AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನ ಅಂತ್ಯಕ್ರಿಯೆಗೆ ಪರದಾಡುತ್ತಿದ್ದ ತಾಯಿ ಸಹಾಯಕ್ಕೆ ಧಾವಿಸಿದ ಯಂಗ್ ಬೆಲಗಾಮ್ ಫೌಂಡೇಶನ್; ಸಿಎಂ ಸಿದ್ದರಾಮಯ್ಯ ನೆನೆದು ಕಣ್ಣೀರು ಹಾಕಿದ ಅಜ್ಜಿ

ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಎಂಬುವವರು ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ಮೃತ ವಿಶ್ವನಾಥನ ತಾಯಿ‌ ನೀಲವ್ವ ಮಗನ ಅಂತ್ಯಕ್ರಿಯೆಗೆ ಹಣವಿಲ್ಲದೇ ಅಂಗಲಾಚುತ್ತಿದ್ದರು. ಈ ವೇಳೆ ಯಂಗ್ ಬೆಲಗಾಮ್ ಫೌಂಡೇಶನ್ ಅಂತ್ಯಕ್ರಿಯೆಗೆ ಸಹಾಯ ಮಾಡಿದೆ. ಈ ವೇಳೆ ನೀಲವ್ವನವರು ಸಿಎಂ ಸಿದ್ದರಾಮಯ್ಯನವರನ್ನು ನೆನೆದು ಕಣ್ಣೀರು ಹಾಕಿದರು.

ಪುತ್ರನ ಅಂತ್ಯಕ್ರಿಯೆಗೆ ಪರದಾಡುತ್ತಿದ್ದ ತಾಯಿ ಸಹಾಯಕ್ಕೆ ಧಾವಿಸಿದ ಯಂಗ್ ಬೆಲಗಾಮ್ ಫೌಂಡೇಶನ್; ಸಿಎಂ ಸಿದ್ದರಾಮಯ್ಯ ನೆನೆದು ಕಣ್ಣೀರು ಹಾಕಿದ ಅಜ್ಜಿ
ನೀಲವ್ವ ಗುರಕ್ಕನವರು
Sahadev Mane
| Edited By: ಆಯೇಷಾ ಬಾನು|

Updated on:Feb 19, 2024 | 11:03 AM

Share

ಬೆಳಗಾವಿ, ಫೆ.19: ಅನಾರೋಗ್ಯದಿಂದ ಸಾವನ್ನಪ್ಪಿದ ಮಗನ ಅಂತ್ಯಕ್ರಿಯೆಗೆ (Last Rites) ದುಡ್ಡಿಲ್ಲದೇ ಪರದಾಡುತ್ತಿದ್ದ ತಾಯಿಗೆ ಬೆಳಗಾವಿಯ (Belagavi) ವಿಜಯ ಮೋರೆ ಅವರ ಯಂಗ್ ಬೆಲಗಾಮ್ ಫೌಂಡೇಶನ್ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಹಣವಿಲ್ಲದೇ ಪರದಾಡುತ್ತಿದ್ದ ಹೆತ್ತತಾಯಿಯ ನೆರವಿಗೆ ಬಂದ ಯಂಗ್ ಬೆಲಗಾಮ್ ಫೌಂಡೇಶನ್ ಹಿಂದೂ ಸಂಪ್ರದಾಯದಂತೆ ವಿಧಿವಿಧಾನಗಳನ್ನ ಮುಗಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಎಂಬುವವರು ಅನಾರೋಗ್ಯದಿಂದಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮೃತ ವಿಶ್ವನಾಥನ ತಾಯಿ‌ ನೀಲವ್ವ ಗುರಕ್ಕನವರು ಮೃತ ಮಗನ ಅಂತ್ಯಕ್ರಿಯೆಗೆ ಹಣವಿಲ್ಲದೇ ಸಹಾಯಕ್ಕಾಗಿ ಅಂಗಲಾಚುತ್ತಿದ್ದರು. ಈ ವೇಳೆ ತಾಯಿ ನೀಲವ್ವನವರ ನೆರವಿಗೆ ಬಂದ ಯಂಗ್ ಬೆಲಗಾಮ್ ಫೌಂಡೇಶನ್ ಅಂತ್ಯಕ್ರಿಯೆಗೆ ಸಹಾಯ ಮಾಡಿದೆ.

ಇದನ್ನೂ ಓದಿ: ಗದಗ-ಬೆಟಗೇರಿಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ಅದ್ಧೂರಿ ಶಿವಾಜಿ ಜಯಂತ್ಯುತ್ಸವ, ಬಿಗಿ ಪೊಲೀಸ್ ಭದ್ರತೆ

ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ನೀಲವ್ವ ಅವರಿಗೆ ಸಾಂತ್ವನ ಹೇಳಿ ನಿಮ್ಮ ಜೊತೆ ನಾವಿದ್ದೇವೆ. ನಾವೇ ಮುಂದೆ ನಿಂತು ನಿಮ್ಮ ಮಗನ ಅಂತ್ಯಕ್ರಿಯೆ ನೆರವೇರಿಸುತ್ತೇವೆ ಎಂದು ಧೈರ್ಯ ತುಂಬಿ ಬೆಳಗಾವಿ ಸದಾಶಿವ ನಗರದ ಸ್ಮಶಾನದಲ್ಲಿ ವಿಧಿ ವಿಧಾನ ಪೂರ್ಣಗೊಳಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ತಮ್ಮ ಕೈಯಾರೆ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇನ್ನು ಮಗನ ಅಂತ್ಯಕ್ರಿಯೆ ವೇಳೆ ಸಿದ್ದರಾಮಯ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯ 2ಸಾವಿರ ರೂಪಾಯಿ ನೆನೆಸಿಕೊಂಡು ಅಜ್ಜಿ ಕಣ್ಣೀರು ಹಾಕಿದರು.

ಮೃತ ಪುತ್ರನಿಗೆ ಅಂತಿಮ‌ ನಮನ ಸಲ್ಲಿಸುವ ವೇಳೆ ಅಜ್ಜಿ ನೀಲವ್ವ ಕಣ್ಣೀರು ಹಾಕಿದರು. ಪ್ರತಿ ತಿಂಗಳು 2ಸಾವಿರ ರೂಪಾಯಿ ಬರುತ್ತೆ, ಅದರಲ್ಲಿ ನಮ್ಮವ್ವನ ಹೊಟ್ಟೆ ತುಂಬುತ್ತೆ ಎಂದು ಮಗ ಹೇಳಿದ್ದಾಗಿ ನೆನಪಿಸಿಕೊಂಡು ತಾಯಿ ನೀಲವ್ವ ಕಣ್ಣೀರು ಹಾಕಿದರು. ಸದ್ಯ ತಾಯಿ ತನ್ನ ಮಗನ ಅಂತ್ಯಸಂಸ್ಕಾರ ಮಾಡಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:03 am, Mon, 19 February 24

Follow Us
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು