AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವರ್-ಕಂಡಕ್ಟರ್​ ಮೇಲೆ ಹಲ್ಲೆ ಪ್ರಕರಣ ಹೆಚ್ಚಳ: ಕೊನೆಗೂ ಎಚ್ಚೆತ್ತ ಬಿಎಂಟಿಸಿ ಅಧಿಕಾರಿಗಳು

ಬೆಂಗಳೂರಿನಲ್ಲಿ ಬಿಎಂಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಬಿಎಂಟಿಸಿ ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದಾರೆ. ಕರ್ತವ್ಯದಲ್ಲಿರುವ ನೌಕರರ ಮೇಲೆ ಹಲ್ಲೆ ನಡೆದರೆ ತಕ್ಷಣ ಜಾಗೃತ ಮತ್ತು ಭದ್ರತಾ ನಿರ್ದೇಶಕರಿಗೆ ತಿಳಿಸುವಂತೆ ಸೂಚಿಸಲಾಗಿದೆ. ಕಳೆದ ಮೂರು ತಿಂಗಳಲ್ಲಿ ಹಲವಾರು ಹಲ್ಲೆ ಪ್ರಕರಣಗಳು ವರದಿಯಾಗಿವೆ.

ಡ್ರೈವರ್-ಕಂಡಕ್ಟರ್​ ಮೇಲೆ ಹಲ್ಲೆ ಪ್ರಕರಣ ಹೆಚ್ಚಳ: ಕೊನೆಗೂ ಎಚ್ಚೆತ್ತ ಬಿಎಂಟಿಸಿ ಅಧಿಕಾರಿಗಳು
ಡ್ರೈವರ್-ಕಂಡಕ್ಟರ್​ ಮೇಲೆ ಹಲ್ಲೆ ಪ್ರಕರಣ ಹೆಚ್ಚಳ: ಕೊನೆಗೂ ಎಚ್ಚೆತ್ತ ಬಿಎಂಟಿಸಿ ಅಧಿಕಾರಿಗಳು
ಕಿರಣ್​ ಸೂರ್ಯ
| Edited By: |

Updated on: Nov 28, 2024 | 5:33 PM

Share

ಬೆಂಗಳೂರು, ನವೆಂಬರ್ 28: ನಗರದಲ್ಲಿ ಸಾರ್ವಜನಿಕರಿಂದ ಸಾಲು ಸಾಲು ಹಲ್ಲೆ ಪ್ರಕರಣಗಳು ಬಿಎಂಟಿಸಿ ಸಿಬ್ಬಂದಿ ಕಂಗೆಡುವಂತೆ ಮಾಡಿವೆ. ಹೀಗಾಗಿ ಇದರಿಂದ ಕಡೆಗೂ ಬಿಎಂಟಿಸಿ (BMTC) ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಕರ್ತವ್ಯನಿರತ ಬಿಎಂಟಿಸಿ ನೌಕರರ ಮೇಲೆ ಹಲ್ಲೆ ಘಟನೆ ನಡೆದರೆ ಕೂಡಲೇ ಜಾಗೃತ ಮತ್ತು ಭದ್ರತಾ ನಿರ್ದೇಶಕರಿಗೆ ತಿಳಿಸುವಂತೆ ಸೂಚನೆ ನೀಡಲಾಗಿದೆ.

ಘಟನೆ ನಡೆದು 30 ನಿಮಿಷದೊಳಗೆ ಸಂಪೂರ್ಣ ಮಾಹಿತಿ ನೀಡಬಹುದಾಗಿದೆ. ದಿನದ ಯಾವುದೇ ಸಮಯದಲ್ಲಾದ್ರೂ ಮಾಹಿತಿ ನೀಡುವಂತೆ ಎಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನಿರ್ದೇಶಕರಿಂದ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ: ಮೂರು ತಿಂಗಳಲ್ಲಿ 9ನೇ ಪ್ರಕರಣ

ಸೆಪ್ಟೆಂಬರ್‌ 8 ರಂದು ವೋಲ್ವೋ ಬಸ್‌ನಲ್ಲಿ ಅಟ್ಯಾಕ್‌ ಆಗಿತ್ತು. ಅತ್ತಿಬೆಲೆಯಿಂದ ಬರ್ತಿದ್ದ ಬಸ್‌ನಲ್ಲಿ ಸ್ಕ್ರೂ ಡ್ರೈವರ್‌ನಿಂದ ಕಂಡಕ್ಟರ್‌ ಮೇಲೆ ಹಲ್ಲೆ ಯತ್ನ ಆಗಿತ್ತು. ಇನ್ನು ಅಕ್ಟೋಬರ್‌ 1 ರಂದು ವೈಟ್‌ಫೀಲ್ಡ್‌ನ ಐಟಿಪಿಎಲ್‌ನಲ್ಲಿ ನಿರ್ವಾಹಕ ಯೋಗೇಶ್‌ಗೆ ಹರ್ಷಾ ಅನ್ನೋ ಪ್ರಯಾಣಿಕ ಚಾಕು ಹಾಕಿದ್ದ. ಅದೇ ಅಕ್ಚೋಬರ್‌ 18 ರಂದು ಟಿನ್‌ ಫ್ಯಾಕ್ಟರಿ ಬಳಿ ಹೇಮಂತ್ ಎಂಬಾತ ಕಂಡಕ್ಟರ್‌ ಮೇಲೆ ದೊಡ್ಡ ಕಲ್ಲು ಎತ್ತಿಹಾಕಿದ್ದ.

ಅಕ್ಟೋಬರ್‌ 26 ರಂದು ಟ್ಯಾನರಿ ರಸ್ತೆಯಲ್ಲಿ ಹಾರನ್‌ ಮಾಡಿ ಸೈಡಿಗೆ ಹೋಗು ಎಂದಿದ್ದಕ್ಕೆ ಬೈಕ್‌ ಸವಾರರು ಡ್ರೈವರ್‌ನನ್ನ ಥಳಿಸಿದ್ದರು. ಇನ್ನು ಅಕ್ಟೋಬರ್‌ 28 ರಂದು ಮೈಕೋ ಲೇಔಟ್ ಬಸ್ ಸ್ಟಾಪ್‌ನಲ್ಲಿ ಆಟೋ ಚಾಲಕ ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ ಮಾಡಲಾಗಿತ್ತು.

ಕಳೆದ ಮೂರು ತಿಂಗಳಲ್ಲಿ ಆರು ಸಿಬ್ಬಂದಿ ಮೇಲೆ ಹಲ್ಲೆ ಆಗಿದೆ. ಇನ್ನು ಇತ್ತೀಚೆಗೆ ಮೈಸೂರು ರೋಡ್‌ನಲ್ಲಿ ಬೈಕ್‌ಗೆ ಬಸ್‌ ಟಚ್ ಆಗಿತ್ತು. ಹೊಸಗುಡ್ಡದಹಳ್ಳಿವರೆಗೂ ಬಸ್‌ ಫಾಲೋ ಮಾಡಿಕೊಂಡು ಬಂದ ಕಮಲ್‌ಸಿಂಗ್‌ ಚಾಲಕ ಮೇಲೆ ಹಲ್ಲೆಮಾಡಿದ್ದಾನೆ. ಹಲ್ಲೆ ದೃಶ್ಯ ಬೈದಾಡ್ತಿರೋ ಆಡಿಯೋ ಬಸ್‌ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆ ಆಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್​ಗಿಲ್ಲ ಭದ್ರತೆ; ಕಲ್ಲಿನಿಂದ ತಲೆ ಜಜ್ಜಲು ಯತ್ನಿಸಿದ ಪ್ರಯಾಣಿಕ!

ಇನ್ನೂ ವಿಡಿಯೋ ಮಾಡ್ತಿದ್ದವರ ಮೊಬೈಲ್‌ ಕಸಿಯೋದಕ್ಕೂ ಕಮಲ್‌ಸಿಂಗ್ ಮುಂದಾಗಿದ್ದ. ಬಳಿಕ ಆರೋಪಿಯನ್ನ ಪೊಲೀಸರಿಗೆ ಒಪ್ಪಿಸಲಾಗಿತ್ತು. ಈ ಸಂಬಂಧ ಬ್ಯಾಟರಾಯನಪುರ ಪೋಲಿಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​