AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ; ಬಳಿಕ ಮನೆ ಬಳಿ ಶವ ಎಸೆದು ಪರಾರಿ

ಯುವಕನ ಮನೆಗೆ ಬಂದು ದಾಂಧಲೆ ಮಾಡಿದ್ದ ದುಷ್ಕರ್ಮಿಗಳ ತಂಡ ಬಳಿಕ ಯುವಕನನ್ನು ಎಳೆದೊಯ್ದು ಹತ್ಯೆ ಮಾಡಿದೆ. ನಂತರ ಮನೆ ಬಳಿ ಶವ ಬಿಸಾಕಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ; ಬಳಿಕ ಮನೆ ಬಳಿ ಶವ ಎಸೆದು ಪರಾರಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Apr 03, 2022 | 9:00 AM

Share

ಬೆಳಗಾವಿ: ತಾಲೂಕಿನ ರಣಕುಂಡೆ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿದ ಘಟನೆ ತಡರಾತ್ರಿ ನಡೆದಿದೆ. ನಾಗೇಶ್ ಪಾಟೀಲ್ (30) ಎಂಬವರನ್ನು ಕೊಲೆ ಮಾಡಲಾಗಿದೆ. ಹಳೆ ವೈಷಮ್ಯ ಹಿನ್ನೆಲೆ ಕೃತ್ಯ ಶಂಕೆ ವ್ಯಕ್ತವಾಗಿದೆ. ಯುವಕನ ಮನೆಗೆ ಬಂದು ದಾಂಧಲೆ ಮಾಡಿದ್ದ ದುಷ್ಕರ್ಮಿಗಳ ತಂಡ ಬಳಿಕ ಯುವಕನನ್ನು ಎಳೆದೊಯ್ದು ಹತ್ಯೆ ಮಾಡಿದೆ. ನಂತರ ಮನೆ ಬಳಿ ಶವ ಬಿಸಾಕಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾವೇರಿ: ಕುರಿದೊಡ್ಡಿಯಲ್ಲಿ ಕಟ್ಟಿದ್ದ 15 ಕುರಿಗಳ ಕಳ್ಳತನ

ಇತ್ತ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಬಡಸಂಗಾಪುರ ಗ್ರಾಮದಲ್ಲಿ ರಾತ್ರೋರಾತ್ರಿ ಕುರಿಗಳನ್ನು ಕದ್ದು ಪರಾರಿಯಾದ ಘಟನೆ ನಡೆದಿದೆ. ಕುರಿದೊಡ್ಡಿಯಲ್ಲಿ ಕಟ್ಟಿದ್ದ ಹದಿನೈದು ಕುರಿಗಳ ಕಳ್ಳತನ ಮಾಡಲಾಗಿದೆ. ಒಂದೂವರೆ ಲಕ್ಷ ರುಪಾಯಿ ಮೌಲ್ಯದ ಕುರಿಗಳನ್ನು ಕಳೆದುಕೊಂಡು ಕುರಿಗಾಹಿಗಳು ಕಂಗಾಲಾಗಿದ್ದಾರೆ. ಬೆರಳೆಣಿಕೆಯಷ್ಟು ಕುರಿಗಳನ್ನು ಬಿಟ್ಟು ಹದಿನೈದು ಕುರಿಗಳನ್ನು ಕದ್ದುಕೊಂಡು ಹೋಗಿದ್ದಾರೆ. ಮಂಜು ಕೋಳೂರ ಎಂಬುವರಿಗೆ ಸೇರಿದ ಕುರಿಗಳ ಕಳ್ಳತನ ಮಾಡಲಾಗಿದೆ. ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹುಬ್ಬಳ್ಳಿ: ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ ಮಾಡ್ತಿದ್ದ ಗ್ಯಾಂಗ್ ಬಂಧನ

ಹೆದ್ದಾರಿ ಬಳಿ ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ ಮಾಡ್ತಿದ್ದ ಗ್ಯಾಂಗ್ ಬಂಧಿಸಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರಹೊಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಸ್ವೀಟ್ ಮರ್ಟ್ ಕಂಪನಿಯ ಕಾರನ್ನು ತಡೆದು ನಾಲ್ವರು ದರೋಡೆ ಮಾಡಿದ್ದರು. ಕಣ್ಣಿಗೆ ಖಾರದ ಪುಡಿ ಎರಚಿ ಅವರ ಬಳಿ ಇದ್ದ 1.22 ಲಕ್ಷ ಹಣವನ್ನ ದೊಚ್ಚಿದ್ದರು. ಇದೀಗ ದರೋಡೆಕೋರರಾದ ಕುಂದಗೋಳ ತಾಲೂಕಿನ ಮಂಜುನಾಥ್ ಡೊಳ್ಳಿನ, ಚಾಕಲಬ್ಬಿಯ ಯಲ್ಲಪ್ಪ ಗೋಗಿ, ಲಕ್ಷ್ಮೇಶ್ವರದ ಮಲ್ಲೇಶ್ ಹೊನಕೆರಪ್ಪ, ನವಲಗುಂದದ ಈರಪ್ಪ ಬಾಳೋಜಿ ಬಂಧಿಸಲಾಗಿದೆ.ಘಟನೆ ನಡೆದ ಎರಡೇ ದಿನದಲ್ಲಿ ಆರೋಪಿಗಳು ಅಂದರ್ ಆಗಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಯಚೂರು: ಕುಖ್ಯಾತ ಬೈಕ್ ಕಳ್ಳನ ಬಂಧನ

ಕುಖ್ಯಾತ ಬೈಕ್ ಕಳ್ಳನ ಬಂಧನ ಮಾಡಿದ ಘಟನೆ ರಾಯಚೂರಿನ ಲಿಂಗಸೂರು ಎಂಬಲ್ಲಿ ನಡೆದಿದೆ. ಲಿಂಗಸುಗೂರು ಪೊಲೀಸರಿಂದ ಆರೋಪಿ ಬಂಧನ ಮಾಡಲಾಗಿದೆ. ಅಂಕುಶದೊಡ್ಡಿಯ ಮೌನೇಶ್ (21) ಬಂಧಿತ ಕಳ್ಳ. ಬಂಧಿತನಿಂದ ಲಕ್ಷಾಂತರ ಮೌಲ್ಯದ 4 ಬೈಕ್ ಜಪ್ತಿ ಮಾಡಲಾಗಿದೆ. ಬಂಧಿತ ಮೌನೇಶ್, ಲಿಂಗಸುಗೂರು ಠಾಣಾ ವ್ಯಾಪ್ತಿಯ ವ್ಯಕ್ತಿ ಆಗಿದ್ದು ಇದೇ ಮಾರ್ಚ್ 10 ರಂದು ನಡೆದಿದ್ದ ಕೇಸ್ ತನಿಖೆ ವೇಳೆ ಬಂಧನ ಮಾಡಲಾಗಿದೆ. ಲಿಂಗಸುಗೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಳ್ಳಾರಿ: ವಿಠ್ಠಲಾಪುರದ ಬಳಿ ಗುಡ್ಡದಲ್ಲಿ ಅಪರಿಚಿತ ಶವ ಪತ್ತೆ

ಕಂಪ್ಲಿ ತಾಲೂಕಿನ ವಿಠ್ಠಲಾಪುರದ ಬಳಿ ಗುಡ್ಡದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೃತ ವ್ಯಕ್ತಿಯ ಶವ ಗುರುತು ಪತ್ತೆ ಹಚ್ಚಲಾಗಿದೆ. ಶರ್ಟ್ ಆಧಾರದಲ್ಲಿ ಕಂಪ್ಲಿ ಠಾಣೆ ಪೊಲೀಸರು ವ್ಯಕ್ತಿಯ ಗುರುತು ಪತ್ತೆಹಚ್ಚಿದ್ದಾರೆ. ಜೇರ್ವಗಿ ತಾಲೂಕಿನ ಬಳೂಂಡಗಿಯ ಅಮರೇಶ್ ಎಂದು ಗುರುತು ಪತ್ತೆ ಮಾಡಲಾಗಿದೆ. ಅಮರೇಶ್ ಕೊಲೆ ಆರೋಪಿ ಕಿರಣ್ ಕುಮಾರ್ ಬಂಧಿಸಲಾಗಿದೆ. ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರಿಂದ ಶೋಧಕಾರ್ಯ ನಡೆಸಲಾಗುತ್ತಿದೆ.

ಬೆಂಗಳೂರು: ವ್ಹೀಲಿಂಗ್ ಮಾಡಿ ಯುವಕರ ಪುಂಡಾಟ

ನಗರದ ಕೆ.ಆರ್. ಮಾರ್ಕೆಟ್ ಫ್ಲೈಓವರ್ ಮೇಲೆ ಯುವಕರ ಪುಂಡಾಟ ಕಂಡುಬಂದಿದೆ. ಕೆಎ 05 ಕೆವೈ 3481 ನೋಂದಣಿಯ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡಿ ಯುವಕರು ಪುಂಡಾಟ ಮೆರೆದಿದ್ದಾರೆ. ಮಾರ್ಕೆಟ್ ಫ್ಲೈಓವರ್‌ನಿಂದ ಸ್ಯಾಟಲೈಟ್ ಬಸ್ ನಿಲ್ದಾಣದವರೆಗೆ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದವಳ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆ ಯತ್ನ; 26 ದಿನಗಳ ಹೋರಾಟದ ಬಳಿಕ ಪ್ರಾಣಬಿಟ್ಟ ಮಹಿಳೆ

ಇದನ್ನೂ ಓದಿ: Crime News: ತಮಿಳುನಾಡಿನ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಕಣಿವೆಗೆ ಉರುಳಿದ ಟ್ರಕ್; 7 ಜನ ಸಾವು, 14 ಮಂದಿಗೆ ಗಾಯ

Published On - 8:54 am, Sun, 3 April 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?