AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಗು ಜನಿಸಿದ ಖುಷಿಗೆ ವಿಮಾನದಲ್ಲೇ ಸಿಹಿ ಹಂಚಿ ಸಂಭ್ರಮಿಸಿದ ಪ್ರಯಾಣಿಕ

ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ನೆಟ್​​ವರ್ಕ್ ಇರುವುದಿಲ್ಲ. ಆದರೆ, ಲಂಡನ್​ನಿಂದ ಬೆಂಗಳೂರಿಗೆ ಆಗಮಿಸಿದ ಬ್ರಿಟಿಷ್ ಏರ್ ವೇಸ್ ವಿಮಾನದಲ್ಲಿ ನೆಟ್​ವರ್ಕ್ ಸಿಗುತ್ತಿತ್ತು. ಅದರಂತೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಚೆನ್ನೈ ಮೂಲದ ಪ್ರಯಾಣಿಕರೊಬ್ಬರಿಗೆ ಮಗು ಜನಿಸಿದ ಸಂದೇಶ ಬಂದಿದ್ದು, ಇದೇ ಖುಷಿಗೆ ಪ್ರಯಾಣಿಕರಿಗೆ ಹಾಗೂ ಸಿಬ್ಬಂದಿಗೆ ಸಿಹಿ ಹಂಚಿ ಸಂಭ್ರಮಾಚರಿಸಿದ್ದಾರೆ.

ನವೀನ್ ಕುಮಾರ್ ಟಿ.
| Edited By: Rakesh Nayak Manchi|

Updated on:Oct 07, 2023 | 10:48 AM

Share

ದೇವನಹಳ್ಳಿ, ಅ.7: ಲಂಡನ್​ನಿಂದ ಬೆಂಗಳೂರಿಗೆ (Bangalore) ಆಗಮಿಸುತ್ತಿದ್ದಾಗ ಮಗುವಿನ ಜನನದ ಸುದ್ದಿ ತಿಳಿದು ಚೆನ್ನೈ ಮೂಲದ ಪ್ರಯಾಣಿಕರೊಬ್ಬರು ವಿಮಾನದಲ್ಲೇ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ನೆಟ್​​ವರ್ಕ್ ಇರುವುದಿಲ್ಲ. ಆದರೆ, ಬ್ರಿಟಿಷ್ ಏರ್ ವೇಸ್​ನಲ್ಲಿ ನೆಟ್​ವರ್ಕ್ ಲಭ್ಯವಾಗಿದ್ದರಿಂದ ಸಂತಸದ ಕ್ಷಣ ತಿಳಿದು ಸಂಭ್ರಮಾಚರಿಸಿದರು.

ಚೆನೈ ಮೂಲದ ಪ್ರಯಾಣಿಕ ಅನು ಬಾಲಾಜಿ‌ ಅವರು ಬ್ರಿಟಿಷ್ ಏರ್ ವೇಸ್​ನ BA119 ವಿಮಾನದಲ್ಲಿ ಲಂಡನ್​ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ವಿಮಾನದಲ್ಲಿ ಇರುವಾಗಲೇ ತಾನು ತಂದೆಯಾದ ಸುದ್ದಿ ತಿಳಿದು ಅನು ಬಾಲಾಜಿ ಅವರು ಸಹ ಪ್ರಯಾಣಿಕರಿಗೆ ಹಾಗೂ ವಿಮಾನದ ಸಿಬ್ಬಂದಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ, ಮಾಹಿತಿ ಇಲ್ಲಿದೆ

ಅಷ್ಟು ಮಾತ್ರವಲ್ಲದೆ, ಮಗು ಜನನದ ವಿಷಯವನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ (ಟ್ವಿಟರ್) ಹಂಚಿಕೊಂಡ ಅನು ಬಾಲಾಜಿ ಅವರು, ವಿಮಾನದಲ್ಲಿ ಇಂಟರ್ ನೆಟ್ ಸಿಕ್ಕಿದ್ದಕ್ಕಾಗಿ ಬ್ರಿಟಿಷ್ ಏರ್ವೇಸ್​ಗೆ ಧನ್ಯವಾದ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Sat, 7 October 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!