AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: ಪೊಲೀಸರ ಲಾಠಿ ಚಾರ್ಜ್​​ ಗೆ ಪ್ರತಿಯಾಗಿ ರೈತರಿಂದ ಕಲ್ಲೇಟು

ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಬಂದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ. ಇದರಿಂದ ರೈತರ ಸಹನೆ ಕಟ್ಟೆ ಹೊಡೆದಿದ್ದು, ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ.

ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: ಪೊಲೀಸರ ಲಾಠಿ ಚಾರ್ಜ್​​ ಗೆ ಪ್ರತಿಯಾಗಿ ರೈತರಿಂದ ಕಲ್ಲೇಟು
Belgavi Sugarcane Farmers
ರಮೇಶ್ ಬಿ. ಜವಳಗೇರಾ
|

Updated on:Nov 07, 2025 | 4:03 PM

Share

ಬೆಳಗಾವಿ, (ನವೆಂಬರ್ 07): ಬೆಳಗಾವಿಯಲ್ಲಿ (Belagavi) ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಕ್ವಿಂಟಾಲ್​​ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಲಾಠಿ ಚಾರ್ಜ್​ಗೆ ಪ್ರತಿಯಾಗಿ ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಹತ್ತರಗಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಅತ್ತ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್​ಗಳ ಸಮೇತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದು. ಈ ವೇಳೆ ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್​​ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ಕಲ್ಲು ತೂರಾಟ ನಡೆಸಿದ್ದಾರೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ಹೋರಾಟ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಚರ್ಚೆಯಾಗಿದ್ದೇನು?

ಒಂದೆಡೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರು ಕಬ್ಬು ಕಾರ್ಖಾನೆ ಮಾಲೀಕರ ನಡೆ ನಡೆಸಿದ್ದರೆ ಇತ್ತ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿ ಪಡಿಸುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಇಂದು ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ಹೋಗಿದ್ದು, ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ. ಆ ವೇಳೆ ಪೊಲೀಸರು ಲಾಠಿ ಚಾರ್ಜ್​ ಮೂಲಕ ರೈತರನ್ನು ಚದುರಿಸಲು ಮುಂದಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ರೈತರು ಪೊಲಿಸ್ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಕ್ಷಣ ಕ್ಷಣಕ್ಕೂ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಇನ್ನು ಕಲ್ಲು ತೂರಾಟ ಹಿನ್ನೆಲೆಯಲ್ಲಿ ಪೊಲೀಸರು ಹತ್ತರಗಿ ಟೂಲ್ ಗೇಟ್​​ನಿಂದ ಕಾಲ್ಕಿತ್ತಿದ್ದಾರೆ.

ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪೊಲೀಸರಿಗೆ ಸಮ್ಯಮದಿಂದ ವರ್ತಿಸಬೇಕು. ರೈತರ ಮೇಲೆ ಬಲಪ್ರಯೋಗ ಮಾಡಬಾರದು ಎಂದು ಸೂಚಿಸಲಾಗಿದೆ. ಕಲ್ಲು ತೂರಾಟ ನಡೆದರು ಪೊಲೀಸರು ಸಮ್ಯಮದಿಂದ್ದಾರೆ. ನಾವು ಲಾಠಿ ಚಾರ್ಚ್ ಮಾಡಿಲ್ಲ ಎಂದು ಸಹ ಪೊಲೀಸರ ಹೇಳಿದ್ದಾರೆ. ರೈತರು ದಯಾಮಾಡಿ ಸರ್ಕಾರಕ್ಕೆ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ. ನಾವು ರೈತರ ಪರವಾಗಿದ್ದೇವೆ. ಸಿಎಂ ಸಹ ಹಲವು ಬಾರಿ ಹೇಳಿದ್ದಾರೆ‌. ನಮ್ಮ ಉದ್ದೇಶ ಸಮಸ್ಯೆ ಬಗಹರಿಸುವುದು. ಮುಖ್ಯಮಂತ್ರಿಗಳು ಸಭೆ ಕರೆದಿರುವುದು ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಲು ಎಂದು ಹೇಳಿದರು.

Published On - 3:18 pm, Fri, 7 November 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ