲ್ಲೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮೇಲ್ಛಾವಣಿ: ಭಯದ ನಡುವೆ ಉಪನ್ಯಾಸಕರ ಪಾಠ

ಹಿನ್ನಲೆ ಓರ್ವ ಕಾರ್ಮಿಕ ಮಹಿಳೆಗೆ ಸಾಂಬ್ರಾ ಮೂಲದ ಕಾರ್ಮಿಕ ಮಹಿಳೆ ಶಾವಿಗೆ ತಂದು ಕೊಟ್ಟಿದ್ದರು. ಶಾವಿಗೆ ಹಸಿ ಇದ್ದವು ಎಂಬ ಕಾರಣಕ್ಕೆ ಸೀರೆ ಹಾಸಿ ಮಹಿಳೆ ಶಾವಿಗೆ ಒಣಹಾಕಿದ್ದಾರೆ. ಮಧ್ಯಾಹ್ನ ಪೆಟ್ರೋಲಿಂಗ್ ವೇಳೆ ಶಾವಿಗೆ ಒಣಹಾಕಿದ್ದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣ ಶಾವಿಗೆ ತೆರವುಗೊಳಿಸಿ ಕಾರ್ಮಿಕ ಮಹಿಳೆಯರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪೋಟೋಗಳು ವೈರಲ್ ಆಗುತ್ತಿದ್ದಂತೆ ಸಾಕಷ್ಟು ಜನರು ಟೀಕೆ ಟಿಪ್ಪಣಿ ಮಾಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:11 pm, Fri, 3 June 22

ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್