AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಗು ಜನಿಸಿದ ಖುಷಿಗೆ ವಿಮಾನದಲ್ಲೇ ಸಿಹಿ ಹಂಚಿ ಸಂಭ್ರಮಿಸಿದ ಪ್ರಯಾಣಿಕ

ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ನೆಟ್​​ವರ್ಕ್ ಇರುವುದಿಲ್ಲ. ಆದರೆ, ಲಂಡನ್​ನಿಂದ ಬೆಂಗಳೂರಿಗೆ ಆಗಮಿಸಿದ ಬ್ರಿಟಿಷ್ ಏರ್ ವೇಸ್ ವಿಮಾನದಲ್ಲಿ ನೆಟ್​ವರ್ಕ್ ಸಿಗುತ್ತಿತ್ತು. ಅದರಂತೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಚೆನ್ನೈ ಮೂಲದ ಪ್ರಯಾಣಿಕರೊಬ್ಬರಿಗೆ ಮಗು ಜನಿಸಿದ ಸಂದೇಶ ಬಂದಿದ್ದು, ಇದೇ ಖುಷಿಗೆ ಪ್ರಯಾಣಿಕರಿಗೆ ಹಾಗೂ ಸಿಬ್ಬಂದಿಗೆ ಸಿಹಿ ಹಂಚಿ ಸಂಭ್ರಮಾಚರಿಸಿದ್ದಾರೆ.

Follow us
ನವೀನ್ ಕುಮಾರ್ ಟಿ
| Updated By: Rakesh Nayak Manchi

Updated on:Oct 07, 2023 | 10:48 AM

ದೇವನಹಳ್ಳಿ, ಅ.7: ಲಂಡನ್​ನಿಂದ ಬೆಂಗಳೂರಿಗೆ (Bangalore) ಆಗಮಿಸುತ್ತಿದ್ದಾಗ ಮಗುವಿನ ಜನನದ ಸುದ್ದಿ ತಿಳಿದು ಚೆನ್ನೈ ಮೂಲದ ಪ್ರಯಾಣಿಕರೊಬ್ಬರು ವಿಮಾನದಲ್ಲೇ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ನೆಟ್​​ವರ್ಕ್ ಇರುವುದಿಲ್ಲ. ಆದರೆ, ಬ್ರಿಟಿಷ್ ಏರ್ ವೇಸ್​ನಲ್ಲಿ ನೆಟ್​ವರ್ಕ್ ಲಭ್ಯವಾಗಿದ್ದರಿಂದ ಸಂತಸದ ಕ್ಷಣ ತಿಳಿದು ಸಂಭ್ರಮಾಚರಿಸಿದರು.

ಚೆನೈ ಮೂಲದ ಪ್ರಯಾಣಿಕ ಅನು ಬಾಲಾಜಿ‌ ಅವರು ಬ್ರಿಟಿಷ್ ಏರ್ ವೇಸ್​ನ BA119 ವಿಮಾನದಲ್ಲಿ ಲಂಡನ್​ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ವಿಮಾನದಲ್ಲಿ ಇರುವಾಗಲೇ ತಾನು ತಂದೆಯಾದ ಸುದ್ದಿ ತಿಳಿದು ಅನು ಬಾಲಾಜಿ ಅವರು ಸಹ ಪ್ರಯಾಣಿಕರಿಗೆ ಹಾಗೂ ವಿಮಾನದ ಸಿಬ್ಬಂದಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ, ಮಾಹಿತಿ ಇಲ್ಲಿದೆ

ಅಷ್ಟು ಮಾತ್ರವಲ್ಲದೆ, ಮಗು ಜನನದ ವಿಷಯವನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ (ಟ್ವಿಟರ್) ಹಂಚಿಕೊಂಡ ಅನು ಬಾಲಾಜಿ ಅವರು, ವಿಮಾನದಲ್ಲಿ ಇಂಟರ್ ನೆಟ್ ಸಿಕ್ಕಿದ್ದಕ್ಕಾಗಿ ಬ್ರಿಟಿಷ್ ಏರ್ವೇಸ್​ಗೆ ಧನ್ಯವಾದ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Sat, 7 October 23

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ