AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿದೆ ಮಾಹಿತಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು ನವೆಂಬರ್ 1 ರಿಂದ B ಖಾತಾದಿಂದ A ಖಾತೆಗೆ ಪರಿವರ್ತಿಸಲು ಅವಕಾಶ ನೀಡಿದೆ. ಆ ಮೂಲಕ ಆಸ್ತಿ ಮಾಲೀಕರಿಗೆ ಅನುಕೂಲವಾಗಲಿದೆ. ಆನ್‌ಲೈನ್ ಮೂಲಕ ಸುಲಭವಾಗಿ ಎ ಖಾತಾ ಪಡೆಯುವ ಪ್ರಕ್ರಿಯೆ ಮತ್ತು ಅದರ ಹಂತಗಳನ್ನು ಸಂಪೂರ್ಣವಾಗಿ ಇಲ್ಲಿ ವಿವರಿಸಲಾಗಿದೆ.

ಇಂದಿನಿಂದ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Nov 01, 2025 | 3:48 PM

Share

ಬೆಂಗಳೂರು, ನವೆಂಬರ್ 01: ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು (GBA) ಬಿ ಖಾತಾ (b khata) ಆಸ್ತಿಯನ್ನ ಎ ಖಾತಾಗೆ ಪರಿವರ್ತಿಸಲು ಅವಕಾಶ ನೀಡಿದೆ. ನವೆಂಬರ್‌ 1ರಿಂದ ಫೆಬ್ರವರಿ ಮೊದಲ ವಾರದವರೆಗೆ, ಅಂದರೆ 100 ದಿನಗಳ ಅಭಿಯಾನ ಆರಂಭಿಸಿದೆ. ಆ ಮೂಲಕ ಬಿ ಖಾತಾದಾರರು ತಮ್ಮ ಆಸ್ತಿಗಳಿಗೆ ಎ ಖಾತಾ ಪಡೆಯಲು ದಾರಿ ಮತ್ತಷ್ಟು ಸುಗಮವಾಗಿದೆ. ಇದೀಗ ಬಿ ಖಾತಾ ಇರುವವರು ಎ ಖಾತಾಗೆ ಪರಿವರ್ತಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಹಾಗಾದರೆ ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮಾಡಲು ಏನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ನಗರದಲ್ಲಿ ಸರಿಸುಮಾರು 25 ಲಕ್ಷಕ್ಕೂ ಹೆಚ್ಚು ಆಸ್ತಿ ಖಾತಾಗಳಿವೆ. ಈ ಪೈಕಿ 7.5 ಲಕ್ಷ ಆಸ್ತಿಗಳಿಗೆ ಬಿ ಖಾತಾ ಇದೆ. ಬಿ ಖಾತಾ ಆಸ್ತಿ ಮಾಲೀಕರು ಎದುರಿಸುತ್ತಿರುವ ಸಮಸ್ಯೆಗಳು ಅಷ್ಟಿಷ್ಟಲ್ಲ. ಮುಖ್ಯವಾಗಿ ಬ್ಯಾಂಕ್​ಗಳಲ್ಲಿ ಸಾಲ ಕೂಡ ಸಿಗುತ್ತಿಲ್ಲ. ಬಿ ಖಾತಾ ಸೈಟ್ ಮಾಲೀಕರಿಗೆ ಕಟ್ಟಡ ಯೋಜನೆ ಅನುಮೋದನೆ ಸಿಗಲ್ಲ. ಹೀಗಾಗಿ ಈ ಎಲ್ಲಾ ಸಮಸ್ಯೆಗಳನ್ನು ನಿವಾರಿಸಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು ಖಾತಾ ಪರಿವರ್ತನೆಗೆ ಅವಕಾಶ ಮಾಡಿಕೊಟ್ಟಿದೆ.

ಆನ್‌ಲೈನ್‌ನಲ್ಲಿ ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಹೇಗೆ?

  • ಮೊದಲು https://bbmp.karnataka.gov.in/BtoAKhata ವೆಬ್​ಸೈಟ್​ಗೆ ಭೇಟಿ ನೀಡಿ.
  • ಮೊಬೈಲ್ ನಂಬರ್, ಕ್ಯಾಪ್ಚಾ ಮತ್ತು ಓಟಿಪಿ ನಮೂದಿಸಿ.
  • ಲಾಗಿನ್​​ ಆದ ಬಳಿಕ ಬಿ-ಖಾತೆಯಿಂದ ಎ-ಖಾತೆ ಪರಿವರ್ತನೆ ಮತ್ತು ಒಂದೇ ಪ್ಲಾಟ್ ಅನುಮೋದನೆಯ ಮೂಲಕ ಸೈಟ್‌ಗಳಿಗೆ ಹೊಸ ಎ-ಖಾತೆ ಎಂಬ ಆಯ್ಕೆ ಕಾಣಿಸುತ್ತದೆ.
  • ಹೊಸದಾಗಿ ವಿನಂತಿ ಕೊಡಿ ಮತ್ತು ಪರಿವರ್ತಿಸಬೇಕಾದ ಖಾತೆ ಐಡಿಯನ್ನು ನಮೂದಿಸಿ. ಫೆಚ್​​ ಮೇಲೆ ಕ್ಲಿಕ್ ಮಾಡಿ.
  • ಸೈಟ್ ಮಾಲೀಕರ ಆಧಾರ್ ದೃಢೀಕರಣ ಮಾಡಬೇಕು. ಜೊತೆಗೆ ಇ-ಕೆವೈಸಿ ಕೂಡ ಪರಿಶೀಲನೆ ಮಾಡಿ.
  • ಪ್ಲಾಟ್ ಸರ್ವೆ ಸಂಖ್ಯೆಗೆ ಸಂಬಂಧಿಸಿದ ವಿವರಗಳನ್ನು ಭರ್ತಿ ಮಾಡಿ.
  • ಕೃಷಿಯಿಂದ ಕೃಷಿಯೇತರಕ್ಕೆ ಡಿಸಿ ಪರಿವರ್ತನೆ ಆದೇಶವನ್ನು ನಮೂದಿಸಿ.
  • ಆಸ್ತಿಯ ಪ್ರಕಾರವನ್ನು ಆಯ್ಕೆ ಮಾಡಿ ಮತ್ತು ಕಟ್ಟಡದ ರೇಖಾಚಿತ್ರವನ್ನು ಅಪ್‌ಲೋಡ್ ಮಾಡಿ.
  • ಮಾರ್ಗ, ರಸ್ತೆಗಳು ಅಥವಾ ಹತ್ತಿರದ ರಸ್ತೆಗಳಿಗೆ ಸಂಬಂಧಿಸಿದ ಇತರ ದಾಖಲೆಗಳು ಮತ್ತು ವಿವರಗಳನ್ನು ಅಪ್‌ಲೋಡ್ ಮಾಡಿ.
  • ನಿರ್ದಿಷ್ಟ ಆಸ್ತಿಗೆ ಸಂಬಂಧಿಸಿದಂತೆ ಒಬ್ಬರಿಗಿಂತ ಹೆಚ್ಚು ಮಾಲೀಕರಿದ್ದರೆ, ಇತರ ಮಾಲೀಕರ ಇ-ಕೆವೈಸಿ, ಫೋನ್ ನಂಬರ್​ ಪರಿಶೀಲನೆ ಮಾಡಿ, ಬಳಿಕ ಪ್ಲಾಟ್ ವಿವರಗಳನ್ನು ನಮೂದಿಸಿ.
  • ಅರ್ಜಿಯನ್ನು ಸಲ್ಲಿಸಿ ಮತ್ತು ಹಣ ಪಾವತಿಸಿ.
  • ಬಳಿಕ ಡ್ಯಾಶ್‌ಬೋರ್ಡ್‌ನಿಂದ ಸ್ವೀಕೃತಿ ಸ್ಲಿಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:25 pm, Sat, 1 November 25

Follow Us
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ