AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus: ಬೆಂಗಳೂರಿನ ವಸತಿ ಸಮುಚ್ಛಯದಲ್ಲಿ ಪಾರ್ಟಿ ನಡೆದ ನಂತರ 100ಕ್ಕಿಂತಲೂ ಹೆಚ್ಚು ಮಂದಿಗೆ ಕೊವಿಡ್

Covid 19: ಬಿಳೇಕಹಳ್ಳಿ ಪ್ರದೇಶದಲ್ಲಿ ದಿಢೀರನೆ ಕೊವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಫೆಬ್ರವರಿ 11ಕ್ಕೆ 7 ಪ್ರಕರಣಗಳು ವರದಿಯಾಗಿದ್ದು, ಫೆಬ್ರವರಿ 12ಕ್ಕೆ 17 ಪ್ರಕರಣಗಳು ವರದಿಯಾಗಿವೆ.

Coronavirus: ಬೆಂಗಳೂರಿನ ವಸತಿ ಸಮುಚ್ಛಯದಲ್ಲಿ ಪಾರ್ಟಿ ನಡೆದ ನಂತರ 100ಕ್ಕಿಂತಲೂ ಹೆಚ್ಚು ಮಂದಿಗೆ ಕೊವಿಡ್
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Feb 16, 2021 | 8:02 PM

Share

ಬೆಂಗಳೂರು: ದಕ್ಷಿಣ ಬೆಂಗಳೂರಿನ ಬಿಳೇಕಹಳ್ಳಿ ಪ್ರದೇಶದಲ್ಲಿರುವ ಎಸ್ಎನ್ಎನ್ ರಾಜ್ ಲೇಕ್ ವ್ಯೂ ಅಪಾರ್ಟ್​ಮೆಂಟ್​ನಲ್ಲಿ ವಾಸಿಸುತ್ತಿರುವ 103 ಮಂದಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿದೆ. ಈ ವಸತಿ ಸಮುಚ್ಛಯದಲ್ಲಿ ವಿವಾಹ ವಾರ್ಷಿಕೋತ್ಸವದ ಎರಡು ಪಾರ್ಟಿ ನಡೆದಿತ್ತು. ಇದಾಗಿ ಕೆಲವೇ ದಿನಗಳಲ್ಲಿ ಇಲ್ಲಿನ ನಿವಾಸಿಗಳನ್ನು ಕೊವಿಡ್ ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು ಎಂದು ಜಲ್ಲಾಡಳಿತದ ಅಧಿಕಾರಿಗಳು ಹೇಳಿದ್ದಾರೆ.

ಈ ಪ್ರದೇಶದಲ್ಲಿ ದಿಢೀರನೆ ಕೊವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಫೆಬ್ರವರಿ 11ಕ್ಕೆ 7 ಪ್ರಕರಣಗಳು ವರದಿಯಾಗಿದ್ದು, ಫೆಬ್ರವರಿ 12ಕ್ಕೆ 17 ಪ್ರಕರಣಗಳು ವರದಿಯಾಗಿವೆ. ಫೆಬ್ರವರಿ 13ಕ್ಕೆ ಬಿಬಿಎಂಪಿ ಅಧಿಕಾರಿಗಳು ಆ ವಸತಿ ಸಮುಚ್ಛಯಕ್ಕೆ ಹೋಗಿ 339 ಮನೆಗಳಲ್ಲಿ ಸೋಂಕು ಪರೀಕ್ಷೆ ನಡೆಸಿದ್ದಾರೆ. ಒಟ್ಟು 1,190 ಮಂದಿಯನ್ನು ಪರೀಕ್ಷೆಗೊಳಪಡಿಸಿದ್ದು 103 ಮಂದಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆಬ್ರವರಿ 6 ಮತ್ತು 7ನೇ ತಾರೀಖಿಗೆ ಇಲ್ಲಿ ಎರಡು ಪಾರ್ಟಿ ನಡೆದಿತ್ತು ಎಂದು ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ:  BBMP ಬೆಂಗಳೂರಲ್ಲಿ ಮತ್ತೆ ಕೊರೊನಾ ಹಾವಳಿ: ಕಾವಲ್‌ಭೈರಸಂದ್ರದಲ್ಲಿ 40 ಕೇಸ್​, ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ಸೋಂಕು ದೃಢ

ಸೋಂಕು ದೃಢಪಟ್ಟವರಲ್ಲಿ ಹೆಚ್ಚಿನವರು 50ವರ್ಷದ ಕೆಳಗಿನವರಾಗಿದ್ದು ಯಾವುದೇ ರೋಗ ಲಕ್ಷಣಗಳಿರಲಿಲ್ಲ ಎಂದು ವೈದ್ಯಕೀಯ ಅಧಿಕಾರಿ ಡಾ.ಕೃಷ್ಣಪ್ಪ ಹೇಳಿದ್ದಾರೆ. ಆ ಅಪಾರ್ಟ್ ಮೆಂಟ್ ಸಂಪೂರ್ಣವಾಗಿ ಸ್ಯಾನಿಟೈಜ್ ಮಾಡಿದ್ದು ಮುಂದಿನ ಸೂಚನೆ ಲಭಿಸುವವರೆಗೆ ನಿವಾಸಿಗಳು ಮನೆಯಲ್ಲಿಯೇ ಐಸೋಲೇಷನ್ ಆಗಿರುವಂತೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತ ಬೊಮ್ಮನಹಳ್ಳಿ ರಾಮಕೃಷ್ಣ ಹೇಳಿದ್ದಾರೆ.

ಕಳೆದ ವರ್ಷ ದಿನಕ್ಕೆ ಒಂದು ಲಕ್ಷ ಪ್ರಕರಣ ದಾಖಲಾಗುತ್ತಿತ್ತು ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿದಿನ 10,000 ಕ್ಕಿಂತಲೂ ಕಡಿಮೆ ಪ್ರಕರಣಗಳು ವರದಿಯಾಗುತ್ತಿವೆ. ಕೇರಳದಲ್ಲಿ ಅತೀ ಹೆಚ್ಚು ಸೋಂಕಿತರಿದ್ದು, ಮಹಾರಾಷ್ಟ್ರ ಎರಡನೇ ಸ್ಥಾನ, ಕರ್ನಾಟಕ ಮೂರನೇ ಸ್ಥಾನದಲ್ಲಿದೆ.

Published On - 7:56 pm, Tue, 16 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ