AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಣಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಟಿವಿ9 ಹೊರತುಪಡಿಸಿ ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಕೋರ್ಟ್ ನಿರ್ಬಂಧ

ರೋಹಿಣಿ ಸಿಂಧೂರಿ ವಿರುದ್ಧದ ಮಾನಹಾನಿಕರ ಹೇಳಿಕೆಗೆ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಇದರಿಂದ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ಸಿಕ್ಕಿದೆ. 

ರೋಹಿಣಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಟಿವಿ9 ಹೊರತುಪಡಿಸಿ ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಕೋರ್ಟ್ ನಿರ್ಬಂಧ
ರೋಹಿಣಿ ಸಿಂಧೂರಿ , ಡಿ. ರೂಪಾ ಮೌದ್ಗಿಲ್
TV9 Web
| Edited By: |

Updated on:Feb 23, 2023 | 5:06 PM

Share

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ(Rohini Sindhuri) ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ TV9 ಹೊರತುಪಡಿಸಿ ಐಪಿಎಸ್ ಅಧಿಕಾರಿ ಡಿ.ರೂಪಾ (D Roopa Moudgil) ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿ ಇಂದು(ಫೆಬ್ರುವರಿ 23) ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ಆದಶ ಹೊರಡಿಸಿದೆ.  Caveat ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಟಿವಿ9 ಹೊರತುಪಡಿಸಿ  ರೂಪಾ ಸೇರಿ ಇನ್ನುಳಿದಂತೆ ಎಲ್ಲಾ ಪ್ರತಿವಾದಿಗಳಿಗೆ ರೋಹಿಣಿ ವಿರುದ್ಧ ಮಾನಹಾನಿಕರ, ಆಧಾರರಹಿತ ಹೇಳಿಕೆ ನೀಡದಂತೆ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.  ಈ ಬಗ್ಗೆ ಕೋರ್ಟ್, ಟಿವಿ9 ಹೊರತುಪಡಿಸಿ ಎಲ್ಲಾ ಪ್ರತಿವಾದಿಗಳಿಗೂ ನೋಟಿಸ್ ಜಾರಿ ಮಾಡಿದೆ. ಇದರಿಂದ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ: Rohini Vs Roopa: ರೂಪಾ ವಿರುದ್ಧ ಕೋರ್ಟ್​​​​ಗೆ ರೋಹಿಣಿ ಸಿಂಧೂರಿ ಅರ್ಜಿ, ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಇನ್ನು ರೋಹಿಣಿ ಸಿಂಧೂರಿ ಅರ್ಜಿಗೆ ಆಕ್ಷೇಪ ಸಲ್ಲಿಸಲು ಐಪಿಎಸ್ ಡಿ ರೂಪಾ ಮೌದ್ಗಿಲ್ ಅವರಿಗೂ ಕೋರ್ಟ್​ ಕಾಲವಕಾಶ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿದೆ.  ಮಾನಹಾನಿಕರ ಹಾಗೂ ಆರೋಪಗಳನ್ನು ಮಾಡದಂತೆ ನಿರ್ಬಂಧಕಾಜ್ಞೆ ನೀಡಲು ರೋಹಿಣಿ ಸಿಂಧೂರಿ ಅವರು ಕೋರ್ಟ್​ಗೆ ಮನವಿ ಮಾಡಿದ್ದರು. ಇದರಲ್ಲಿ ರೂಪಾ ಸೇರಿದಂತೆ ಎಲ್ಲಾ ಮಾಧ್ಯಗಳನ್ನು ಪ್ರತಿವಾದಿಯನ್ನಾಗಿ ಮಾಡಿದ್ದರು.  ನಿನ್ನೆ (ಫೆಬ್ರುವರಿ 22) ಕೋರ್ಟ್ ಅರ್ಜಿ ವಿಚಾರಣೆ ನಡೆಸಿ ತೀರ್ಪನ್ನು ಫೆ.23ಕ್ಕೆ ಕಾಯ್ದಿರಿಸಿತ್ತು.  ಇದೀಗ ಕೋರ್ಟ್ ಟಿವಿ9 ಹೊರತುಪಡಿಸಿ ಎಲ್ಲಾ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿ ಆದೇಶಿಸಿ ಮುಂದಿನ ವಿಚಾರಣೆ ಮಾರ್ಚ 7ಕ್ಕೆ ಮುಂದೂಡಿದೆ.

Published On - 4:50 pm, Thu, 23 February 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ