ಡಿಸೆಂಬರ್ 31ರ ರಾತ್ರಿ ಬೆಂಗಳೂರಲ್ಲಿ ನಿಷೇಧಾಜ್ಞೆ: ಪೊಲೀಸ್​ ಆಯುಕ್ತ ಕಮಲ್​ ಪಂತ್

ಹೊಸ ವರ್ಷಾಚರಣೆ ವೇಳೆ ಜನರನ್ನು ನಿಯಂತ್ರಿಸುವ ಭಾರ ಪೊಲೀಸ್​ ಇಲಾಖೆ ಮೇಲೆ ಬಿದ್ದಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ಇಂದು ಸುದ್ದಿಗೋಷ್ಠಿ ನಡೆಸಿ, ಹೊಸ ವರರ್ಷದ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದರು. 

ಡಿಸೆಂಬರ್ 31ರ ರಾತ್ರಿ ಬೆಂಗಳೂರಲ್ಲಿ ನಿಷೇಧಾಜ್ಞೆ: ಪೊಲೀಸ್​ ಆಯುಕ್ತ ಕಮಲ್​ ಪಂತ್
ಕಮಲ್​ ಪಂತ್
Edited By: ಸಾಧು ಶ್ರೀನಾಥ್​

Updated on: Dec 29, 2020 | 10:57 AM

ಬೆಂಗಳೂರು: ಹೊಸ ವರ್ಷಾಚರಣೆಗೆ ಬ್ರೇಕ್​ ಹಾಕುವ ಉದ್ದೇಶದಿಂದ ರಾಜ್ಯ ಸರ್ಕಾರ ನೈಟ್​ ಕರ್ಫ್ಯೂ ಜಾರಿಗೆ ಮುಂದಾಗಿತ್ತು. ಆದರೆ, ತೀವ್ರ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಅದನ್ನು ಹಿಂಪಡೆದಿತ್ತು. ಹೀಗಾಗಿ, ಹೊಸ ವರ್ಷಾಚರಣೆ ವೇಳೆ ಜನರನ್ನು ನಿಯಂತ್ರಿಸುವ ಭಾರ ಪೊಲೀಸ್​ ಇಲಾಖೆ ಮೇಲೆ ಬಿದ್ದಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ಇಂದು ಸುದ್ದಿಗೋಷ್ಠಿ ನಡೆಸಿ, ಹೊಸ ವರ್ಷದ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದರು.

31ರ ರಾತ್ರಿ ಬೆಂಗಳೂರಲ್ಲಿ ಸೆಕ್ಷನ್​ 144 ಜಾರಿಯಲ್ಲಿರುತ್ತದೆ. ಅಂದರೆ, ಯಾರೊಬ್ಬರೂ ಸಾರ್ವಜನಿಕ ಪ್ರದೇಶದಲ್ಲಿ ಗುಂಪು ಸೇರುವಂತಿಲ್ಲ. ಯಾವುದೇ ರಸ್ತೆಗಳ ಮೇಲೆ ಸೆಲೆಬ್ರೇಷನ್​ ಮಾಡಲು ಅವಕಾಶ ಇರುವುದಿಲ್ಲ. ಖಾಸಗಿ ಕ್ಲಬ್​ಗಳು, ಅಪಾರ್ಟ್ಮೆಂಟ್​ಗಳಲ್ಲಿ  ನಿವಾಸಿಗಳು ಹೊಸ ವರ್ಷ ಆಚರಣೆ ಮಾಡಬಹುದು. ಬ್ಯಾಂಡ್, ಮ್ಯೂಸಿಕ್ ಕಾರ್ಯಕ್ರಮಗಳನ್ನ ಆಯೋಜಿಸುವಂತಿಲ್ಲ. ಹೊಸ ವರ್ಷಾಚರಣೆ ವೇಳೆ ಡಿಜೆ ವ್ಯವಸ್ಥೆಗೆ ಅವಕಾಶವಿಲ್ಲ ಎಂದು ಕಮಲ್​ ಪಂತ್​ ತಿಳಿಸಿದರು.

ರೆಸ್ಟೋರೆಂಟ್, ಪಬ್, ಕ್ಲಬ್​ಗಳಲ್ಲಿ ಕಡ್ಡಾಯವಾಗಿ ಕೊವಿಡ್​-19 ನಿಯಮಗಳನ್ನ ಪಾಲಿಸಬೇಕು. ಗ್ರಾಹಕರಿಗೆ ಅಡ್ವಾನ್ಸ್ ಬುಕಿಂಗ್​ಗೆ ಅವಕಾಶ ನೀಡಬೇಕು. ಪಬ್​ ಹಾಗೂ ರೆಸ್ಟೋರೆಂಟ್​ಗಳಲ್ಲಿ  ಶೇ.50ರಷ್ಟು ಗ್ರಾಹಕರು ಬರಲು ಮಾತ್ರ ಅವಕಾಶ ನೀಡಬೇಕು. ಕೂಪನ್ ಪಡೆದ ಗ್ರಾಹಕರು ಮಾತ್ರ ಹೋಟೆಲ್​​ ಒಳಗೆ ಇರಬೇಕು. ಅವರು ರಸ್ತೆಗೆ ಬಂದು ಸೆಲಬ್ರೇಷನ್​ ಮಾಡಬಾರದು ಎಂದು ಕಮಲ್​ ಪಂತ್ ಮಾಹಿತಿ ನೀಡಿದರು.

ರಾತ್ರಿ ಕಚೇರಿಯಿಂದ ಮನೆಗೆ ತೆರಳುವವರಿದ್ದರೆ, ಆಸ್ಪತ್ರೆಗೆ ಹೋಗುವವರಿದ್ದರೆ ಇಲ್ಲವೆ ಇತರೆ ಯಾವುದೇ ಅಗತ್ಯ ಸೇವೆಗಾಗಿ ಸಂಚಾರ ನಡೆಸಬಹುದು.  ಅವರಿಗೆ ನಮ್ಮ ಕಡೆಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಆದರೆ, ರಾತ್ರಿ ಜಾಲಿ ರೈಡ್​ ಉದ್ದೇಶ ಇಟ್ಟುಕೊಂಡು ಸಂಚಾರ ನಡೆಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎನ್ನುವ ಎಚ್ಚರಿಕೆ ನೀಡಿದರು.

ಬೆಂಗಳೂರು ನಗರಾದ್ಯಂತ ಡ್ರಂಕ್​ ಆ್ಯಂಡ್​ ಡ್ರೈವ್ ತಪಾಸಣೆ ಮಾಡುತ್ತೇವೆ.  ಡಿ.31ರಂದು ಎಂದಿಗಿಂತ ಹೆಚ್ಚಿನ ಕಡೆ ಡ್ರಂಕ್​ ಆ್ಯಂಡ್​ ಡ್ರೈವ್ ತಪಾಸಣೆ ಮಾಡುತ್ತೇವೆ ಎಂದರು. ಈ ಮೂಲಕ ಕುಡಿದು ವಾಹನ ಓಡಿಸುವವರಿಗೆ ತಡೆ ಹಾಕಲು ಕ್ರಮ ಕೈಗೊಳ್ಳುತ್ತಿದ್ದೇವೆ ಎನ್ನುವ ಸಂದೇಶ ರವಾನಿಸಿದರು.

ಎಲ್ಲಾ ಫ್ಲೈಓವರ್ ಬಂದ್​:

ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಕೆಲವರು ಫ್ಲೈಓವರ್​ಗಳ ಮೇಲೆ ವಾಹನ ನಿಲ್ಲಿಸಿ ಗಲಾಟೆ ಮಾಡುತ್ತಾರೆ. ಇದಕ್ಕೆ ಬ್ರೇಕ್​ಹಾಕುವ ಉದ್ದೇಶದಿಂದ  ಡಿ.31ರಂದು ರಾತ್ರಿ 8 ಗಂಟೆಯಿಂದ ಫ್ಲೈಓವರ್​ಗಳು ಬಂದ್​ ಮಾಡಲು ಪೊಲೀಸರು ನಿರ್ಧರಿಸಿದ್ದಾರೆ. ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ಇರಲಿದೆ.

ಹೊಸ ವರ್ಷಕ್ಕೆ ಹೊಸ ಕಿಕ್ ಕೊಟ್ಟ ಚಂದನ್ ಶೆಟ್ಟಿ.. ಪಾರ್ಟಿ ಫ್ರೀಕ್​ಗೆ ನ್ಯೂ ಸಾಂಗ್ ರಿಲೀಸ್

Published On - 7:17 pm, Mon, 28 December 20

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us