AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಗು ಜನಿಸಿದ ಖುಷಿಗೆ ವಿಮಾನದಲ್ಲೇ ಸಿಹಿ ಹಂಚಿ ಸಂಭ್ರಮಿಸಿದ ಪ್ರಯಾಣಿಕ

ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ನೆಟ್​​ವರ್ಕ್ ಇರುವುದಿಲ್ಲ. ಆದರೆ, ಲಂಡನ್​ನಿಂದ ಬೆಂಗಳೂರಿಗೆ ಆಗಮಿಸಿದ ಬ್ರಿಟಿಷ್ ಏರ್ ವೇಸ್ ವಿಮಾನದಲ್ಲಿ ನೆಟ್​ವರ್ಕ್ ಸಿಗುತ್ತಿತ್ತು. ಅದರಂತೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಚೆನ್ನೈ ಮೂಲದ ಪ್ರಯಾಣಿಕರೊಬ್ಬರಿಗೆ ಮಗು ಜನಿಸಿದ ಸಂದೇಶ ಬಂದಿದ್ದು, ಇದೇ ಖುಷಿಗೆ ಪ್ರಯಾಣಿಕರಿಗೆ ಹಾಗೂ ಸಿಬ್ಬಂದಿಗೆ ಸಿಹಿ ಹಂಚಿ ಸಂಭ್ರಮಾಚರಿಸಿದ್ದಾರೆ.

ನವೀನ್ ಕುಮಾರ್ ಟಿ
| Edited By: Rakesh Nayak Manchi|

Updated on:Oct 07, 2023 | 10:48 AM

Share

ದೇವನಹಳ್ಳಿ, ಅ.7: ಲಂಡನ್​ನಿಂದ ಬೆಂಗಳೂರಿಗೆ (Bangalore) ಆಗಮಿಸುತ್ತಿದ್ದಾಗ ಮಗುವಿನ ಜನನದ ಸುದ್ದಿ ತಿಳಿದು ಚೆನ್ನೈ ಮೂಲದ ಪ್ರಯಾಣಿಕರೊಬ್ಬರು ವಿಮಾನದಲ್ಲೇ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ನೆಟ್​​ವರ್ಕ್ ಇರುವುದಿಲ್ಲ. ಆದರೆ, ಬ್ರಿಟಿಷ್ ಏರ್ ವೇಸ್​ನಲ್ಲಿ ನೆಟ್​ವರ್ಕ್ ಲಭ್ಯವಾಗಿದ್ದರಿಂದ ಸಂತಸದ ಕ್ಷಣ ತಿಳಿದು ಸಂಭ್ರಮಾಚರಿಸಿದರು.

ಚೆನೈ ಮೂಲದ ಪ್ರಯಾಣಿಕ ಅನು ಬಾಲಾಜಿ‌ ಅವರು ಬ್ರಿಟಿಷ್ ಏರ್ ವೇಸ್​ನ BA119 ವಿಮಾನದಲ್ಲಿ ಲಂಡನ್​ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ವಿಮಾನದಲ್ಲಿ ಇರುವಾಗಲೇ ತಾನು ತಂದೆಯಾದ ಸುದ್ದಿ ತಿಳಿದು ಅನು ಬಾಲಾಜಿ ಅವರು ಸಹ ಪ್ರಯಾಣಿಕರಿಗೆ ಹಾಗೂ ವಿಮಾನದ ಸಿಬ್ಬಂದಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ, ಮಾಹಿತಿ ಇಲ್ಲಿದೆ

ಅಷ್ಟು ಮಾತ್ರವಲ್ಲದೆ, ಮಗು ಜನನದ ವಿಷಯವನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ (ಟ್ವಿಟರ್) ಹಂಚಿಕೊಂಡ ಅನು ಬಾಲಾಜಿ ಅವರು, ವಿಮಾನದಲ್ಲಿ ಇಂಟರ್ ನೆಟ್ ಸಿಕ್ಕಿದ್ದಕ್ಕಾಗಿ ಬ್ರಿಟಿಷ್ ಏರ್ವೇಸ್​ಗೆ ಧನ್ಯವಾದ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Sat, 7 October 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್