AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಗು ಜನಿಸಿದ ಖುಷಿಗೆ ವಿಮಾನದಲ್ಲೇ ಸಿಹಿ ಹಂಚಿ ಸಂಭ್ರಮಿಸಿದ ಪ್ರಯಾಣಿಕ

ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ನೆಟ್​​ವರ್ಕ್ ಇರುವುದಿಲ್ಲ. ಆದರೆ, ಲಂಡನ್​ನಿಂದ ಬೆಂಗಳೂರಿಗೆ ಆಗಮಿಸಿದ ಬ್ರಿಟಿಷ್ ಏರ್ ವೇಸ್ ವಿಮಾನದಲ್ಲಿ ನೆಟ್​ವರ್ಕ್ ಸಿಗುತ್ತಿತ್ತು. ಅದರಂತೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಚೆನ್ನೈ ಮೂಲದ ಪ್ರಯಾಣಿಕರೊಬ್ಬರಿಗೆ ಮಗು ಜನಿಸಿದ ಸಂದೇಶ ಬಂದಿದ್ದು, ಇದೇ ಖುಷಿಗೆ ಪ್ರಯಾಣಿಕರಿಗೆ ಹಾಗೂ ಸಿಬ್ಬಂದಿಗೆ ಸಿಹಿ ಹಂಚಿ ಸಂಭ್ರಮಾಚರಿಸಿದ್ದಾರೆ.

ನವೀನ್ ಕುಮಾರ್ ಟಿ
| Edited By: Rakesh Nayak Manchi|

Updated on:Oct 07, 2023 | 10:48 AM

Share

ದೇವನಹಳ್ಳಿ, ಅ.7: ಲಂಡನ್​ನಿಂದ ಬೆಂಗಳೂರಿಗೆ (Bangalore) ಆಗಮಿಸುತ್ತಿದ್ದಾಗ ಮಗುವಿನ ಜನನದ ಸುದ್ದಿ ತಿಳಿದು ಚೆನ್ನೈ ಮೂಲದ ಪ್ರಯಾಣಿಕರೊಬ್ಬರು ವಿಮಾನದಲ್ಲೇ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ನೆಟ್​​ವರ್ಕ್ ಇರುವುದಿಲ್ಲ. ಆದರೆ, ಬ್ರಿಟಿಷ್ ಏರ್ ವೇಸ್​ನಲ್ಲಿ ನೆಟ್​ವರ್ಕ್ ಲಭ್ಯವಾಗಿದ್ದರಿಂದ ಸಂತಸದ ಕ್ಷಣ ತಿಳಿದು ಸಂಭ್ರಮಾಚರಿಸಿದರು.

ಚೆನೈ ಮೂಲದ ಪ್ರಯಾಣಿಕ ಅನು ಬಾಲಾಜಿ‌ ಅವರು ಬ್ರಿಟಿಷ್ ಏರ್ ವೇಸ್​ನ BA119 ವಿಮಾನದಲ್ಲಿ ಲಂಡನ್​ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ವಿಮಾನದಲ್ಲಿ ಇರುವಾಗಲೇ ತಾನು ತಂದೆಯಾದ ಸುದ್ದಿ ತಿಳಿದು ಅನು ಬಾಲಾಜಿ ಅವರು ಸಹ ಪ್ರಯಾಣಿಕರಿಗೆ ಹಾಗೂ ವಿಮಾನದ ಸಿಬ್ಬಂದಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ, ಮಾಹಿತಿ ಇಲ್ಲಿದೆ

ಅಷ್ಟು ಮಾತ್ರವಲ್ಲದೆ, ಮಗು ಜನನದ ವಿಷಯವನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ (ಟ್ವಿಟರ್) ಹಂಚಿಕೊಂಡ ಅನು ಬಾಲಾಜಿ ಅವರು, ವಿಮಾನದಲ್ಲಿ ಇಂಟರ್ ನೆಟ್ ಸಿಕ್ಕಿದ್ದಕ್ಕಾಗಿ ಬ್ರಿಟಿಷ್ ಏರ್ವೇಸ್​ಗೆ ಧನ್ಯವಾದ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Sat, 7 October 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?