AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ: ಮುಸ್ಲಿಂ ವ್ಯಕ್ತಿ ಜಾಗದಲ್ಲಿ ದೇವಸ್ಥಾನ ಪತ್ತೆ; ಅಲ್ಲಿಯೇ ನಾಗ ಸಾನಿಧ್ಯದ ಸುಳಿವು ಗೋಚರ

ಬೆಳ್ತಂಗಡಿ(Belthangady) ತಾಲೂಕಿನ ತೆಕ್ಕಾರಿನಲ್ಲಿ ಮುಸ್ಲಿಂ ವ್ಯಕ್ತಿ ಅತಿಕ್ರಮಿಸಿದ್ದ ಜಾಗದಲ್ಲಿ ಹಿಂದಿನ ಪ್ರಶ್ನಾ ಚಿಂತನೆ ವೇಳೆ ಉತ್ಖನನ ನಡೆಸಿದ ಮೇಲೆ ಮುಸ್ಲಿಂ ವ್ಯಕ್ತಿ ಅತಿಕ್ರಮಿಸಿದ್ದ ಸರ್ಕಾರಿ ಜಾಗದ 15 ಅಡಿ ಆಳದಲ್ಲಿ ದೇವರ ವಿಗ್ರಹ, ಪಾಣಿಪೀಠ, ಪಂಚಾಂಗದ ಕಲ್ಲುಗಳು ಪತ್ತೆಯಾಗಿತ್ತು. ಸದ್ಯ ದೇವಸ್ಥಾನ ಪತ್ತೆ ಬೆನ್ನಲ್ಲೇ ನಾಗಾರಾಧನೆ ಬಗ್ಗೆಯೂ ಸ್ಪೋಟಕ ಸತ್ಯ ಬಹಿರಂಗವಾಗಿದೆ.

ದಕ್ಷಿಣ ಕನ್ನಡ: ಮುಸ್ಲಿಂ ವ್ಯಕ್ತಿ ಜಾಗದಲ್ಲಿ ದೇವಸ್ಥಾನ ಪತ್ತೆ; ಅಲ್ಲಿಯೇ ನಾಗ ಸಾನಿಧ್ಯದ ಸುಳಿವು ಗೋಚರ
ಬೆಳ್ತಂಗಡಿ
ಅಶೋಕ್​ ಪೂಜಾರಿ, ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 22, 2023 | 7:28 PM

Share

ದಕ್ಷಿಣ ಕನ್ನಡ, ನ.22: ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನ ತೆಕ್ಕಾರಿನಲ್ಲಿ ಮುಸ್ಲಿಂ ವ್ಯಕ್ತಿ ಅತಿಕ್ರಮಿಸಿದ್ದ ಜಾಗದಲ್ಲಿ ದೇವಸ್ಥಾನ ಪತ್ತೆ ವಿಚಾರ ‘ ಇದೀಗ ಅದರ ಬೆನ್ನಲ್ಲೇ ಗ್ರಾಮಸ್ಥರು ಅದೇ ಜಾಗದಲ್ಲಿಯೇ ಪ್ರಶ್ನಾ ಚಿಂತನೆ ಇಟ್ಟಿದ್ದಾರೆ. ಪ್ರಶ್ನಾ ಚಿಂತನೆಯಲ್ಲಿ ನಾಗ ಸಾನಿಧ್ಯದ ಸುಳಿವು ಗೋಚರವಾಗಿದೆ. ದೈವಜ್ಞ ಮಾಡಾವು ವೆಂಕಟ್ರಮಣ್ ಭಟ್ ನೇತೃತ್ವದ ಪ್ರಶ್ನಾ ಚಿಂತನೆಯಲ್ಲಿ ದೇವಸ್ಥಾನ ಪತ್ತೆಯಾದ ಜಾಗದ ಹತ್ತಿರದಲ್ಲೇ ನಾಗಬನ ಇರುವ ಸುಳಿವು ಸಿಕ್ಕಿದೆ.

ತೆರೆದಷ್ಟು ಬಿಚ್ಚಿಕೊಳ್ಳುತ್ತಲೇ ಇದೆ ತೆಕ್ಕಾರು ಗೋಪಾಲಕೃಷ್ಣ ದೇವರ ರಹಸ್ಯ

ಹಿಂದಿನ ಪ್ರಶ್ನಾ ಚಿಂತನೆ ವೇಳೆ ಉತ್ಖನನ ನಡೆಸಿದ ಮೇಲೆ ಮುಸ್ಲಿಂ ವ್ಯಕ್ತಿ ಅತಿಕ್ರಮಿಸಿದ್ದ ಸರ್ಕಾರಿ ಜಾಗದ 15 ಅಡಿ ಆಳದಲ್ಲಿ ದೇವರ ವಿಗ್ರಹ, ಪಾಣಿಪೀಠ, ಪಂಚಾಂಗದ ಕಲ್ಲುಗಳು ಪತ್ತೆಯಾಗಿತ್ತು. ಹತ್ತಾರು ವರ್ಷಗಳ ಹಿಂದೆಯೇ ಗ್ರಾಮದಲ್ಲಿ ದೇವಸ್ಥಾನ ಇರುವ ಬಗ್ಗೆ ಪ್ರಶ್ನಾಚಿಂತನೆ ವೇಳೆ ಬಯಲಾಗಿತ್ತು. ಸದ್ಯ ದೇವಸ್ಥಾನ ಪತ್ತೆ ಬೆನ್ನಲ್ಲೇ ನಾಗಾರಾಧನೆ ಬಗ್ಗೆಯೂ ಸ್ಪೋಟಕ ಸತ್ಯ ಬಹಿರಂಗವಾಗಿದೆ. ಈ ಮೂಲಕ ತೆಕ್ಕಾರು ಗೋಪಾಲಕೃಷ್ಣ ದೇವರ ರಹಸ್ಯ ತೆರೆದಷ್ಟು ಬಿಚ್ಚಿಕೊಳ್ಳುತ್ತಲೇ ಇದೆ. ಇದರಿಂದ ತೆಕ್ಕಾರಿನಲ್ಲಿ ಮತ್ತೊಂದು ಉತ್ಖನನಕ್ಕೆ ದಾರಿ ಮಾಡಿಕೊಡುತ್ತಾ ಹೊಸ ಪ್ರಶ್ನಾ ಚಿಂತನೆ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:ಮಂಗಳೂರು: ಕನಸಿನಿಂದ ಪತ್ತೆಯಾಯ್ತು ನಶಿಸಿ ಹೋದ ದೇವಸ್ಥಾನ, ಸ್ಥಳ ಬಿಟ್ಟು ಕೊಟ್ಟ ಮುಸ್ಲಿಂ ವ್ಯಕ್ತಿ

ನ.7 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲಿನಲ್ಲಿ ಮುಸ್ಲಿಂ ಧರ್ಮದ ವ್ಯಕ್ತಿಗೆ ಸೇರಿದ ಕೃಷಿ ಜಮೀನಿನಲ್ಲಿ ದೇವಾಲಯ ಇರುವ ಬಗ್ಗೆ ವ್ಯಕ್ತಿಯೊಬ್ಬರಿಗೆ ಕನಸು ಬಿದ್ದಿತ್ತು. ಅದರಂತೆ ಜೆಸಿಬಿ ಮೂಲಕ ಜಮೀನು ಅಗೆದಾಗ ನಶಿಸಿ ಹೋಗಿದ್ದ ನೂರಾರು ವರ್ಷಗಳ ಹಿಂದಿನ ಗೋಪಾಲಕೃಷ್ಣ ದೇವರ ವಿಗ್ರಹ ಪತ್ತೆಯಾಗಿತ್ತು. ಹೀಗಾಗಿ ಮುಸ್ಲಿಂ ವ್ಯಕ್ತಿ ತನ್ನ ವಶದಲ್ಲಿದ್ದ ಜಮೀನನ್ನು ದೇವಸ್ಥಾನಕ್ಕೆ ಬಿಟ್ಟುಕೊಟ್ಟಿದ್ದರು. ಇದೀಗ ಮತ್ತೊಮ್ಮೆ ಪ್ರಶ್ನೆ ಇಟ್ಟಿದ್ದು, ನಾಗ ಸಾನಿಧ್ಯದ ಸುಳಿವು ಸಿಕ್ಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 pm, Wed, 22 November 23

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​