AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Quality: ಬೆಂಗಳೂರು, ಬಳ್ಳಾರಿ ಗಾಳಿಯ ಗುಣಮಟ್ಟ ಅಪಾಯದಲ್ಲಿ, ಹೈ ಅಲರ್ಟ್​​​​​ ನೀಡಿದ ತಜ್ಞರು

ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕ (AQI) ಮಧ್ಯಮದಿಂದ ಕಳಪೆ ಮಟ್ಟದಲ್ಲಿದೆ. PM2.5 ಮತ್ತು PM10 ಮಾಲಿನ್ಯಕಾರಕಗಳು ಹೆಚ್ಚಿದ್ದು, ಬೆಳ್ಳಂದೂರು, ಬಿಟಿಎಂ ಲೇಔಟ್‌ನಂತಹ ಪ್ರದೇಶಗಳಲ್ಲಿ ಗಾಳಿ ಗುಣಮಟ್ಟ ಕಳಪೆಯಾಗಿದೆ. ಮಕ್ಕಳು, ವೃದ್ಧರು ಎಚ್ಚರಿಕೆ ವಹಿಸಬೇಕು. ಬಳ್ಳಾರಿ ಮತ್ತು ವಿಜಯಪುರದಲ್ಲೂ ಕಳಪೆ ಗಾಳಿ ಗುಣಮಟ್ಟ ದಾಖಲಾಗಿದೆ.

Air Quality: ಬೆಂಗಳೂರು, ಬಳ್ಳಾರಿ ಗಾಳಿಯ ಗುಣಮಟ್ಟ ಅಪಾಯದಲ್ಲಿ, ಹೈ ಅಲರ್ಟ್​​​​​ ನೀಡಿದ ತಜ್ಞರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 18, 2025 | 7:40 AM

Share

ಬೆಂಗಳೂರು,ಡಿ.18: ಇಂದು ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ (Air Quality) ತುಂಬಾ ಕಳಪೆ ಇದೆ. ನಗರದಲ್ಲಿ ಬೆಳಿಗ್ಗೆಯಿಂದ ಸಂಜೆಯವರರೆಗೆ ವಾಯು ಗುಣಮಟ್ಟ ಸೂಚ್ಯಂಕ (AQI) ಮಧ್ಯಮದಿಂದ ಕಳಪೆಯವರೆಗೆ ಇರುತ್ತದೆ. ನಗರಾದ್ಯಂತ ಗಾಳಿಮಟ್ಟದಲ್ಲಿ ಸರಾಸರಿ ವರದಿಯಾಗಿದೆ. 89 ಮತ್ತು 159 ರ ನಡುವೆ ಈ ಮಟ್ಟ ಇರಲಿದೆ ಎಂದು ಹೇಳಲಾಗಿದೆ. ಇನ್ನು ನೆನ್ನೆ 85ರಷ್ಟು ಇತ್ತು. ಇದು ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡು ಬಂದ ಅಪರೂಪದ ಗಾಳಿಯ ಗುಣಮಟ್ಟ. ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಗಾಳಿ ಮಟ್ಟ ತುಂಬಾ ಕಳಪೆ ಇತ್ತು. ಇನ್ನು ಗಾಳಿ ಮಟ್ಟ ಇಳಿಕೆಗೆ PM2.5 ಮತ್ತು PM10 ಪ್ರಮುಖ ಕಾರಣವಾಗಿದ್ದು, PM2.5 ಮಟ್ಟಗಳು ಸುಮಾರು 54 µg/m³ ಆಗಿವೆ. ಮಕ್ಕಳು, ವೃದ್ಧರು ಮತ್ತು ಉಸಿರಾಟದ ಸಮಸ್ಯೆಗಳಿರುವವರಂತಹ ಜನರು ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ತಜ್ಞರು ಹೇಳಿದ್ದಾರೆ.

ನಗರದ ರೈಲ್ವೆ ನಿಲ್ದಾಣ, ಹೆಬ್ಬಾಳ ಮತ್ತು ಬಿಟಿಎಂ ಲೇಔಟ್ ಇತ್ತೀಚೆಗೆ 80–100 ವ್ಯಾಪ್ತಿಯಲ್ಲಿ ತಾಪಮಾನ ದಾಖಲಾಗಿದೆ. ಇದು ಕಳಪೆ ಗಾಳಿ ಗುಣಮಟ್ಟ ಹೊಂದಿರುವ (101–150+) ಪ್ರದೇಶ ಎಂದು ಹೇಳಲಾಗಿದೆ. ಬೆಳ್ಳಂದೂರು 142–151 ಗಾಳಿಯ ಮಟ್ಟವನ್ನು ಹೊಂದಿದೆ. ವೈಟ್‌ಫೀಲ್ಡ್​​​ನಲ್ಲಿ 37–144 ಗಾಳಿಯ ಗುಣಮಟ್ಟ ಇದೆ. ರೇಷ್ಮೆ ಬೋರ್ಡ್ 147 ಗಾಳಿಯ ಮಟ್ಟ ಇದೆ. ಬಿಡಬ್ಲ್ಯೂಎಸ್ಎಸ್ಬಿ ಕಡಬೇಸನಹಳ್ಳಿಯಲ್ಲಿ 153 ಇದೆ ಎಂದು ಹೇಳಿದೆ.

Fcst Metpm Ka 02

ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ :

ಮಂಗಳೂರಿನಲ್ಲಿ ಸಾಮಾನ್ಯ ಗಾಳಿಯ ಮಟ್ಟ ಇದ್ದು, ಇಂದು 85ಕ್ಕೆ ಬಂದಿದೆ. ಮೈಸೂರಿನಲ್ಲಿ ಗಾಳಿಯ ಮಟ್ಟ 88 ಇದೆ. ಇದು ನೆನ್ನೆಗಿಂತ ಸ್ವಲ್ಪ ಹೆಚ್ಚಿದೆ. ಸಂಜೆ ಹೊತ್ತಿಗೆ ಇದು ಬದಲಾಗಬಹುದು. ಬೆಳಗಾವಿಯಲ್ಲೂ ಕೂಡ ಗಾಳಿಯ ಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ನೆನ್ನೆಗಿಂತ ಇಂದು ಗಾಳಿಯ ಮಟ್ಟದಲ್ಲಿ ಬದಲಾವಣೆ ಆಗಿದೆ. ಇಂದು 100 ಇದೆ . ಕಲಬುರ್ಗಿಯಲ್ಲಿ ಗಾಳಿ ಮಟ್ಟ ಅಪಾಯದಲ್ಲಿದೆ. ನೆನ್ನೆ ಕೂಡ ಗಾಳಿಮಟ್ಟದಲ್ಲಿ ತುಂಬಾ ಇಳಿಕೆ ಕಂಡಿತ್ತು. ಇದೀಗ 122ಕ್ಕೆ ಬಂದಿದೆ. ಶಿವಮೊಗ್ಗದಲ್ಲಿ ಸಾಮಾನ್ಯ ಗಾಳಿ ಮಟ್ಟ ಇದೆ. ಇಂದು ಗಾಳಿಯ ಮಟ್ಟ 66 ಇದೆ. ಆದರೆ ಬಳ್ಳಾರಿಯಲ್ಲಿ ದಿನದಿಂದ ದಿನಕ್ಕೆ ಗಾಳಿಯ ಮಟ್ಟ ಕಳಪೆಯಾಗುತ್ತಿದೆ. ಬೆಂಗಳೂರಿನ ಹಾದಿಯಲೇ ಬಳ್ಳಾರಿ ಕೂಡ ಸಾಗುತ್ತಿದೆ. ಇಂದು ಬಳ್ಳಾರಿಯಲ್ಲಿ ಗಾಳಿಯ ಮಟ್ಟ 172ಕ್ಕೆ ಬಂದಿದೆ. ಒಂದು ವಾರದಿಂದ ಗಾಳಿಯ ಮಟ್ಟದಲ್ಲಿ ಬದಲಾವಣೆ ಕಾಣುತ್ತಿದೆ. ಹುಬ್ಬಳ್ಳಿ ನೆನ್ನೆಗಿಂತ ತುಂಬಾ ಸುಧಾರಣೆಯಾಗಿದೆ. ಗಾಳಿಯ ಮಟ್ಟ 80 ಆಗಿದೆ. ಉಡುಪಿಯ ಸಾಮಾನ್ಯ ಗಾಳಿಯ ಮಟ್ಟ ಇದೆ. ಇಂದು 75 ಇದೆ. ವಿಜಯಪುರ ಕೂಡ ಗಾಳಿ ಮಟ್ಟದಲ್ಲಿ ಕಳಪೆಯಲ್ಲಿದೆ. ಇಂದು 153ಕ್ಕೆ ಇಳಿದಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಚಳಿಗೆ ನಲುಗಿದ ಕರ್ನಾಟಕ, ಪ್ರಯಾಣ ಮಾಡುವವರು ಎಚ್ಚರ

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

ಉತ್ತಮ- 0-50

ಮಧ್ಯಮ – 50-100

ಕಳಪೆ – 100-150

ಅನಾರೋಗ್ಯಕರ – 150-200

ಗಂಭೀರ – 200 – 300

ಅಪಾಯಕಾರಿ – 300 -500+

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರಳಿ ಮರ ಬಾಡುವುದಿಲ್ಲ ಯಾಕೆ?
ಅರಳಿ ಮರ ಬಾಡುವುದಿಲ್ಲ ಯಾಕೆ?
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?