Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಪ್ರಕರಣದ ಮುಂದುವರಿದ ತನಿಖೆಗೆ ಆದೇಶ ನೀಡಿದ್ದು, ಲೋಕಾಯುಕ್ತ ಡಿವೈಎಸ್‌ಪಿಗೆ ನ್ಯಾಯಾಲಯ ಸೂಚನೆ ನೀಡಿದ್ದಾರೆ. ಜತೆಗೆ ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆಯನ್ನು ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. 

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ
ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: guruganesh bhat

Updated on:Jul 03, 2021 | 4:26 PM

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀಧರ್ ಗೋಪಾಲಕೃಷ್ಣ ಭಟ್ ಪ್ರಕರಣದ ಮುಂದುವರಿದ ತನಿಖೆಗೆ ಆದೇಶ ನೀಡಿದ್ದು, ಲೋಕಾಯುಕ್ತ ಡಿವೈಎಸ್‌ಪಿಗೆ ನ್ಯಾಯಾಲಯ ಸೂಚನೆ ನೀಡಿದ್ದಾರೆ. ಜತೆಗೆ ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆಯನ್ನು ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. 

ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿ ಆಗಿದ್ದಾಗ ಆಗಿದ್ದಾಗ 4.30 ಎಕರೆ ಡಿನೋಟಿಫೈ ಮಾಡಲಾಗಿತ್ತು. 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. 2015ರಲ್ಲಿ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಜನವರಿ 2021ರಲ್ಲಿ ಆರೋಪದಲ್ಲಿ ಹುರುಳಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ ಬಿ ರಿಪೋರ್ಟ್​ನ್ನು ತಿರಸ್ಕರಿಸಿದ ಕೋರ್ಟ್ ಪ್ರಕರಣದ ತನಿಖೆಗೆ ಆದೇಶ ನೀಡಿದೆ.

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರ ವಿರುದ್ಧವೂ ಈ ಕುರಿತು ದೂರು ಸಲ್ಲಿಸಲಾಗಿತ್ತು. ಆದರೆ, ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿತ್ತು.

ಇದನ್ನೂ ಓದಿ: 

Explained: ಕೊವಿಡ್ ಆ್ಯಂಟಿಬಾಡಿ ಟೆಸ್ಟ್ ಎಂದರೇನು? ಆ್ಯಂಟಿಬಾಡಿ ಫಲಿತಾಂಶ ಪಾಸಿಟಿವ್, ನೆಗೆಟಿವ್ ಎಂದರೇನು? ಇಲ್ಲಿದೆ ವಿವರ

ಇದು ಕೊವಿಡ್​ 19 ಸಾಂಕ್ರಾಮಿಕದ ಅತ್ಯಂತ ಅಪಾಯಕಾರಿ ಹಂತ; ಡೆಲ್ಟಾ ವೈರಾಣು ಬಗ್ಗೆ ಡಬ್ಲ್ಯೂಎಚ್​ಒ ತೀವ್ರ ಆತಂಕ

(Bellandur Land Denotification Case Special Court of Representatives rejected B Report of Lokayukta Police trouble for CM Yediyurappa)

Published On - 4:12 pm, Sat, 3 July 21

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ