AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು; ಕೊರೊನಾ ಗೆದ್ದ 103ರ ಶತಾಯುಷಿ ಅಜ್ಜ

ಬೆಂಗಳೂರಿನ ಶಾಂತಿನಗರದ ನಿವಾಸಿ ಶರಣಯ್ಯ ಎಂಬ 103 ವರ್ಷದ ವೃದ್ಧ ಕೊರೊನಾದಿಂದ ಗುಣಮುಖರಾಗಿದ್ದಾರೆ. ಈ ಬಗ್ಗೆ ಕೊರೊನಾ ಗೆದ್ದ ಅಜ್ಜ ಕೆಲ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು; ಕೊರೊನಾ ಗೆದ್ದ 103ರ ಶತಾಯುಷಿ ಅಜ್ಜ
ಕೊರೊನಾ ಗೆದ್ದ ಶರಣಯ್ಯ
ಆಯೇಷಾ ಬಾನು
|

Updated on: May 27, 2021 | 1:41 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಇಡೀ ದೇಶವನ್ನೇ ನಲುಗುವಂತೆ ಮಾಡಿದೆ. ಅದರಲ್ಲೂ ಕೊರೊನಾ ಸೋಂಕಿಗೆ ಕಡಿಮೆ ವಯಸ್ಸಿನ ಯುವಕರು ಬಲಿಯಾಗುತ್ತಿದ್ದಾರೆ. ಇದರ ನಡುವೆ 103 ವರ್ಷದ ಶತಾಯುಷಿ ಅಜ್ಜ ಕೊರೊನಾ ವಿರುದ್ಧ ಹೋರಾಡಿ ಗೆದ್ದಿದ್ದಾರೆ.

ಮಹಾಮಾರಿ ಕೊರೊನಾ ಎರಡನೇ ಅಲೆಯಲ್ಲಿ ಯುವಕರು ಉಸಿರಾಟದ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಕೊರೊನಾ ವಿರುದ್ಧ ಹೋರಾಡಲಾಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೊರೊನಾ 2ನೆ ಅಲೆ ಅನೇಕ ಸಾವು-ನೋವುಗಳಿಗೆ ಕಾರಣವಾಗಿದೆ. ಆದರೆ ಇದರ ನಡುವೆ ಒಂದು ಸಂತೋಷಕರ ಸಂಗತಿ ವರದಿಯಾಗಿದೆ. ಕೊರೊನಾದಿಂದ 103 ವರ್ಷದ ವೃದ್ಧ ಗುಣಮುಖರಾಗಿದ್ದಾರೆ.

ಬೆಂಗಳೂರಿನ ಶಾಂತಿನಗರದ ನಿವಾಸಿ ಶರಣಯ್ಯ ಎಂಬ 103 ವರ್ಷದ ವೃದ್ಧ ಕೊರೊನಾದಿಂದ ಗುಣಮುಖರಾಗಿದ್ದಾರೆ. ಈ ಬಗ್ಗೆ ಕೊರೊನಾ ಗೆದ್ದ ಅಜ್ಜ ಕೆಲ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ಗೆಲ್ಲಲು ಮೊದಲು ಧೈರ್ಯ ಬೇಕು. ಆರೋಗ್ಯ ಸರಿಯಾಗುತ್ತೆ ಎಂಬ ನಂಬಿಕೆ ಇರಬೇಕು ಎಂದು ಸಂದೇಶ ನೀಡಿದ್ದಾರೆ.

ನನ್ನ ಅಳಿಯ ಮತ್ತು ಮಗಳಿಂದ ನನಗೆ ಕೊರೊನಾ ಬಂತು. ನನಗೆ 15 ದಿನಗಳ ಕಾಲ ತುಂಬಾ ಕಷ್ಟವಾಯಿತು. ತಲೆ ನೋವು, ಮೈಕೈ ನೋವು, ಜ್ವರ ತುಂಬಾ ಇತ್ತು. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದರಿಂದ ಗುಣಮುಖನಾದೆ. ನಾನು ಗುಣಮುಖನಾಗಿದ್ದೇನೆಂದು ಉದಾಸೀನ ಮಾಡಿಲ್ಲ. ಮನೆಯಿಂದ ಹೊರಗೆ ಬರದೆ ಎಚ್ಚರಿಕೆ ವಹಿಸುತ್ತೇನೆ. ನಾನು ಹೆಚ್ಚಾಗಿ ಅನ್ನ, ತಿಳಿ ಸಾಂಬಾರ್, ತರಕಾರಿ ತಿನ್ನುತ್ತಿದ್ದೆ. ಸಮಯ ಕಳೆಯಲು ದೇವರಿಗೆ ಪೂಜೆ ಮಾಡುತ್ತಿದ್ದೆ ಎಂದು ಕೊರೊನಾದಿಂದ ಗುಣಮುಖರಾದ 103 ವರ್ಷದ ವೃದ್ಧ ತಿಳಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ: ಒಬ್ಬರಿಗೊಬ್ಬರು ಧೈರ್ಯ ತುಂಬುತ್ತ ಕೊರೊನಾ ಗೆದ್ದು ಬೀಗಿದ ಒಂದೇ ಕುಟುಂಬದ ಸದಸ್ಯರು

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್