AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಟೋಲ್ ಶುಲ್ಕ ಹೆಚ್ಚಳ; ಜುಲೈ 1ರಿಂದ ಜಾರಿ

ದ್ವಿಚಕ್ರ ವಾಹನಕ್ಕೆ 20 ರೂ. ನಿಗದಿಯಾಗಿದ್ದು, ಹಿಂತಿರುಗಿ ಬರುವುದಕ್ಕೆ (ಟು ಸೈಡ್) 30 ರೂ. ಶುಲ್ಕ ನಿಗದಿಯಾಗಿದೆ. ಕಾರು, ಜೀಪ್, ವ್ಯಾನ್​ಗಳಿಗೆ 50 ರೂ. ಮತ್ತು ಹಿಂತಿರುಗಿ ಬರುವುದಕ್ಕೆ 80 ರೂ. ಶುಲ್ಕ ನಿಗದಿಯಾಗಿದೆ. ಮಿನಿ ಬಸ್, ಲುಘು ವಾಹನಕ್ಕೆ 80 ರೂ. ವಾಪಸ್ ಬಂದರೆ 110 ರೂ. ಚಾರ್ಜ್ ಮಾಡಲಾಗುತ್ತದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಟೋಲ್ ಶುಲ್ಕ ಹೆಚ್ಚಳ; ಜುಲೈ 1ರಿಂದ ಜಾರಿ
ಟೋಲ್​ ಲೇನ್​ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: sandhya thejappa

Updated on: Jun 24, 2021 | 9:12 AM

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ರಸ್ತೆ ಬಳಕೆ ಶುಲ್ಕ (ಟೋಲ್) ಹೆಚ್ಚಳವಾಗಿದ್ದು, ಜುಲೈ ಒಂದರಿಂದಲೇ ಪರಿಷ್ಕೃತ ಶುಲ್ಕ ಜಾರಿಯಾಗಲಿದೆ. ಎಲೆಕ್ಟ್ರಾನಿಕ್ ಸಿಟಿ ಮತ್ತು ಅತ್ತಿಬೆಲೆ ರಸ್ತೆ ಬಳಕೆ ಶುಲ್ಕ ಹೆಚ್ಚಳವಾದ ಹಿನ್ನೆಲೆ ವಾಹನ ಸವಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಟೋಲ್ ಇರುವ ಸುತ್ತಮುತ್ತಲೂ ಐಟಿ ಕಂಪನಿಗಳು, ಹಲವು ಕಾರ್ಖಾನೆಗಳು ಇವೆ. ಕೆ.ಆರ್ ಮಾರ್ಕೆಟ್​ನ ಸಿಂಗಸಂದ್ರಕ್ಕೆ ಸ್ಥಳಾಂತರಿಸಲಾಗಿದೆ. ತರಕಾರಿ ವ್ಯಾಪಾರಿಗಳಿಗೆ ಟೋಲ್ ರಸ್ತೆಯನ್ನೇ ಬಳಸಿ ಹೋಗಬೇಕಾದ ಅನಿವಾರ್ಯ ಎದುರಾಗಿದ್ದು, ಕೂಡಲೇ ಟೋಲ್ ಶುಲ್ಕ ಹೆಚ್ಚಳ ಸಂಬಂಧ ಸರ್ಕಾರ ಮಧ್ಯಸ್ಥಿಕೆ ವಹಿಸಲು ರೈತರು ಆಗ್ರಹಿಸಿದ್ದಾರೆ.

ದ್ವಿಚಕ್ರ ವಾಹನಕ್ಕೆ 20 ರೂ. ನಿಗದಿಯಾಗಿದ್ದು, ಹಿಂತಿರುಗಿ ಬರುವುದಕ್ಕೆ (ಟು ಸೈಡ್) 30 ರೂ. ಶುಲ್ಕ ನಿಗದಿಯಾಗಿದೆ. ಕಾರು, ಜೀಪ್, ವ್ಯಾನ್​ಗಳಿಗೆ 50 ರೂ. ಮತ್ತು ಹಿಂತಿರುಗಿ ಬರುವುದಕ್ಕೆ 80 ರೂ. ಶುಲ್ಕ ನಿಗದಿಯಾಗಿದೆ. ಮಿನಿ ಬಸ್, ಲುಘು ವಾಹನಕ್ಕೆ 80 ರೂ. ವಾಪಸ್ ಬಂದರೆ 110 ರೂ. ಚಾರ್ಜ್ ಮಾಡಲಾಗುತ್ತದೆ. ಬಸ್, ಗೂಡ್ಸ್​ಗೆ 145 ರೂ. ಹಿಂತಿರುಗಿ ಬಂದರೆ 220 ರೂ. ಟೋಲ್ ದರ ಫಿಕ್ಸ್ ಆಗಿದೆ.

ಭಾರಿ ವಾಹನಕ್ಕೆ 295 ರೂ. ಹಾಗೂ ಹಿಂತಿರುಗಿ ಬಂದರೆ 440 ರೂ. ಟೋಲ್ ಚಾರ್ಜ್ ದರ ನಿಗದಿಯಾಗಿದೆ. ವಾಹನಗಳ ಮಾಸಿಕ ಪಾಸ್​ನಲ್ಲಿ ಟೋಲ್ ಶುಲ್ಕ ಭಾರಿ ಹೆಚ್ಚಳವಾಗಿದ್ದು, ಶೇಕಡಾ 75ರಿಂದ 80ರಷ್ಟು ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ತಿಂಗಳ ಪಾಸ್ ದರ 625 ರೂಪಾಯಿ, ಕಾರು, ಜೀಪ್, ವ್ಯಾನ್ಸ್​ಗೆ ಟೋಲ್​ನ ಮಾಸಿಕ ಪಾಸ್ ದರ 1,570 ರೂ. ಲಘು ವಾಹನಗಳಿಗೆ 4,390 ರೂ. ಟ್ರಕ್, ಬಸ್​ಗಳಿಗೆ ತಿಂಗಳ ಪಾಸ್ ದರ 4,390 ರೂ. ಭಾರಿ ವಾಹನಗಳ ತಿಂಗಳ ಪಾಸ್ ದರ 8,780 ರೂ. ಆಗಿದೆ.

ಇದನ್ನೂ ಓದಿ

ರಿಲ್ಯಾಕ್ಸ್ ಆಗಲು ಕುಟುಂಬ ಸಮೇತ ರೆಸಾರ್ಟ್ಗೆ ಹೋಗಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ರಾತ್ರೋರಾತ್ರಿ ಬೆಂಗಳೂರಿಗೆ ವಾಪಸ್

Gold Rate Today: ಚಿನ್ನ, ಬೆಳ್ಳಿ ಖರೀದಿಸುವ ಆಸೆ ಇದ್ದರೆ ಇಂದಿನ ದರ ವಿವರ ಗಮನಿಸಿ

(Bengalore Electronic City toll fee has been increased and will come into effect from July 1st)

ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್