AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಟ್ರಬಲ್ ಶೂಟರ್​ DK ಶಿವಕುಮಾರ್ ಬ್ರದರ್ಸ್ ಮನೆ ಮೇಲೆ CBI ದಾಳಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ. ಇಂದು ಬೆಳ್ಳಂಬೆಳಗ್ಗೆ ಸದಾಶಿವ ನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್​ ಶಿವಕುಮಾರ್ ಅವರ ಮನೆ ಮೇಲೆ ಈ ದಾಳಿ ನಡೆದಿದೆ. ಜೊತೆಗೆ ಇನ್ನೂ 15 ಕಡೆ CBI ಟೀಂ ದಾಳಿ ನಡೆಸಿದೆ. ಕನಕಪುರದಲ್ಲಿಯೂ ಸಿಬಿಐ ರೇಡ್: ಡಿಕೆಶಿ ಸೋದರ ಡಿಕೆ ಸುರೇಶ್ ನಿವಾಸದ ಮೇಲೂ CBI ದಾಳಿ ನಡೆಸಿದೆ. ಕನಕಪುರದ ನಿವಾಸಗಳ ಮೇಲೂ ಸಿಬಿಐ ಸರ್ಚ್ ನಡೆದಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸದಾಶಿವನಗರದಲ್ಲಿ […]

ಕಾಂಗ್ರೆಸ್ ಟ್ರಬಲ್ ಶೂಟರ್​ DK ಶಿವಕುಮಾರ್ ಬ್ರದರ್ಸ್ ಮನೆ ಮೇಲೆ CBI ದಾಳಿ
ಸಾಧು ಶ್ರೀನಾಥ್​
|

Updated on:Oct 05, 2020 | 9:37 AM

Share

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ. ಇಂದು ಬೆಳ್ಳಂಬೆಳಗ್ಗೆ ಸದಾಶಿವ ನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್​ ಶಿವಕುಮಾರ್ ಅವರ ಮನೆ ಮೇಲೆ ಈ ದಾಳಿ ನಡೆದಿದೆ. ಜೊತೆಗೆ ಇನ್ನೂ 15 ಕಡೆ CBI ಟೀಂ ದಾಳಿ ನಡೆಸಿದೆ.

ಕನಕಪುರದಲ್ಲಿಯೂ ಸಿಬಿಐ ರೇಡ್: ಡಿಕೆಶಿ ಸೋದರ ಡಿಕೆ ಸುರೇಶ್ ನಿವಾಸದ ಮೇಲೂ CBI ದಾಳಿ ನಡೆಸಿದೆ. ಕನಕಪುರದ ನಿವಾಸಗಳ ಮೇಲೂ ಸಿಬಿಐ ಸರ್ಚ್ ನಡೆದಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸದಾಶಿವನಗರದಲ್ಲಿ ಡಿ.ಕೆ.ಶಿವಕುಮಾರ್ ಮನೆ ಮೇಲೆ ದಾಳಿ ಆರಂಭವಾಗಿದೆ. ಇಂದು ಇಡೀ ದಿನ ಸರ್ಚ್​ ನಡೆಯಲಿದೆ. ಡಿ.ಕೆ.ಶಿವಕುಮಾರ್ ಬಿಟ್ಟು ಮನೆಯಲ್ಲಿದ್ದ ಎಲ್ಲರನ್ನ ಹೊರಗೆ ಕಳುಹಿಸಿ ಸಿಸಿಬಿ ಅಧಿಕಾರಿಗಳು ಸರ್ಚ್​ ಆರಂಭಿಸಿದ್ದಾರೆ. ರಾಮನಗರದ ದೊಡ್ಡಆಲಹಳ್ಳಿಯಲ್ಲಿರುವ ಡಿಕೆಶಿ ನಿವಾಸದ ಮೇಲೆಯೂ ದಾಳಿ ನಡೆದಿದೆ. ಸ್ಥಳೀಯ ಪೊಲೀಸರಿಗೆ ದಾಳಿ/ ಪರಿಶೀಲನೆ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿದುಬಂದಿದೆ.

ಮತ್ತೆ ದಾಳಿ ಯಾಕೆ? ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ಮತ್ತು ಐಟಿ ಇಲಾಖೆ ವಿಚಾರಣೆ ನಡೆಸಿತ್ತು. ಆ ಪ್ರಕರಣದಲ್ಲಿ ತಿಹಾರ್ ಜೈಲಿಗೂ ಹೋಗಿಬಂದಿದ್ದರು. ತದನಂತರ ಪ್ರಕರಣ ಕೈಬಿಡುವಂತೆ ಡಿಕೆಶಿ ಅವರು, ರಾಜ್ಯ ಹೈಕೋರ್ಟ್​ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಬಿಐ ದಾಳಿ ನಡೆಸಿದೆ.

ಡಿಕೆ ಶಿವಕುಮಾರ್ ಗೆ ಇ.ಡಿ ಬಂಧನದ ಭೀತಿ..!

ಪುತ್ರಿಗೆ ಹಣ ವರ್ಗಾವಣೆ: DK ಶಿವಕುಮಾರ್ ಆಪ್ತನಿಗೆ ನೋಟಿಸ್

Published On - 9:09 am, Mon, 5 October 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ