AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನ ಮಾಡಿ ಬೀದಿಗೆ ಹಾಕಿದರೆ ಕೊರೊನಾ ಮಾರಿ ಹೋಗುತ್ತದಾ? ಇದೆಂತಹ ನಂಬಿಕೆಯಲ್ಲಿ ಮುಳುಗಿದ್ದಾರೆ ಜನ

ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ಗ್ರಾಮದ ಅಷ್ಟೂ ಜನ ಮೌಢ್ಯ ಆಚರಣೆಯಲ್ಲಿ ಮುಳುಗಿದ್ದಾರೆ. ಕೊರೊನಾವನ್ನ ಓಡಿಸಬೇಕು ಎಂದು ಪ್ರತಿ ಮನೆಯಲ್ಲಿ ಅನ್ನ ಮಾಡಿಸಿ ಊರಿನ ಹೊರಗೆ ಸುರಿದು ಬರಲಾಗುತ್ತಿದೆ.

ಅನ್ನ ಮಾಡಿ ಬೀದಿಗೆ ಹಾಕಿದರೆ ಕೊರೊನಾ ಮಾರಿ ಹೋಗುತ್ತದಾ? ಇದೆಂತಹ ನಂಬಿಕೆಯಲ್ಲಿ ಮುಳುಗಿದ್ದಾರೆ ಜನ
ಗ್ರಾಮದ ಜನರಿಂದ ಅನ್ನ ಸಂಗ್ರಹಿಸುತ್ತಿರುವ ದೃಶ್ಯ
ಆಯೇಷಾ ಬಾನು
|

Updated on:May 25, 2021 | 2:19 PM

Share

ಬಳ್ಳಾರಿ: ಹಳ್ಳಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರ ಜೊತೆ ಜೊತೆಗೆ ಮೌಢ್ಯ ಆಚರಣೆಗಳು ಕಾಣಿಸಿಕೊಳ್ಳುತ್ತಿವೆ. ಅಥವಾ ಜನರನ್ನು ಮಹಾಮಾರಿ ಕೊರೊನಾ ಅಷ್ಟೊಂದು ಅಸಹಾಯಕವನ್ನಾಗಿಸಿದೆ. ಮಹಾಮಾರಿ ಕೊರೊನಾ ದೂರವಾಗಲಿ ಎಂದು ನೂರಾರು ಕೆಜಿ ಅನ್ನವನ್ನು ಮಾಡಿ, ಅದನ್ನು ಗ್ರಾಮಸ್ಥರು ಮಣ್ಣಿಗೆ ಸುರಿದಿರುವ ಘಟನೆ ಬಳ್ಳಾರಿ ತಾಲೂಕಿನ ಕಗ್ಗಲ್ಲು ಗ್ರಾಮದಲ್ಲಿ ನಡೆದಿದೆ.

ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ಗ್ರಾಮದ ಅಷ್ಟೂ ಜನ ಮೌಢ್ಯ ಆಚರಣೆಯಲ್ಲಿ ಮುಳುಗಿದ್ದಾರೆ. ಕೊರೊನಾವನ್ನ ಓಡಿಸಬೇಕು ಎಂದು ಪ್ರತಿ ಮನೆಯಲ್ಲಿ ಅನ್ನ ಮಾಡಿಸಿ ಊರಿನ ಹೊರಗೆ ಸುರಿದು ಬರಲಾಗುತ್ತಿದೆ. ಗ್ರಾಮದ ಒಂದೊಂದು ಮನೆಯಿಂದ 5 ಕೆಜಿ ಅನ್ನ ಮಾಡಿಸಿ ಎಲ್ಲವನ್ನೂ ಒಂದು ಕಡೆ ಒಟ್ಟುಗೂಡಿಸಿ ರಾತ್ರಿ ವೇಳೆ ಅನ್ನವನ್ನು ಊರಿನ ನಾಲ್ಕು ದಿಕ್ಕುಗಳು ಸೇರಿದಂತೆ ಊರಿನ ಸುತ್ತ ಎಸೆದು ಬರುತ್ತಿದ್ದಾರೆ.

ತಮ್ಮ ಹಿರಿಯರು ನಡೆಸಿಕೊಂಡು ಬಂದ ಪದ್ಧತಿಯನ್ನ ನಾವು ನಡೆಸುತ್ತಿದ್ದೇವೆ ಅನಾದಿ ಕಾಲದಿಂದಲೂ ಈ ಪದ್ಧತಿ ಚಾಲ್ತಿಯಲ್ಲಿದೆ. ಪ್ಲೇಗ್ ಮಾರಿಯಂತಹ ದೊಡ್ಡ ಸಾಂಕ್ರಾಮಿಕ ರೋಗ ನಮ್ಮ ಹಿರಿಯರು ಈ ನಂಬಿಕೆಯನ್ನು ನಡೆಸಿಕೊಂಡು ಬಂದಿದ್ದರು. ಗ್ರಾಮದ ಜನರು ಮಡಿಯಿಂದ ಚರಗಾ ಸಲ್ಲಿಕೆ (ಮೊಸರು ಸೇರಿಸಿದ ಅನ್ನ) ಮಾಡಲಾಗುತ್ತೆ. ಅದನ್ನು ಊರಿನ ಪ್ರಮುಖ ಗ್ರಾಮಸ್ಥರು ಊರಿನ ಸುತ್ತ ಚರಗಾ ಸಲ್ಲಿಸಿ ಬರುತ್ತಾರೆ. ಹೀಗೆ ಮಾಡುವುದರಿಂದ ಊರಿಗೆ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ ಎಂಬುವುದು ಊರಿನ ಜನರ ನಂಬಿಕೆಯಾಗಿದೆ. ಹೀಗಾಗಿ ನಮ್ಮ ಹಿರಿಯರು ನಡೆಸಿಕೊಂಡು ಬಂದ ನಂಬಿಕೆಯನ್ನು ನಾವು ನಡೆಸಿದ್ದೇವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Superstition rice

ಗ್ರಾಮದ ಜನರಿಂದ ಅನ್ನ ಸಂಗ್ರಹಿಸುತ್ತಿರುವ ದೃಶ್ಯ

ಲಾಕ್​ಡೌನ್​ನಿಂದಾಗಿ ಕೆಲಸ ಕಳೆದುಕೊಂಡು ಅದೆಷ್ಟೂ ಜನ ತುತ್ತು ಅನ್ನಕ್ಕಾಗಿ ಪರದಾಡುತ್ತಿರುವಾಗ… ಕೊರೊನಾ ಲಾಕ್ಡೌನ್ನಿಂದಾಗಿ ಕೆಲಸ ಕಳೆದುಕೊಂಡು ಅದೆಷ್ಟೂ ಜನ ತುತ್ತು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಇದರ ನಡುವೆ ಮೌಢ್ಯತೆಯಿಂದ ಅನ್ನವನ್ನು ಮಣ್ಣುಪಾಲು ಮಾಡಲಾಗುತ್ತಿದೆ. ಇಂತಹ ನಂಬಿಕೆಗಳನ್ನು ನಾವು ಬೆಂಬಲಿಸಬಾರದು. ಮೂಢನಂಬಿಕೆ ಆಚರಣೆಗಳನ್ನು ಮಾಡಬಾರದು. ನರ ಬಲಿ, ಅನ್ನ ಎಸೆಯುವಂತಹ ನಂಬಿಕೆ ಆಚರಣೆಗಳು ಮರೆಯಾಗಬೇಕು. ಅದೇ ಅನ್ನವನ್ನು ಬಡವರಿಗೆ ನೀಡಿ ಹಸಿದವರ ಹೊಟ್ಟೆ ತುಂಬಿಸುವ ಕಾರ್ಯ ಮಾಡಬೇಕಾಗಿದೆ. ಇದು ಟಿವಿ9 ಡಿಜಿಟಲ್​ ಕಳಕಳಿ.

ಇದನ್ನೂ ಓದಿ: ಮೂಢನಂಬಿಕೆಗೆ ಪೈಶಾಚಿಕ ಕೃತ್ಯ.. ಹೆಣ್ಣು ಮಕ್ಕಳ ದಿನದಂದೆ ದೇವರ ಹೆಸರಿನಲ್ಲಿ ಹೆತ್ತ ಮಕ್ಕಳನ್ನೇ ಕೊಂದ ತಂದೆ-ತಾಯಿ

Published On - 12:53 pm, Tue, 25 May 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ