AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಓಡಿಸಲು ನೂರಾರು ಕೆಜಿ ಅನ್ನ ಚೆಲ್ಲಿ ಮೌಢ್ಯಾಚರಣೆ, ಯುವಕರ ದೂರಿನ ಪ್ರತಿ ವೈರಲ್!

Superstition: ಕೊರೊನಾವನ್ನ ಓಡಿಸಬೇಕು ಎಂದು ಪ್ರತಿ ಮನೆಯಿಂದ ಅನ್ನ ಸಂಗ್ರಹಿಸಿ ಅದನ್ನು ಊರಿನ ಗ್ರಾಮಸ್ಥರು ಊರಿನ ಹೊರಗೆ ನಾಲ್ಕು ದಿಕ್ಕುಗಳು ಸೇರಿದಂತೆ ಊರಿನ ಸುತ್ತ ಎಸೆದು ಬರುತ್ತಿದ್ದರು. ಈಗ ಇದೇ ಘಟನೆಗೆ ಸಂಬಂಧಿಸಿ ದೂರಿನ ಪ್ರತಿಯೊಂದು ವೈರಲ್ ಆಗಿದೆ.

ಕೊರೊನಾ ಓಡಿಸಲು ನೂರಾರು ಕೆಜಿ ಅನ್ನ ಚೆಲ್ಲಿ ಮೌಢ್ಯಾಚರಣೆ, ಯುವಕರ ದೂರಿನ ಪ್ರತಿ ವೈರಲ್!
ಯುವಕರ ದೂರಿನ ಪ್ರತಿ ವೈರಲ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: May 26, 2021 | 10:56 AM

Share

ಬಳ್ಳಾರಿ: ಜಿಲ್ಲೆಯ ಕಗ್ಗಲ್ಲು ಗ್ರಾಮದಲ್ಲಿ ಮಹಾಮಾರಿ ಕೊರೊನಾ ದೂರವಾಗಲಿ ಎಂದು ಗ್ರಾಮದ ಜನರೆಲ್ಲಾ ಮಡಿಯಿಂದ ಮೊಸರು ಬೆರೆಸಿದ ನೂರಾರು ಕೆಜಿ ಅನ್ನವನ್ನು ಗ್ರಾಮದ ಸುತ್ತೆಲ್ಲ ಸುರಿದು ಮೌಢ್ಯ ಆಚರಣೆಯಲ್ಲಿ ಮುಳುಗಿದ್ದರು. ಈ ಘಟನೆ ಸಂಬಂಧ ದೂರಿನ ಪ್ರತಿಯೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಪೊಲೀಸರಿಗೆ ಈ ರೀತಿಯ ಯಾವುದೇ ದೂರು ಬಂದಿಲ್ಲವಂತೆ.

ಹೌದು ನಿನ್ನೆ ಟಿವಿ9 ಡಿಜಿಟಲ್​ನಲ್ಲಿ ಮೌಢ್ಯ ಆಚರಣೆಯ ಬಗ್ಗೆ ವರದಿ ಪ್ರಕಟವಾಗಿತ್ತು. ಕೊರೊನಾವನ್ನ ಓಡಿಸಬೇಕು ಎಂದು ಪ್ರತಿ ಮನೆಯಿಂದ ಅನ್ನ ಸಂಗ್ರಹಿಸಿ ಅದನ್ನು ಊರಿನ ಗ್ರಾಮಸ್ಥರು ಊರಿನ ಹೊರಗೆ ನಾಲ್ಕು ದಿಕ್ಕುಗಳು ಸೇರಿದಂತೆ ಊರಿನ ಸುತ್ತ ಎಸೆದು ಬರುತ್ತಿದ್ದರು. ಈಗ ಇದೇ ಘಟನೆಗೆ ಸಂಬಂಧಿಸಿ ದೂರಿನ ಪ್ರತಿಯೊಂದು ವೈರಲ್ ಆಗಿದೆ.

ಕೊರೊನಾ ಸೋಂಕು ತೊಲಗಿಸಲು ಡಿ.ಕಗ್ಗಲ್ಲು ಗ್ರಾಮಸ್ಥರಿಂದ ಮೌಢ್ಯಾಚರಣೆ ಹಿನ್ನೆಲೆಯಲ್ಲಿ ಈ ಆಚರಣೆಗೆ ಕಾರಣರಾದ ಗ್ರಾಮದ ಮುಖಂಡರ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮದ ಯುವಕರು ಮೋಕಾ ಠಾಣೆ ಪಿಎಸ್ಐಗೆ ಬರೆದಿದ್ದಾರೆ ಎನ್ನಲಾದ ದೂರಿನ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಮೋಕಾ ಪೊಲೀಸ್ ಠಾಣೆಗೆ ಯಾರೊಬ್ಬರೂ ಅಧಿಕೃತವಾಗಿ ಭೇಟಿ ನೀಡುವುದಾಗಲಿ ಅಥವಾ ಅಂಚೆ ಮೂಲಕವಾಗಲಿ ಯಾವುದೇ ದೂರು ಸಲ್ಲಿಸಿಲ್ಲ. ಘಟನೆ ಸಂಬಂಧ ಯಾವುದೇ ಪ್ರಕರಣವೂ ದಾಖಲು ಆಗಿಲ್ಲ ಎಂದು ಮೋಕಾ ಠಾಣೆಯ ಪಿಎಸ್ಐ ರಘು ಸ್ಪಷ್ಟಪಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಅಜ್ಜಿಹಬ್ಬ ಆಚರಣೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಗ್ರಾಮದಲ್ಲಿ ಕೊವಿಡ್ ತೊಲಗಲೆಂದು ಅಜ್ಜಿಹಬ್ಬ ಆಚರಣೆ ಮಾಡಲಾಗಿದೆ. ಪಟ್ರೆಹಳ್ಳಿಯ ಕರೇಕಲ್ ಮಾರಮ್ಮಗೆ ಸಾಂಪ್ರದಾಯಿಕ ಎಡೆ ನೀಡಿ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಅನ್ನ ಮಾಡಿ ಬೀದಿಗೆ ಹಾಕಿದರೆ ಕೊರೊನಾ ಮಾರಿ ಹೋಗುತ್ತದಾ? ಇದೆಂತಹ ನಂಬಿಕೆಯಲ್ಲಿ ಮುಳುಗಿದ್ದಾರೆ ಜನ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ