AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಿಪ್ಪು ನಿಜ ಕನಸುಗಳು’ ಪುಸ್ತಕ ವಿವಾದ: ಮಾರಾಟಕ್ಕೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಕೋರ್ಟ್

ಭಾರಿ ವಿವಾದ ಸೃಷ್ಟಿಸಿದ್ದ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ರಚಿಸಿದ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

‘ಟಿಪ್ಪು ನಿಜ ಕನಸುಗಳು' ಪುಸ್ತಕ ವಿವಾದ: ಮಾರಾಟಕ್ಕೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಕೋರ್ಟ್
Tipu Nija Kanasugalu book
TV9 Web
| Edited By: |

Updated on: Dec 08, 2022 | 11:15 PM

Share

ಬೆಂಗಳೂರು: ಈ ಹಿಂದೆ ‘ಟಿಪ್ಪು ನಿಜ ಕನಸುಗಳು’ ಪುಸ್ತಕ (Tipu Nija Kanasugalu) ಮಾರಾಟ ಹಾಗೂ ಹಂಚಿಕೆಗೆ ನೀಡಿದ್ದ ತಡೆಯಾಜ್ಞೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ (Bengaluru City Civil Court) ತೆರವುಗೊಳಿಸಿದೆ. ಈ ಮೂಲಕ ‘ಟಿಪ್ಪು ನಿಜ ಕನಸುಗಳು’ ಪುಸ್ತಕ ಮಾರಾಟಕ್ಕೆ ಗ್ರೀನ್‌ಸಿಗ್ನಲ್ ಸಿಕ್ಕಿದೆ.

ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ(Addanda C Cariappa) ರಚಿಸಿದ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ಹಿಂದೆ ಇದೇ ಸಿಟಿ ಸಿವಿಲ್‌ ಕೋರ್ಟ್‌ ತಾತ್ಕಾಲಿಕ ತಡೆಯಾಜ್ಞೆ ವಿಧಿಸಿತ್ತು.

ವಿವಾದಿತ ‘ಟಿಪ್ಪು ನಿಜ ಕನಸುಗಳು’ ಪುಸ್ತಕ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ರಫೀವುಲ್ಲಾ.ಬಿ.ಎಸ್ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಬಳಿಕ ಕೋರ್ಟ್ ನವೆಂಬರ್ 21ರಂದು ಪುಸ್ತಕ ಮಾರಾಟ, ಹಂಚಿಕೆಗೆ ಮಧ್ಯಂತರ ತಡೆ ನೀಡಿತ್ತು. ಆದ್ರೆ, ಇಂದು(ಡಿಸೆಂಬರ್ 08) ಪುಸ್ತಕಕ್ಕೆ ನಿರ್ಬಂಧ ಕೋರಿದ್ದ ಮಧ್ಯಂತರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಪುಸ್ತಕ ಮಾರಾಟ ಹಾಗೂ ಹಂಚಿಕೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಆದೇಶ ಹೊರಡಿಸಿದೆ.

ಈ ಪುಸ್ತಕದಲ್ಲಿ ಟಿಪ್ಪು ಕ್ರೂರಿ ಎಂದು ಬಿಂಬಿಸಲಾಗಿದೆ. ಆದರೆ ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಎಂದು ವಕ್ಫ್ ಬೋರ್ಡ್‌ ಸಮಿತಿ ಮಾಜಿ ಅಧ್ಯಕ್ಷ ಬಿ.ಎಸ್‌. ರಫೀವುಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರತಿವಾದ ಮಂಡಿಸಿದ ಅಡ್ಡಂಡ ಸಿ ಕಾರ್ಯಪ್ಪ, ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ