AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪಾರ್ಟ್‌ಮೆಂಟ್​ನಲ್ಲಿ ಸಿಕ್ಕ ಅಸ್ಥಿಪಂಜರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರಿ‌ನ ಅಪಾರ್ಟ್‌ಮೆಂಟ್​ನಲ್ಲಿ ಪತ್ತೆಯಾಗಿದ್ದ ಅಸ್ಥಿಪಂಜರ ಪ್ರಕರಣದ ಬಗ್ಗೆ ಮಹತ್ವದ ವಿಚಾರಗಳು ಹೊರಬಿದ್ದಿವೆ. ಪುರುಷನ ಅಸ್ಥಿಪಂಜರದ ಪ್ರಾಥಮಿಕ ಪರೀಕ್ಷೆಯಲ್ಲಿ ಕೊಲೆಯಲ್ಲ ಎಂಬುದು ಗೊತ್ತಾಗಿದೆ. ಅಷ್ಟೇ ಅಲ್ಲದೆ, ಸುಮಾರು 2 ವರ್ಷ ಹಿಂದೆ ಮೃತಪಟ್ಟಿರುವ ಸುಳಿವೂ ದೊರೆತಿದೆ. ಹಾಗಾದರೆ, ಪ್ರಾಥಮಿಕ ವರದಿಯಲ್ಲಿ ಇನ್ನೂ ಏನೇನಿದೆ? ಅಸ್ಥಿಪಂಜರ ಯಾರದ್ದು ಎಂಬ ಪ್ರಶ್ನೆ ಉದ್ಭವಿಸಿದೆ. ಹೀಗಾಗಿ ನಾಪತ್ತೆ ಪ್ರಕರಣಗಳ ಸಂಬಂಧ ಪೊಲೀಸರು ತಲಾಶ್​​ಗೆ ಇಳಿದಿದ್ದಾರೆ.

ಬೆಂಗಳೂರು: ಅಪಾರ್ಟ್‌ಮೆಂಟ್​ನಲ್ಲಿ ಸಿಕ್ಕ ಅಸ್ಥಿಪಂಜರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jul 04, 2025 | 6:56 AM

Share

ಬೆಂಗಳೂರು, ಜುಲೈ 4: ಇಡೀ ಬೆಂಗಳೂರಿಗೆ(Bengaluru) ಶಾಕ್ ನೀಡಿದ್ದ ಬೇಗೂರು ಅಪಾರ್ಟ್‌ಮೆಂಟ್ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ (Apartment Skeleton Case) ಈಗ ದೊಡ್ಡ ತಿರುವು ದೊರೆತಿದೆ. ಖಾಸಗಿ ಆಸ್ಪತ್ರೆಯಲ್ಲಿ ನಡೆದ ಅಸ್ಥಿಪಂಜರದ ಪರೀಕ್ಷೆಯಲ್ಲಿ ಮಹತ್ವದ ವಿಚಾರಗಳು ಬೆಳಕಿಗೆ ಬಂದಿವೆ. ಪತ್ತೆಯಾಗಿರುವ ಅಸ್ಥಿಪಂಜರ ಪುರುಷನದ್ದು ಎಂದು ಗೊತ್ತಾದ ಬೆನ್ನಲ್ಲೇ ಅನೇಕ ಪರೀಕ್ಷೆಗಳನ್ನು‌ ನಡೆಸಲಾಯಿತು. ಈ ವೇಳೆ, ಮೂಳೆಗಳ ಮೇಲೆ ಯಾವುದೇ ಗಾಯದ ಗುರುತು ಪತ್ತೆಯಾಗದ ಹಿನ್ನೆಲೆ ಇದು ಕೊಲೆಯಲ್ಲ ಎಂಬ ವರದಿ ಬಂದಿದೆ.

ಅಸ್ಥಿಪಂಜರ ಪತ್ತೆಯಾದಗಿನಿಂದಲೂ ಕೊಲೆಯ ಅನುಮಾನ‌‌ ಹೆಚ್ಚಾಗಿತ್ತು. ಆದರೆ ಪ್ರಾಥಮಿಕ ಪರೀಕ್ಷೆಯಲ್ಲಿ, ಕೊಲೆಯಲ್ಲ ಎಂಬುದು ಗೊತ್ತಾಗಿದೆ.

ಅಸ್ಥಿಪಂಜರದ ಪ್ರಾಥಮಿಕ ಪರೀಕ್ಷೆಯಲ್ಲಿ ಪತ್ತೆಯಾದ ಅಂಶಗಳೇನು?

  • ಅಸ್ಥಿಪಂಜರ 153 ಸೆ.ಮೀ ಉದ್ದವುಳ್ಳ, 30ರಿಂದ 35 ವರ್ಷದ ವ್ಯಕ್ತಿಯದ್ದು.
  • ಕೊಲೆ ಶಂಕೆ ಇಲ್ಲ.
  • ಅಸ್ಥಿಪಂಜರದ ಮೇಲೆ ಯಾವುದೇ ಗಾಯಗಳು ಪತ್ತೆಯಾಗಿಲ್ಲ.
  • ಯಾರಾದರೂ ಆಯತಪ್ಪಿ ಇಂಗುಗುಂಡಿಗೆ ಬಿದ್ದು ಸತ್ತಿರುವ ಶಂಕೆ.
  • 2 ವರ್ಷದ ಹಿಂದೆ ಇಂಗುಗುಂಡಿಯ ನೀರಿನಲ್ಲಿ ಮುಳುಗಿ ಸತ್ತಿರುವ ಶಂಕೆ
  • ಎಫ್​ಎಸ್​ಎಲ್​​ ವಿವಿಧ ವಿಭಾಗಗಳಲ್ಲಿ ಡಿಎನ್ಎ ಫಿಂಗರ್ ಪ್ರಿಂಟ್ ಸೇರಿದಂತೆ ಅನೇಕ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: RTO ಕಣ್ತಪ್ಪಿಸಿ ಓಡಾಡ್ತಿದ್ದ ಐಷರಾಮಿ ಕಾರು ಸೀಜ್‌

ಬೇಗೂರು ಪೊಲೀಸರು 2016ರ ನಂತರ ನಾಪತ್ತೆಯಾದವರ ಕೇಸ್​ಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಯಾಕೆಂದರೆ, 2016ರಲ್ಲಿ ಅಪಾರ್ಟ್‌ಮೆಂಟ್ ಕಾಮಗಾರಿ ಪೂರ್ಣಗೊಂಡಿದ್ದು, ಅದರ ನಿರ್ಮಾಣದ ಕೊನೆ ಹಂತದಲ್ಲಿ ಇಂಗುಗುಂಡಿ ನಿರ್ಮಾಣವಾಗುತ್ತದೆ. ಹೀಗಾಗಿ 2016ರಲ್ಲಿ ಬೇಗೂರು ಸುತ್ತಮುತ್ತ ಕಾಣೆಯಾದ ಪುರುಷರ ಕೇಸ್ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಡಿಎನ್ಎ ವರದಿ ಬಂದ ನಂತರ ಕಾಣೆಯಾಗದವರ ಸಂಬಂಧಿಕರ ಡಿಎನ್ಎಗೆ ಹೋಲಿಕೆ‌ ಮಾಡಿ‌ ಮೃತನ ಮಾಹಿತಿ ಪತ್ತೆಮಾಡಲಾಗುತ್ತದೆ. ಈ ಎಲ್ಲ ಬೆಳವಣಿಗೆಗಳಿಂದಾಗಿ ಇದೀಗ ಅಸ್ಥಿಪಂಜರದ ಪ್ರಕರಣ ಮತ್ತಷ್ಟು ಕುತೂಹಲ ಹುಟ್ಟಿಸಿದೆ.

ವರದಿ:ಪ್ರದೀಪ್ ಚಿಕ್ಕಾಟಿ, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್