AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನ ಅಂತ್ಯಕ್ರಿಯೆಗೆ ಪರದಾಡುತ್ತಿದ್ದ ತಾಯಿ ಸಹಾಯಕ್ಕೆ ಧಾವಿಸಿದ ಯಂಗ್ ಬೆಲಗಾಮ್ ಫೌಂಡೇಶನ್; ಸಿಎಂ ಸಿದ್ದರಾಮಯ್ಯ ನೆನೆದು ಕಣ್ಣೀರು ಹಾಕಿದ ಅಜ್ಜಿ

ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಎಂಬುವವರು ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ಮೃತ ವಿಶ್ವನಾಥನ ತಾಯಿ‌ ನೀಲವ್ವ ಮಗನ ಅಂತ್ಯಕ್ರಿಯೆಗೆ ಹಣವಿಲ್ಲದೇ ಅಂಗಲಾಚುತ್ತಿದ್ದರು. ಈ ವೇಳೆ ಯಂಗ್ ಬೆಲಗಾಮ್ ಫೌಂಡೇಶನ್ ಅಂತ್ಯಕ್ರಿಯೆಗೆ ಸಹಾಯ ಮಾಡಿದೆ. ಈ ವೇಳೆ ನೀಲವ್ವನವರು ಸಿಎಂ ಸಿದ್ದರಾಮಯ್ಯನವರನ್ನು ನೆನೆದು ಕಣ್ಣೀರು ಹಾಕಿದರು.

ಪುತ್ರನ ಅಂತ್ಯಕ್ರಿಯೆಗೆ ಪರದಾಡುತ್ತಿದ್ದ ತಾಯಿ ಸಹಾಯಕ್ಕೆ ಧಾವಿಸಿದ ಯಂಗ್ ಬೆಲಗಾಮ್ ಫೌಂಡೇಶನ್; ಸಿಎಂ ಸಿದ್ದರಾಮಯ್ಯ ನೆನೆದು ಕಣ್ಣೀರು ಹಾಕಿದ ಅಜ್ಜಿ
ನೀಲವ್ವ ಗುರಕ್ಕನವರು
Sahadev Mane
| Updated By: ಆಯೇಷಾ ಬಾನು|

Updated on:Feb 19, 2024 | 11:03 AM

Share

ಬೆಳಗಾವಿ, ಫೆ.19: ಅನಾರೋಗ್ಯದಿಂದ ಸಾವನ್ನಪ್ಪಿದ ಮಗನ ಅಂತ್ಯಕ್ರಿಯೆಗೆ (Last Rites) ದುಡ್ಡಿಲ್ಲದೇ ಪರದಾಡುತ್ತಿದ್ದ ತಾಯಿಗೆ ಬೆಳಗಾವಿಯ (Belagavi) ವಿಜಯ ಮೋರೆ ಅವರ ಯಂಗ್ ಬೆಲಗಾಮ್ ಫೌಂಡೇಶನ್ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಹಣವಿಲ್ಲದೇ ಪರದಾಡುತ್ತಿದ್ದ ಹೆತ್ತತಾಯಿಯ ನೆರವಿಗೆ ಬಂದ ಯಂಗ್ ಬೆಲಗಾಮ್ ಫೌಂಡೇಶನ್ ಹಿಂದೂ ಸಂಪ್ರದಾಯದಂತೆ ವಿಧಿವಿಧಾನಗಳನ್ನ ಮುಗಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಎಂಬುವವರು ಅನಾರೋಗ್ಯದಿಂದಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮೃತ ವಿಶ್ವನಾಥನ ತಾಯಿ‌ ನೀಲವ್ವ ಗುರಕ್ಕನವರು ಮೃತ ಮಗನ ಅಂತ್ಯಕ್ರಿಯೆಗೆ ಹಣವಿಲ್ಲದೇ ಸಹಾಯಕ್ಕಾಗಿ ಅಂಗಲಾಚುತ್ತಿದ್ದರು. ಈ ವೇಳೆ ತಾಯಿ ನೀಲವ್ವನವರ ನೆರವಿಗೆ ಬಂದ ಯಂಗ್ ಬೆಲಗಾಮ್ ಫೌಂಡೇಶನ್ ಅಂತ್ಯಕ್ರಿಯೆಗೆ ಸಹಾಯ ಮಾಡಿದೆ.

ಇದನ್ನೂ ಓದಿ: ಗದಗ-ಬೆಟಗೇರಿಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ಅದ್ಧೂರಿ ಶಿವಾಜಿ ಜಯಂತ್ಯುತ್ಸವ, ಬಿಗಿ ಪೊಲೀಸ್ ಭದ್ರತೆ

ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ನೀಲವ್ವ ಅವರಿಗೆ ಸಾಂತ್ವನ ಹೇಳಿ ನಿಮ್ಮ ಜೊತೆ ನಾವಿದ್ದೇವೆ. ನಾವೇ ಮುಂದೆ ನಿಂತು ನಿಮ್ಮ ಮಗನ ಅಂತ್ಯಕ್ರಿಯೆ ನೆರವೇರಿಸುತ್ತೇವೆ ಎಂದು ಧೈರ್ಯ ತುಂಬಿ ಬೆಳಗಾವಿ ಸದಾಶಿವ ನಗರದ ಸ್ಮಶಾನದಲ್ಲಿ ವಿಧಿ ವಿಧಾನ ಪೂರ್ಣಗೊಳಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ತಮ್ಮ ಕೈಯಾರೆ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇನ್ನು ಮಗನ ಅಂತ್ಯಕ್ರಿಯೆ ವೇಳೆ ಸಿದ್ದರಾಮಯ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯ 2ಸಾವಿರ ರೂಪಾಯಿ ನೆನೆಸಿಕೊಂಡು ಅಜ್ಜಿ ಕಣ್ಣೀರು ಹಾಕಿದರು.

ಮೃತ ಪುತ್ರನಿಗೆ ಅಂತಿಮ‌ ನಮನ ಸಲ್ಲಿಸುವ ವೇಳೆ ಅಜ್ಜಿ ನೀಲವ್ವ ಕಣ್ಣೀರು ಹಾಕಿದರು. ಪ್ರತಿ ತಿಂಗಳು 2ಸಾವಿರ ರೂಪಾಯಿ ಬರುತ್ತೆ, ಅದರಲ್ಲಿ ನಮ್ಮವ್ವನ ಹೊಟ್ಟೆ ತುಂಬುತ್ತೆ ಎಂದು ಮಗ ಹೇಳಿದ್ದಾಗಿ ನೆನಪಿಸಿಕೊಂಡು ತಾಯಿ ನೀಲವ್ವ ಕಣ್ಣೀರು ಹಾಕಿದರು. ಸದ್ಯ ತಾಯಿ ತನ್ನ ಮಗನ ಅಂತ್ಯಸಂಸ್ಕಾರ ಮಾಡಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:03 am, Mon, 19 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!