AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿದೆ ಮಾಹಿತಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು ನವೆಂಬರ್ 1 ರಿಂದ B ಖಾತಾದಿಂದ A ಖಾತೆಗೆ ಪರಿವರ್ತಿಸಲು ಅವಕಾಶ ನೀಡಿದೆ. ಆ ಮೂಲಕ ಆಸ್ತಿ ಮಾಲೀಕರಿಗೆ ಅನುಕೂಲವಾಗಲಿದೆ. ಆನ್‌ಲೈನ್ ಮೂಲಕ ಸುಲಭವಾಗಿ ಎ ಖಾತಾ ಪಡೆಯುವ ಪ್ರಕ್ರಿಯೆ ಮತ್ತು ಅದರ ಹಂತಗಳನ್ನು ಸಂಪೂರ್ಣವಾಗಿ ಇಲ್ಲಿ ವಿವರಿಸಲಾಗಿದೆ.

ಇಂದಿನಿಂದ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Nov 01, 2025 | 3:48 PM

Share

ಬೆಂಗಳೂರು, ನವೆಂಬರ್ 01: ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು (GBA) ಬಿ ಖಾತಾ (b khata) ಆಸ್ತಿಯನ್ನ ಎ ಖಾತಾಗೆ ಪರಿವರ್ತಿಸಲು ಅವಕಾಶ ನೀಡಿದೆ. ನವೆಂಬರ್‌ 1ರಿಂದ ಫೆಬ್ರವರಿ ಮೊದಲ ವಾರದವರೆಗೆ, ಅಂದರೆ 100 ದಿನಗಳ ಅಭಿಯಾನ ಆರಂಭಿಸಿದೆ. ಆ ಮೂಲಕ ಬಿ ಖಾತಾದಾರರು ತಮ್ಮ ಆಸ್ತಿಗಳಿಗೆ ಎ ಖಾತಾ ಪಡೆಯಲು ದಾರಿ ಮತ್ತಷ್ಟು ಸುಗಮವಾಗಿದೆ. ಇದೀಗ ಬಿ ಖಾತಾ ಇರುವವರು ಎ ಖಾತಾಗೆ ಪರಿವರ್ತಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಹಾಗಾದರೆ ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮಾಡಲು ಏನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ನಗರದಲ್ಲಿ ಸರಿಸುಮಾರು 25 ಲಕ್ಷಕ್ಕೂ ಹೆಚ್ಚು ಆಸ್ತಿ ಖಾತಾಗಳಿವೆ. ಈ ಪೈಕಿ 7.5 ಲಕ್ಷ ಆಸ್ತಿಗಳಿಗೆ ಬಿ ಖಾತಾ ಇದೆ. ಬಿ ಖಾತಾ ಆಸ್ತಿ ಮಾಲೀಕರು ಎದುರಿಸುತ್ತಿರುವ ಸಮಸ್ಯೆಗಳು ಅಷ್ಟಿಷ್ಟಲ್ಲ. ಮುಖ್ಯವಾಗಿ ಬ್ಯಾಂಕ್​ಗಳಲ್ಲಿ ಸಾಲ ಕೂಡ ಸಿಗುತ್ತಿಲ್ಲ. ಬಿ ಖಾತಾ ಸೈಟ್ ಮಾಲೀಕರಿಗೆ ಕಟ್ಟಡ ಯೋಜನೆ ಅನುಮೋದನೆ ಸಿಗಲ್ಲ. ಹೀಗಾಗಿ ಈ ಎಲ್ಲಾ ಸಮಸ್ಯೆಗಳನ್ನು ನಿವಾರಿಸಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು ಖಾತಾ ಪರಿವರ್ತನೆಗೆ ಅವಕಾಶ ಮಾಡಿಕೊಟ್ಟಿದೆ.

ಆನ್‌ಲೈನ್‌ನಲ್ಲಿ ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಹೇಗೆ?

  • ಮೊದಲು https://bbmp.karnataka.gov.in/BtoAKhata ವೆಬ್​ಸೈಟ್​ಗೆ ಭೇಟಿ ನೀಡಿ.
  • ಮೊಬೈಲ್ ನಂಬರ್, ಕ್ಯಾಪ್ಚಾ ಮತ್ತು ಓಟಿಪಿ ನಮೂದಿಸಿ.
  • ಲಾಗಿನ್​​ ಆದ ಬಳಿಕ ಬಿ-ಖಾತೆಯಿಂದ ಎ-ಖಾತೆ ಪರಿವರ್ತನೆ ಮತ್ತು ಒಂದೇ ಪ್ಲಾಟ್ ಅನುಮೋದನೆಯ ಮೂಲಕ ಸೈಟ್‌ಗಳಿಗೆ ಹೊಸ ಎ-ಖಾತೆ ಎಂಬ ಆಯ್ಕೆ ಕಾಣಿಸುತ್ತದೆ.
  • ಹೊಸದಾಗಿ ವಿನಂತಿ ಕೊಡಿ ಮತ್ತು ಪರಿವರ್ತಿಸಬೇಕಾದ ಖಾತೆ ಐಡಿಯನ್ನು ನಮೂದಿಸಿ. ಫೆಚ್​​ ಮೇಲೆ ಕ್ಲಿಕ್ ಮಾಡಿ.
  • ಸೈಟ್ ಮಾಲೀಕರ ಆಧಾರ್ ದೃಢೀಕರಣ ಮಾಡಬೇಕು. ಜೊತೆಗೆ ಇ-ಕೆವೈಸಿ ಕೂಡ ಪರಿಶೀಲನೆ ಮಾಡಿ.
  • ಪ್ಲಾಟ್ ಸರ್ವೆ ಸಂಖ್ಯೆಗೆ ಸಂಬಂಧಿಸಿದ ವಿವರಗಳನ್ನು ಭರ್ತಿ ಮಾಡಿ.
  • ಕೃಷಿಯಿಂದ ಕೃಷಿಯೇತರಕ್ಕೆ ಡಿಸಿ ಪರಿವರ್ತನೆ ಆದೇಶವನ್ನು ನಮೂದಿಸಿ.
  • ಆಸ್ತಿಯ ಪ್ರಕಾರವನ್ನು ಆಯ್ಕೆ ಮಾಡಿ ಮತ್ತು ಕಟ್ಟಡದ ರೇಖಾಚಿತ್ರವನ್ನು ಅಪ್‌ಲೋಡ್ ಮಾಡಿ.
  • ಮಾರ್ಗ, ರಸ್ತೆಗಳು ಅಥವಾ ಹತ್ತಿರದ ರಸ್ತೆಗಳಿಗೆ ಸಂಬಂಧಿಸಿದ ಇತರ ದಾಖಲೆಗಳು ಮತ್ತು ವಿವರಗಳನ್ನು ಅಪ್‌ಲೋಡ್ ಮಾಡಿ.
  • ನಿರ್ದಿಷ್ಟ ಆಸ್ತಿಗೆ ಸಂಬಂಧಿಸಿದಂತೆ ಒಬ್ಬರಿಗಿಂತ ಹೆಚ್ಚು ಮಾಲೀಕರಿದ್ದರೆ, ಇತರ ಮಾಲೀಕರ ಇ-ಕೆವೈಸಿ, ಫೋನ್ ನಂಬರ್​ ಪರಿಶೀಲನೆ ಮಾಡಿ, ಬಳಿಕ ಪ್ಲಾಟ್ ವಿವರಗಳನ್ನು ನಮೂದಿಸಿ.
  • ಅರ್ಜಿಯನ್ನು ಸಲ್ಲಿಸಿ ಮತ್ತು ಹಣ ಪಾವತಿಸಿ.
  • ಬಳಿಕ ಡ್ಯಾಶ್‌ಬೋರ್ಡ್‌ನಿಂದ ಸ್ವೀಕೃತಿ ಸ್ಲಿಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:25 pm, Sat, 1 November 25

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್