AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಮೇಲೆ ಸಂಶಯ: ಲೇಡಿ ಕಂಡಕ್ಟರ್​​ಗೆ ಮೂರು ಬಾರಿ ಇರಿದು ಕೊಲೆ ಮಾಡಿದ ಪೊಲೀಸಪ್ಪ

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಬಸ್ ಕಂಡಕ್ಟರ್ ಕಾಶಮ್ಮ ನೆಲ್ಲಿಗಣಿಯನ್ನು ಆಕೆಯ ಗಂಡನಾದ ಪೊಲೀಸ್ ಪೇದೆ ಸಂತೋಷ್ ಕಾಂಬಳೆ ಹತ್ಯೆ ಮಾಡಿದ ದಾರುಣ ಘಟನೆ. ಪ್ರೇಮವಿವಾಹದ ಬಳಿಕ ಸಂಶಯ, ಕಿರುಕುಳ, ವಿಚ್ಛೇದನದ ನಂತರವೂ ಗಲಾಟೆ ಮುಂದುವರಿದು, ಅಕ್ಟೋಬರ್ 13ರಂದು ಕತ್ತು ಕೊಯ್ದು ಕೊಲೆ ಮಾಡಲಾಗಿತ್ತು . ಹಂತಕ ಸಂತೋಷ್ ಪರಾರಿಯಾಗಿದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ.

ಪತ್ನಿ ಮೇಲೆ ಸಂಶಯ: ಲೇಡಿ ಕಂಡಕ್ಟರ್​​ಗೆ ಮೂರು ಬಾರಿ ಇರಿದು ಕೊಲೆ ಮಾಡಿದ ಪೊಲೀಸಪ್ಪ
ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಕೊಂದ ಪೊಲೀಸ್ ಪೇದೆ
Sahadev Mane
| Edited By: |

Updated on:Oct 18, 2025 | 8:52 AM

Share

ಬೆಳಗಾವಿ, ಅಕ್ಟೋಬರ್ 18: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್​ಸ್ಟೇಬಲ್  (Police Constable) ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್​ನಲ್ಲಿ ಐದು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಶಮ್ಮ ನೆಲ್ಲಿಗಣಿ (34) ಅನ್ನು ಪಿಸಿ ಸಂತೋಷ್ ಕಾಂಬಳೆ ಹತ್ಯೆ ಗೈದಿದ್ದಾರೆ. ಕೊಲೆಯಾದ ಕಾಶಮ್ಮ ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ ಪತಿಗಾಗಿ ಸವದತ್ತಿ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ಹೆಂಡತಿ ಮೇಲಿನ ಸಂಶಯದಿಂದ ಕಿರುಕುಳ ಕೊಡುತ್ತಿದ್ದ ಪೊಲೀಸ್ ಪೇದೆ

ಸುಮಾರು 13 ವರ್ಷಗಳ ಹಿಂದೆ ಸಂತೋಷ್ ಹಾಗೂ ಕಾಶಮ್ಮ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಸಂತೋಷ್ ಹೆಂಡತಿಯ ಮೇಲೆ ಸಂಶಯ ಪಟ್ಟುಕೊಂಡು ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ದೈಹಿಕ ಹಾಗೂ ಮಾನಸಿಕ ಹಿಂಸೆ ತಾಳಲಾರದೆ ಕಾಶಮ್ಮ ಗಂಡನಿಂದ ದೂರವಾಗಿದ್ದು, ತವರು ಮನೆ ಸೇರಿದ್ದರು. ಬಳಿಕ ಸವದತ್ತಿ ಡಿಪೋಗೆ ವರ್ಗಾವಣೆ ಮಾಡಿಸಿಕೊಂಡು ಅಲ್ಲೇ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ವಿಚ್ಛೇದನದ ನಂತರವೂ ಹೆಂಡತಿಗೆ ಮಾನಸಿಕ ಕಿರುಕುಳ

ಮದುವೆ ಜೀವನದಲ್ಲಿ ನಿರಂತರ ಕಲಹ ಮುಂದುವರಿದ ಹಿನ್ನೆಲೆಯಲ್ಲಿ ಕಾಶಮ್ಮ ಅವರು ಬೈಲಹೊಂಗಲ ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 5, 2025 ರಂದು ಅಧಿಕೃತವಾಗಿ ವಿಚ್ಛೇದನವನ್ನೂ ಪಡೆದಿದ್ದರು. ವಿಚ್ಛೇದನದ ನಂತರವೂ ಸಂತೋಷ್ ಅವರು ಕಾಶಮ್ಮನನ್ನು ನಿರಂತರವಾಗಿ ಕರೆಮಾಡಿ ನಿಂದಿಸುತ್ತಿದ್ದನೆಂದು ಆಕೆಯ ಕುಟುಂಬದವರು ಹೇಳಿದ್ದಾರೆ.

ಅಕ್ಟೋಬರ್ 13ರ ರಾತ್ರಿ 8 ಗಂಟೆಯ ವೇಳೆಗೆ ಸಂತೋಷ್ ಕಾಶಮ್ಮನ ಮನೆಗೆ ತೆರಳಿ ಗಲಾಟೆ ನಡೆಸಿದ್ದ. ಕೋಪದಿಂದ ಕತ್ತು ಕೊಯ್ದು , ಹೊಟ್ಟೆಗೆ ಮೂರು ಬಾರಿ ಇರಿದು ಕ್ರೂರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಮೂರು ದಿನಗಳ ಬಳಿಕ ಮನೆಯೊಳಗಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ ಪ್ರೀತಿ ಒಪ್ಪದಿದ್ದಕ್ಕೆ ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆ: 24 ಗಂಟೆಗಳಲ್ಲಿ ಹಂತಕನನ್ನು ಹಿಡಿದ ಪೊಲೀಸ್ರು

ಸ್ಥಳಕ್ಕೆ ಧಾವಿಸಿದ ಸವದತ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪರಾರಿಯಾಗಿರುವ ಆರೋಪಿ ಸಂತೋಷ್ ಕಾಂಬಳೆಯ ಪತ್ತೆಗಾಗಿ ಪೊಲೀಸರಿಂದ  ಶೋಧ ಕಾರ್ಯ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:37 am, Sat, 18 October 25

ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ