AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಪೊಲೀಸ್​ ಇಲಾಖೆಯಿಂದ “ಸೇಫ್​​ ಕನೆಕ್ಟ್​​” ಆರಂಭ, ಇಲ್ಲಿದೆ ವಿಶೇಷತೆ

ಸಮಸ್ಯೆ ಅಥವಾ ದುರ್ಘಟನೆ ನಡೆದ ಸಂದರ್ಭದಲ್ಲಿ ಪೊಲೀಸರು ಬೇಗ ಬರಲ್ಲ ಎಂದು ಜನರು ಪೊಲೀಸ್​ ಇಲಾಖೆ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದರು. ಆದರೆ, ಇದಕ್ಕೆಲ್ಲ ಈಗ ಮುಕ್ತಿ ಸಿಕ್ಕಿದೆ. ನಿಮ್ಮ ಒಂದು ಕರೆ ಪೊಲೀಸ್​ ಇಲಾಖೆ ಕ್ಷಣಾರ್ಧದಲ್ಲಿ ಸ್ಥಳಕ್ಕೆ ಇರುವಂತೆ ಮಾಡುತ್ತದೆ. ಅದು ಹೇಗೆ? ಈ ಸುದ್ದಿ ಓದಿ.

ಕರ್ನಾಟಕ ಪೊಲೀಸ್​ ಇಲಾಖೆಯಿಂದ ಸೇಫ್​​ ಕನೆಕ್ಟ್​​ ಆರಂಭ, ಇಲ್ಲಿದೆ ವಿಶೇಷತೆ
ಬೆಂಗಳೂರು ಪೊಲೀಸ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jul 18, 2024 | 2:40 PM

Share

ಬೆಂಗಳೂರು, ಜುಲೈ 18: ಜನರ ಸುರಕ್ಷತೆ ದೃಷ್ಟಿಯಿಂದ ಪೊಲೀಸರು (Bengaluru City Police) ಹಲವು ಕ್ರಮಗಳನ್ನು ಕೈಗೊಳ್ಳುತ್ತಾ ಬಂದಿದ್ದಾರೆ. ವೇಗವಾಗಿ ಜನರ ಸುರಕ್ಷತೆಗೆ ಧಾವಿಸುವ ದೃಷ್ಟಿಯಿಂದ ಪೊಲೀಸ್​ ಇಲಾಖೆ 112 ಪ್ರಾರಂಭಿಸಿದೆ. ಇದೀಗ ಇನ್ನೂ ವೇಗವಾಗಿ ಜನರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ​​ ತಂತ್ರಜ್ಞಾನ ಮೊರೆ ಹೋಗಿದೆ. ಪೊಲೀಸ್ ಇಲಾಖೆ “ಸೇಫ್​ ಕನೆಕ್ಟ್​​” ಎಂಬ ವಿಶಷ್ಟ ಉಪಕ್ರಮ ಪರಿಚಯಿಸಿದ್ದು, ಇದರಿಂದ ಜನರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪೊಲೀಸರಿಗೆ ಅನಕೂಲವಾಗಲಿದೆ. ಯಾವ ಉಪಕ್ರಮ​, ಅದರ ವಿಶೇಷತೆ, ಹೇಗೆ ಕಾರ್ಯ ನಿರ್ವಹಿಸುತ್ತೆ ಎಂಬ ಎಲ್ಲ ಮಾಹಿತಿ ಇಲ್ಲಿದೆ.

“ಸೇಫ್ ಕನೆಕ್ಟ್” ಮೂಲಕ ಸುರಕ್ಷಿತವಾಗಿರಿ!

Karnataka State App (KSP) ಆ್ಯಪ್​ನಲ್ಲಿ ಸೇಫ್ ಕನೆಕ್ಟ್ ವೈಶಿಷ್ಟ್ಯವು, ತಕ್ಷಣವೇ ಪೊಲೀಸ್​ ಕಮಾಂಡ್ ಸೆಂಟರ್​​ಗೆ​ ​ ವಿಡಿಯೋ ಹಾಗೂ ಆಡಿಯೋ ಕಾಲ್​ ಮಾಡಬಹುದು. ಇದರಿಂದ ನಿಮ್ಮ ಲೈವ್ ಲೋಕೇಶನ್ ಪೊಲೀಸರಿಗೆ ತಿಳಿಯುತ್ತದೆ. ಆಗ ಪೊಲೀಸರು ತಕ್ಷಣ ನಿಮ್ಮ ನೆರವಿಗೆ ಧಾವಿಸುತ್ತಾರೆ.

ಆ್ಯಪ್​ ಡೌನ್​ಲೋಡ್​ ಹೇಗೆ

  1. ಪ್ಲೇಸ್ಟೋರ್​​ನಲ್ಲಿ ಕೆಎಸ್​​ಪಿ ಅಂತ ಸರ್ಚ್​​ ಮಾಡಿ, ಆ್ಯಪ್​ ಇನ್​ಸ್ಟಾಲ್​ ಮಾಡಿಕೊಳ್ಳಿ.
  2. ನಿಮ್ಮ ದೂರವಾಣಿ ಸಂಖ್ಯೆ, ಜಿಲ್ಲೆ ನಮೂದಿಸಿ ಲಾಗಿನ್​​ ಆಗಿ.
  3. ಆ್ಯಪ್​ ಕಾರ್ಯಾರಂಭವಾಗುತ್ತದೆ.
  4. ಆ್ಯಪ್​ ಒಳಗಡೆ ಸೇಫ್ ​ಕನೆಕ್ಟ್​​ ಮೇಲೆ ಕ್ಲಿಕ್​ ಮಾಡುವ ಮೂಲಕ ಆಡಿಯೋ ಅಥವಾ ವಿಡಿಯೋ ಕರೆ ಮಾಡಬಹುದು.

ಇದನ್ನೂ ಓದಿ: ಡಿಸೆಂಬರ್​ನಲ್ಲಿ ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗ ಶುರು, 15 ನಿಮಿಷಕ್ಕೊಂದು ರೈಲು

ಕಾರ್ಯನಿರ್ವಹಣೆ ಹೇಗೆ?

ತುರ್ತು ವಿಡಿಯೋ ಕರೆ: KSP ಆ್ಯಪ್ ಮೂಲಕ, ಸೇಫ್ ಕನೆಕ್ಟ್ ಸೌಲಭ್ಯ ಬಳಸಿ ತೊಂದರೆಯಲ್ಲಿರುವ ವ್ಯಕ್ತಿ ಕಮಾಂಡ್ ಸೆಂಟರ್​ಗೆ ತುರ್ತು ವಿಡಿಯೋ ಕರೆ ಮಾಡಬಹುದು.

ಘಟನೆಯ ಸ್ಥಳದ ಮಾಹಿತಿ ಹಂಚಿಕೆ: ಕರೆ ಮಾಡಿದ ವ್ಯಕ್ತಿಯ ಈಗಿನ ಸ್ಥಳದ ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಕಮಾಂಡ್ ಸೆಂಟರ್ ನಿಂದ ವ್ಯಕ್ತಿಯ ಸ್ಥಳವನ್ನು ಗುರುತಿಸಲು ಸಾಧ್ಯವಾಗುತ್ತದೆ.

ಘಟನೆಯ ಪ್ರಸಾರ: ಬಳಕೆದಾರರು ಘಟನೆಯ ನೇರಪ್ರಸಾರ ಮಾಡುವ ಮೂಲಕ ಘಟನೆಯ ದೃಶ್ಯ ಸಾಕ್ಷ್ಯ ಒದಗಿಸಿ. ಪರಿಣಾಮಕಾರಿ ಮತ್ತು ತ್ವರಿತ ಪ್ರತಿಕ್ರಿಯೆಯನ್ನು ಪಡೆಯಬಹುದು.

ಕಮಾಂಡ್ ಸೆಂಟರ್ ಪ್ರತಿಕ್ರಿಯೆ: ಪೊಲೀಸ್ ಅಧಿಕಾರಿಗಳು ಕರೆಯನ್ನು ಸ್ವೀಕರಿಸಿ, ಘಟನೆಯನ್ನು ಪರಿಶೀಲಿಸಿ, ಹತ್ತಿರದ ಹೊಯ್ಸಳ ವಾಹನವನ್ನು ಸ್ಥಳಕ್ಕೆ ಕಳುಹಿಸುವ ಮೂಲಕ ಪರಿಸ್ಥಿತಿಯ ಮೇಲೆ ಸಂಪೂರ್ಣ ನಿಯಂತ್ರಣವನ್ನು ತೆಗೆದುಕೊಳ್ಳುತ್ತಾರೆ.

ನಾಗರೀಕರಿಗೆ ಪ್ರಯೋಜನಗಳು

 ತುರ್ತು ಸಂದರ್ಭದಲ್ಲಿ ಪೊಲೀಸರೊಂದಿಗೆ ತ್ವರಿತವಾಗಿ ಸಂಪರ್ಕ ಸಾಧಿಸಿ, ನೈಜ-ಸಮಯದ ಸಂವಹನ ಮತ್ತು ಲೈವ್ ಟ್ರ್ಯಾಕಿಂಗ್ ಸಮಯೋಚಿತ ಸಹಾಯವನ್ನು ಖಚಿತಪಡಿಸುತ್ತದೆ. ನಿಮ್ಮ ವರದಿಯನ್ನು ರೆಕಾರ್ಡ್ ಮಾಡಿ ಗಂಭೀರವಾಗಿ ಪರಿಗಣಿಸಲಾಗುವುದು.

ಪೊಲೀಸರಿಗೆ ಪ್ರಯೋಜನಗಳು

ವಿಡಿಯೋ ಮತ್ತು ಲೊಕೇಷನ್​ ಮಾಹಿತಿಯ ಮೂಲಕ, ಘಟನೆಯ ಸ್ಪಷ್ಟ ಚಿತ್ರಣ ಲಭ್ಯವಿರುತ್ತದೆ. ನಿಖರವಾದ ಸ್ಥಳ ಬ್ಯಾಕಿಂಗ್​ನಿಂದ, ತ್ವರಿತವಾಗಿ ಘಟನೆಯ ಸ್ಥಳಕ್ಕೆ ತಲುಪಿ, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.

ರೆಕಾರ್ಡ್ ಮಾಡಿದ ಕರೆಗಳು ಮತ್ತು ವರದಿಗಳು ಅಮೂಲ್ಯವಾದ ಪುರಾವೆಗಳಾಗಿ ಕಾರ್ಯನಿರ್ವಹಿಸುತ್ತವೆ. ಸಮುದಾಯದಲ್ಲಿ ವಿಶ್ವಾಸ ಮತ್ತು ಸಹಕಾರವನ್ನು ಉತ್ತಮಗೊಳಿಸುವುದು.

ಪ್ರಮುಖ ಅಂಶಗಳು

  • ಸೇಫ್ ಕನೆಕ್ಟ್ ಬಳಕೆದಾರರಿಗೆ ಸುರಕ್ಷತೆ ಮತ್ತು ಹೆಚ್ಚಿಸುತ್ತದೆ.
  • ಕರೆ ಮಾಡಿದವರ ಲೈವ್ ಲೊಕೇಶನ್ ಅನ್ನು ಕಮಾಂಡ್ಸೊಂಟರ್ ನೊಂದಿಗೆ ಹಂಚಿಕೊಳ್ಳುತ್ತದೆ.
  • ಬೆಂಗಳೂರು ನಗರ ಪೊಲೀಸರು ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತೆಗೆದುಕೊಂಡು ತ್ವರಿತ ಪರಿಹಾರವನ್ನು ಒದಗಿಸುತ್ತಾರೆ.
  • ಬಳಕೆದಾರರಿಗೆ ಪೊಲೀಸರೊಂದಿಗೆ ಸಲೀಸಾಗಿ ಸಂಪರ್ಕ ಸಾಧಿಸಲು ಅನುವು ಮಾಡಿಕೊಡುತ್ತದೆ.
  • ಬಳಕೆದಾರರು ತಮ್ಮ ಡೇಟಾ ರಕ್ಷಿಸಲಾಗಿದೆ ಮತ್ತು ಅವರ ಸಂವಹನಗಳು ಎಲ್ಲಾ ಸಮಯದಲ್ಲೂ ಖಾಸಗಿಯಾಗಿವೆ ಎಂದು ನಂಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:38 pm, Thu, 18 July 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ