AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ವಿಜಯನಗರ ಜಿಲ್ಲೆ ಘೋಷಣೆಗೆ ವಿರೋಧ: ಟೈರ್​ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ

ಬಳ್ಳಾರಿ ಬಂದ್: ವಿಜಯನಗರ ನೂತನ ಜಿಲ್ಲೆ ಘೋಷಣೆ ವಿರೋಧಿಸಿ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯಿಂದ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ನೂತನ ವಿಜಯನಗರ ಜಿಲ್ಲೆ ಘೋಷಣೆಗೆ ವಿರೋಧ: ಟೈರ್​ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ
ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯಿಂದ ಬಳ್ಳಾರಿ ಬಂದ್
ಆಯೇಷಾ ಬಾನು
ಆಯೇಷಾ ಬಾನು|

Updated on: Nov 26, 2020 | 7:56 AM

Share

ಬಳ್ಳಾರಿ: ವಿಜಯನಗರ ನೂತನ ಜಿಲ್ಲೆ ಘೋಷಣೆ ವಿರೋಧಿಸಿ ನ.26ರಂದು ಬಳ್ಳಾರಿ ಬಂದ್‌ಗೆ ಕರೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬಳ್ಳಾರಿ ಬಂದ್ ಮಾಡಲಾಗುತ್ತಿದೆ. ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯಿಂದ ಬಳ್ಳಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಳ್ಳಾರಿ ನಗರದ ಬಹುತೇಕ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಲಿವೆ. ಸದ್ಯ ಈಗ ರಾಯಲ್ ವೃತ್ತದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕುತ್ತಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇದೆ.

ಬಳ್ಳಾರಿಯಲ್ಲಿ ಬಿಗಿಬಂದೋಬಸ್ತ್: ಇನ್ನು ಇಂದು ಬಳ್ಳಾರಿ ಬಂದ್‌ಗೆ ಕರೆ ಹಿನ್ನೆಲೆ ಬಿಗಿಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಮೂವರು ಡಿವೈಎಸ್‌ಪಿ, 10 ಸಿಪಿಐ, 18 ಪಿಎಸ್‌ಐ, 40 ಎಎಸ್‌ಐ, 200 ಕಾನ್ಸ್‌ಟೇಬಲ್‌ಗಳು, 3 ಡಿಎಆರ್ ತುಕಡಿ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ