AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ವಿಮ್ಸ್ ದುರ್ಘಟನೆ: ಮೃತ ರೋಗಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆ ವೆಂಟಿಲೇಟರ್ ಕಾರ್ಯ ಸ್ಥಗಿತವಾಗಿ ಸಾವನ್ನಪ್ಪಿದ ಮೂವರು ರೋಗಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಬಳ್ಳಾರಿ ವಿಮ್ಸ್ ದುರ್ಘಟನೆ: ಮೃತ ರೋಗಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ರೋಗಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ ಕರ್ನಾಟಕ ಸರ್ಕಾರ
TV9 Web
| Edited By: Rakesh Nayak Manchi|

Updated on:Sep 15, 2022 | 7:08 PM

Share

ಬಳ್ಳಾರಿ: ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಕಾರ್ಯ ಸ್ಥಗಿತವಾಗಿ ಐಸಿಯುನಲ್ಲಿದ್ದ ಮೂವರು ರೋಗಿಗಳು ಸಾವನ್ನಪ್ಪಿದ ಪ್ರಕರಣ ಸಂಬಂಧ ರೋಗಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದೆ.

ವಿವಿಧ ವಾರ್ಡ್ ಹಾಗೂ ಆಸ್ಪತ್ರೆಗೆ ವಿದ್ಯುತ್ ಸರಬರಾಜು ಮಾಡುವ ಮೇನ್ ಕೇಬಲ್ ಬ್ಲಾಸ್ಟ್ ಆದ ಪರಿಣಾಮ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ವಿಮ್ಸ್ ಆಸ್ಪತ್ರೆಯ ರೋಗಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದ್ದಲ್ಲದೆ ಘಟನೆಯಲ್ಲಿ ಮೂವರು ರೋಗಿಗಳು ಸಾವನ್ನಪ್ಪಿದ್ದರು. ಸಮಸ್ಯೆ ಆರಂಭವಾಗಿ 24 ಗಂಟೆ ಕಳೆದರೂ ಸರಿಪಡಿಸುವಲ್ಲಿ ವಿಳಂಭವಾಗಿದೆ. ಹೀಗಾಗಿ ಜನರೇಟರ್ ಮೂಲಕ ತಾತ್ಕಾಲಿಕ ವಿದ್ಯುತ್​ ಪೂರೈಕೆ ಮಾಡಲಾಗಿದ್ದು, ಐಸಿಯುನಲ್ಲಿದ್ದ ರೋಗಿಗಳನ್ನು OT ವಾರ್ಡ್ ಹಾಗೂ ಟ್ರಾಮ್ ಕೇರ್ ಸೆಂಟರ್ ಸೇರಿದಂತೆ ಬೇರೆ ಬೇರೆ ವಾರ್ಡ್​​ಗಳಿಗೆ ಶಿಫ್ಟ್​ ಮಾಡಲಾಗಿತ್ತು.

ಹಾವು ಕಡಿತ ಹಿನ್ನೆಲೆ ಸೆಪ್ಟೆಂಬರ್ 13 ರಂದು ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದ ಚೆಟ್ಟೆಮ್ಮ, ಕಿಡ್ನಿ ವೈಫಲ್ಯದಿಂದ ಸೆ.11ರಂದು ಆಸ್ಪತ್ರೆಗೆ ದಾಖಲಾಗಿದ್ದ ಮೌಲಾ ಹುಸೇನ್ ಹಾಗೂ ಚೇಳು ಕಡಿತಕ್ಕೆ ಒಳಗಾಗಿ ಸೆ.6ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಳ್ಳಾರಿ ತಾಲೂಕಿನ ಜೋಳದರಾಶಿಯ ಮನೋಜ್ ಎಂಬವರು ಸಾವನ್ನಪ್ಪಿದ್ದರು.

ಇನ್ನು ಘಟನೆ ಸಂಬಂಧ ಬಳ್ಳಾರಿ ವಿಮ್ಸ್‌ ನಿರ್ದೇಶಕ ಡಾ.ಗಂಗಾಧರಗೌಡ ಸ್ಪಷ್ಟನೆ ನೀಡಿದ್ದು ವಿಮ್ಸ್‌ನಲ್ಲಿ ವಿದ್ಯುತ್ ಅವಘಡದಿಂದ ಸಾವು ಸಂಭವಿಸಿಲ್ಲ ಎಂದಿದ್ದರು. ಅಲ್ಲದೆ ಐಸಿಯುನಲ್ಲಿದ್ದ ರೋಗಿಗಳ ಸಾವಿನ ಬಗ್ಗೆ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹಾಗೂ ಉಸ್ತುವಾರಿ ಸಚಿವ ಬಿ ಶ್ರೀರಾಮುಲು ಸೂಚಿಸಿದ್ದರು.

ಮತ್ತಷ್ಟು ಜಿಲ್ಲಾವಾರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Thu, 15 September 22

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್