AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS, ಬಜರಂಗದಳ ವಿರುದ್ಧ ಟೀಕೆ: ಸಿದ್ದರಾಮಯ್ಯಗೆ ನೋಟಿಸ್ ನೀಡಿದ ಕೋರ್ಟ್!

ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್​​ ಎಸ್​​ ಎಸ್​ ಹಾಗೂ ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರು. ಇದಕ್ಕೆ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಇದೀಗ ಈ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲವು ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದೆ.

RSS, ಬಜರಂಗದಳ ವಿರುದ್ಧ ಟೀಕೆ: ಸಿದ್ದರಾಮಯ್ಯಗೆ ನೋಟಿಸ್ ನೀಡಿದ ಕೋರ್ಟ್!
ಸಿಎಂ ಸಿದ್ದರಾಮಯ್ಯ
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on: Jun 18, 2025 | 8:03 PM

Share

ಬೆಂಗಳೂರು, (ಜೂನ್ 18): ರಾಷ್ಟ್ರೀಯ ಸ್ವಯಂ ಸೇವಾ ಸಂಘ ಹಾಗೂ ಬಜರಂಗದಳ (RSS And bajarangadala) ವಿರುದ್ಧ ಸದನದಲ್ಲೇ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯಗೆ (Siddaramaiah) ಇದೀಗ ಸಂಕಷ್ಟ ಎದುರಾಗಿದೆ. ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ ಎಸ್​​ ಎಸ್​ ಮತ್ತು ಬಜರಂಗದಳದಿಂದ ಸಿಎಂ ಸಿದ್ದರಾಮಯ್ಯ ಸದನದಲ್ಲೇ ಬಹಿರಂಗವಾಗಿ ಟೀಕಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು (Bengaluru 42th ACJM Court) ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ಜಾಡಿ ಮಾಡಿದ್ದು, ಜೂನ್ 26ರೊಳಗೆ ಕೋರ್ಟ್ ನೋಟಿಸ್​ ಗೆ ಉತ್ತರಿಸಬೇಕಿದೆ.

‘ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ RSS, ಬಜರಂಗದಳದಿಂದ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸದನದಲ್ಲಿ ಅಲ್ಲೋಲ ಕಲ್ಲೋಲವೇ ಆಗಿತ್ತು. ಬಿಜೆಪಿ ಶಾಸಕರು ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ವಾಗ್ದಾಳಿ ನಡೆಸಿದ್ದರು.

ಅಲ್ಲದೇ ಜನರ ಭಾವನೆಗಳಿಗೆ ಧಕ್ಕೆ ಆರೋಪದಡಿ ಕಿರಣ್ ಎನ್ನುವರು ಸಿದ್ದರಾಮಯ್ಯ ವಿರುದ್ಧ ಕೋರ್ಟ್​ ನಲ್ಲಿ ಪ್ರಕರಣ ದಾಖಲಿಸಿದ್ದರು. ಆದ್ರೆ, ಕೋರ್ಟ್, ಈ ಕೇಸ್ ದಾಖಲಿಸಿಕೊಳ್ಳುವ ಮುನ್ನ ಸಿಎಂ ಸಿದ್ದರಾಮಯ್ಯನವರ ವಾದ ಆಲಿಸಲು ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಬಿಎನ್ ಎಸ್ಎಸ್ ಸೆಕ್ಷನ್ 223 ಅಡಿಯಲ್ಲಿ ಸಿದ್ದರಾಮಯ್ಯಗೆ ನೋಟಿಸ್ ನೀಡಿದ್ದು, ಜೂನ್ 26ರೊಳಗೆ ಕೋರ್ಟ್ ನೋಟಿಸ್ ಗೆ ಉತ್ತರಿಸಬೇಕಿದೆ.