AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಗು ಜನಿಸಿದ ಖುಷಿಗೆ ವಿಮಾನದಲ್ಲೇ ಸಿಹಿ ಹಂಚಿ ಸಂಭ್ರಮಿಸಿದ ಪ್ರಯಾಣಿಕ

ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ನೆಟ್​​ವರ್ಕ್ ಇರುವುದಿಲ್ಲ. ಆದರೆ, ಲಂಡನ್​ನಿಂದ ಬೆಂಗಳೂರಿಗೆ ಆಗಮಿಸಿದ ಬ್ರಿಟಿಷ್ ಏರ್ ವೇಸ್ ವಿಮಾನದಲ್ಲಿ ನೆಟ್​ವರ್ಕ್ ಸಿಗುತ್ತಿತ್ತು. ಅದರಂತೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಚೆನ್ನೈ ಮೂಲದ ಪ್ರಯಾಣಿಕರೊಬ್ಬರಿಗೆ ಮಗು ಜನಿಸಿದ ಸಂದೇಶ ಬಂದಿದ್ದು, ಇದೇ ಖುಷಿಗೆ ಪ್ರಯಾಣಿಕರಿಗೆ ಹಾಗೂ ಸಿಬ್ಬಂದಿಗೆ ಸಿಹಿ ಹಂಚಿ ಸಂಭ್ರಮಾಚರಿಸಿದ್ದಾರೆ.

ನವೀನ್ ಕುಮಾರ್ ಟಿ
| Edited By: |

Updated on:Oct 07, 2023 | 10:48 AM

Share

ದೇವನಹಳ್ಳಿ, ಅ.7: ಲಂಡನ್​ನಿಂದ ಬೆಂಗಳೂರಿಗೆ (Bangalore) ಆಗಮಿಸುತ್ತಿದ್ದಾಗ ಮಗುವಿನ ಜನನದ ಸುದ್ದಿ ತಿಳಿದು ಚೆನ್ನೈ ಮೂಲದ ಪ್ರಯಾಣಿಕರೊಬ್ಬರು ವಿಮಾನದಲ್ಲೇ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ನೆಟ್​​ವರ್ಕ್ ಇರುವುದಿಲ್ಲ. ಆದರೆ, ಬ್ರಿಟಿಷ್ ಏರ್ ವೇಸ್​ನಲ್ಲಿ ನೆಟ್​ವರ್ಕ್ ಲಭ್ಯವಾಗಿದ್ದರಿಂದ ಸಂತಸದ ಕ್ಷಣ ತಿಳಿದು ಸಂಭ್ರಮಾಚರಿಸಿದರು.

ಚೆನೈ ಮೂಲದ ಪ್ರಯಾಣಿಕ ಅನು ಬಾಲಾಜಿ‌ ಅವರು ಬ್ರಿಟಿಷ್ ಏರ್ ವೇಸ್​ನ BA119 ವಿಮಾನದಲ್ಲಿ ಲಂಡನ್​ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ವಿಮಾನದಲ್ಲಿ ಇರುವಾಗಲೇ ತಾನು ತಂದೆಯಾದ ಸುದ್ದಿ ತಿಳಿದು ಅನು ಬಾಲಾಜಿ ಅವರು ಸಹ ಪ್ರಯಾಣಿಕರಿಗೆ ಹಾಗೂ ವಿಮಾನದ ಸಿಬ್ಬಂದಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ, ಮಾಹಿತಿ ಇಲ್ಲಿದೆ

ಅಷ್ಟು ಮಾತ್ರವಲ್ಲದೆ, ಮಗು ಜನನದ ವಿಷಯವನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ (ಟ್ವಿಟರ್) ಹಂಚಿಕೊಂಡ ಅನು ಬಾಲಾಜಿ ಅವರು, ವಿಮಾನದಲ್ಲಿ ಇಂಟರ್ ನೆಟ್ ಸಿಕ್ಕಿದ್ದಕ್ಕಾಗಿ ಬ್ರಿಟಿಷ್ ಏರ್ವೇಸ್​ಗೆ ಧನ್ಯವಾದ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Sat, 7 October 23

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್