AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನ ಅಂತ್ಯಕ್ರಿಯೆಗೆ ಪರದಾಡುತ್ತಿದ್ದ ತಾಯಿ ಸಹಾಯಕ್ಕೆ ಧಾವಿಸಿದ ಯಂಗ್ ಬೆಲಗಾಮ್ ಫೌಂಡೇಶನ್; ಸಿಎಂ ಸಿದ್ದರಾಮಯ್ಯ ನೆನೆದು ಕಣ್ಣೀರು ಹಾಕಿದ ಅಜ್ಜಿ

ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಎಂಬುವವರು ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ಮೃತ ವಿಶ್ವನಾಥನ ತಾಯಿ‌ ನೀಲವ್ವ ಮಗನ ಅಂತ್ಯಕ್ರಿಯೆಗೆ ಹಣವಿಲ್ಲದೇ ಅಂಗಲಾಚುತ್ತಿದ್ದರು. ಈ ವೇಳೆ ಯಂಗ್ ಬೆಲಗಾಮ್ ಫೌಂಡೇಶನ್ ಅಂತ್ಯಕ್ರಿಯೆಗೆ ಸಹಾಯ ಮಾಡಿದೆ. ಈ ವೇಳೆ ನೀಲವ್ವನವರು ಸಿಎಂ ಸಿದ್ದರಾಮಯ್ಯನವರನ್ನು ನೆನೆದು ಕಣ್ಣೀರು ಹಾಕಿದರು.

ಪುತ್ರನ ಅಂತ್ಯಕ್ರಿಯೆಗೆ ಪರದಾಡುತ್ತಿದ್ದ ತಾಯಿ ಸಹಾಯಕ್ಕೆ ಧಾವಿಸಿದ ಯಂಗ್ ಬೆಲಗಾಮ್ ಫೌಂಡೇಶನ್; ಸಿಎಂ ಸಿದ್ದರಾಮಯ್ಯ ನೆನೆದು ಕಣ್ಣೀರು ಹಾಕಿದ ಅಜ್ಜಿ
ನೀಲವ್ವ ಗುರಕ್ಕನವರು
ಸಹದೇವ್​ ಮಾನೆ
| Edited By: ಆಯೇಷಾ ಬಾನು|

Updated on:Feb 19, 2024 | 11:03 AM

Share

ಬೆಳಗಾವಿ, ಫೆ.19: ಅನಾರೋಗ್ಯದಿಂದ ಸಾವನ್ನಪ್ಪಿದ ಮಗನ ಅಂತ್ಯಕ್ರಿಯೆಗೆ (Last Rites) ದುಡ್ಡಿಲ್ಲದೇ ಪರದಾಡುತ್ತಿದ್ದ ತಾಯಿಗೆ ಬೆಳಗಾವಿಯ (Belagavi) ವಿಜಯ ಮೋರೆ ಅವರ ಯಂಗ್ ಬೆಲಗಾಮ್ ಫೌಂಡೇಶನ್ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಹಣವಿಲ್ಲದೇ ಪರದಾಡುತ್ತಿದ್ದ ಹೆತ್ತತಾಯಿಯ ನೆರವಿಗೆ ಬಂದ ಯಂಗ್ ಬೆಲಗಾಮ್ ಫೌಂಡೇಶನ್ ಹಿಂದೂ ಸಂಪ್ರದಾಯದಂತೆ ವಿಧಿವಿಧಾನಗಳನ್ನ ಮುಗಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಎಂಬುವವರು ಅನಾರೋಗ್ಯದಿಂದಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮೃತ ವಿಶ್ವನಾಥನ ತಾಯಿ‌ ನೀಲವ್ವ ಗುರಕ್ಕನವರು ಮೃತ ಮಗನ ಅಂತ್ಯಕ್ರಿಯೆಗೆ ಹಣವಿಲ್ಲದೇ ಸಹಾಯಕ್ಕಾಗಿ ಅಂಗಲಾಚುತ್ತಿದ್ದರು. ಈ ವೇಳೆ ತಾಯಿ ನೀಲವ್ವನವರ ನೆರವಿಗೆ ಬಂದ ಯಂಗ್ ಬೆಲಗಾಮ್ ಫೌಂಡೇಶನ್ ಅಂತ್ಯಕ್ರಿಯೆಗೆ ಸಹಾಯ ಮಾಡಿದೆ.

ಇದನ್ನೂ ಓದಿ: ಗದಗ-ಬೆಟಗೇರಿಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ಅದ್ಧೂರಿ ಶಿವಾಜಿ ಜಯಂತ್ಯುತ್ಸವ, ಬಿಗಿ ಪೊಲೀಸ್ ಭದ್ರತೆ

ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ನೀಲವ್ವ ಅವರಿಗೆ ಸಾಂತ್ವನ ಹೇಳಿ ನಿಮ್ಮ ಜೊತೆ ನಾವಿದ್ದೇವೆ. ನಾವೇ ಮುಂದೆ ನಿಂತು ನಿಮ್ಮ ಮಗನ ಅಂತ್ಯಕ್ರಿಯೆ ನೆರವೇರಿಸುತ್ತೇವೆ ಎಂದು ಧೈರ್ಯ ತುಂಬಿ ಬೆಳಗಾವಿ ಸದಾಶಿವ ನಗರದ ಸ್ಮಶಾನದಲ್ಲಿ ವಿಧಿ ವಿಧಾನ ಪೂರ್ಣಗೊಳಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ತಮ್ಮ ಕೈಯಾರೆ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇನ್ನು ಮಗನ ಅಂತ್ಯಕ್ರಿಯೆ ವೇಳೆ ಸಿದ್ದರಾಮಯ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯ 2ಸಾವಿರ ರೂಪಾಯಿ ನೆನೆಸಿಕೊಂಡು ಅಜ್ಜಿ ಕಣ್ಣೀರು ಹಾಕಿದರು.

ಮೃತ ಪುತ್ರನಿಗೆ ಅಂತಿಮ‌ ನಮನ ಸಲ್ಲಿಸುವ ವೇಳೆ ಅಜ್ಜಿ ನೀಲವ್ವ ಕಣ್ಣೀರು ಹಾಕಿದರು. ಪ್ರತಿ ತಿಂಗಳು 2ಸಾವಿರ ರೂಪಾಯಿ ಬರುತ್ತೆ, ಅದರಲ್ಲಿ ನಮ್ಮವ್ವನ ಹೊಟ್ಟೆ ತುಂಬುತ್ತೆ ಎಂದು ಮಗ ಹೇಳಿದ್ದಾಗಿ ನೆನಪಿಸಿಕೊಂಡು ತಾಯಿ ನೀಲವ್ವ ಕಣ್ಣೀರು ಹಾಕಿದರು. ಸದ್ಯ ತಾಯಿ ತನ್ನ ಮಗನ ಅಂತ್ಯಸಂಸ್ಕಾರ ಮಾಡಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:03 am, Mon, 19 February 24

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ