AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಮಕ್ಕಳಿದ್ದರೂ ಪ್ರಿಯಕರನ ಜೊತೆ ಲಾಡ್ಜ್​​​ಗೆ ಬಂದು ಹೆಣವಾದಳು: ಬೆಂಕಿ ದುರಂತಕ್ಕೆ ಅಸಲಿ ಕಾರಣ ಬಯಲು

ಯಲಹಂಕದ ನ್ಯೂಟೌನ್‌ನಲ್ಲಿರೋ ಕಿಚನ್‌ ಫ್ಯಾಮಿಲಿ ರೆಸ್ಟೋರೆಂಟ್‌ ಮೇಲೆ ಲಾಡ್ಜ್‌ ಕೂಡಾ ಇದೆ. ಅದೇ ಲಾಡ್ಜ್‌ನಲ್ಲಿ ರೂಮ್‌ ಮಾಡಿಕೊಂಡಿದ್ದ ಅದೊಂದು ಜೋಡಿ ವಾರದಿಂದವಾಗಿತ್ತು. ಹೀಗಿರುವಾಗ್ಲೇ ಅಲ್ಲಿ ಘೋರವಾಗಿದೆ. ಬೆಂಕಿಯಲ್ಲಿ ಯುವಕ ಬೆಂದು ಹೋದ್ರೆ, ಹೊಗೆಯಿಂದಲೇ ಯುವತಿ ಸಾವಿನ ಮನೆ ಸೇರಿದ್ದಾಳೆ. ಅಗ್ನಿ ಶಾಮದ ಸಿಬ್ಬಂದಿ ಬರುವಷ್ಟರಲ್ಲೇ ರೂಮ್‌ನಲ್ಲಿದ್ದ ಯುವಕ ರಮೇಶ್‌ ಎಂಬಾತ ಸುಟ್ಟು ಕರಕಲಾಗಿದ್ದ. ಇನ್ನು ಅದೇ ರೂಮಿನ ಬಾತ್​ ರೂಮ್ ನಲ್ಲಿದ್ದ ಕಾವೇರಿ ಎನ್ನುವ ಯುವತಿ ಹೊಗೆಯಿಂದ ಉಸಿರುಗಟ್ಟಿ ಪ್ರಾಣ ಬಿಟ್ಟಿದ್ದಳು. ಇನ್ನು ಈ ಘಟನೆಗೆ ಅಸಲಿ ಕಾರಣ ಬಹಿರಂಗವಾಗಿದೆ.

ರಮೇಶ್ ಬಿ. ಜವಳಗೇರಾ
|

Updated on: Oct 10, 2025 | 5:29 PM

Share

ಬೆಂಗಳೂರು, (ಅಕ್ಟೋಬರ್ 10): ಯಲಹಂಕ ಲಾಡ್ಜ್ ನಲ್ಲಿ ಬೆಂಕಿ ದುರಂತದಲ್ಲಿ (Yelahanka fire Incident) ಜೋಡಿ ಸಾವನ್ನಪ್ಪಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಯಲಹಂಕದ ನ್ಯೂಟೌನ್‌ನಲ್ಲಿರೋ ಕಿಚನ್‌ ಫ್ಯಾಮಿಲಿ ರೆಸ್ಟೋರೆಂಟ್‌ ಇದು. ಇದೇ ರೆಸ್ಟೋರೆಂಟ್‌ನೊಳಗೆ ಕೂಲ್‌ ಕಂಫರ್ಟ್ ಅನ್ನೋ ಲಾಡ್ಜ್‌ ಕೂಡಾ ಇದೆ. ಈ ಲಾಡ್ಜ್‌ನಲ್ಲೇ ಗುರುವಾರ ಸಂಜೆ ಘೋರವೇ ನಡೆದು ಹೋಗಿದೆ. ಅದೇ ಲಾಡ್ಜ್‌ನಲ್ಲಿ ರೂಮ್‌ ಮಾಡಿಕೊಂಡಿದ್ದ ಜೋಡಿ ದುರಂತ ಸಾವುಕಂಡಿದೆ. ಬೆಂಕಿಯಲ್ಲಿ ಯುವಕ ಬೆಂದು ಹೋದ್ರೆ, ಹೊಗೆಯಿಂದಲೇ ಯುವತಿ ಸಾವಿನ ಮನೆ ಸೇರಿದ್ದಾಳೆ. ಗದಗ ಮೂಲದ ರಮೇಶ್ ಮತ್ತು ಹನಗುಂದ ಮೂಲದ ಕಾವೇರಿ ದುರಂತ ಸಾವು ಕಂಡಿದ್ದಾಳೆ. ಗಂಡ ಮೂವರು ಮಕ್ಕಳಿಗಾಗಿ ದುಡಿಯಲು ಬೆಂಗಳೂರಿಗೆ ಬಂದವಳು ಪ್ರಿಯತಮನ ತೆಕ್ಕೆಗೆ ಸಿಲುಕಿ ಹೆಣವಾಗಿದ್ದಾಳೆ.

ಒಂದು ವಾರದಿಂದ ಗದಗ ಮೂಲದ ರಮೇಶ್ ಮತ್ತು ಹನಗುಂದ ಮೂಲದ ಕಾವೇರಿ ಇದೇ ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದರು. ಕಾವೇರಿಗೆ 2016 ರಲ್ಲೇ ಮದುವೆಯಾಗಿ ಮೂರು ಮಕ್ಕಳಿದ್ದಾರೆ. ಆದ್ರೆ, ದುಡಿಯೋ ಸಲುವಾಗಿ ಗಂಡ ಮಕ್ಕಳನ್ನ ಊರಲ್ಲಿ ಬಿಟ್ಟು ಬೆಂಗಳೂರಿಗೆ ಬಂದು ಸ್ಪಾವೊಂದರಲ್ಲಿ ಕೆಲಸಕ್ಕೆ ಸೇರಿದ್ದಳು. ಬಳಿಕ ಗಾರೇ ಕೆಲಸ ಮಾಡುತ್ತಿದ್ದ ರಮೇಶನ ಪರಿಚವಾಗಿ ಇಬ್ಬರ ನಡುವೆ ಸಲುಗೆ ಬೆಳೆದಿದೆ. ಹೀಗಾಗಿ ಈ ಜೋಡಿ ಲಾಡ್ಜ್‌ನಲ್ಲಿ ರೂಮ್‌ ಮಾಡಿಕೊಂಡಿತ್ತು. ಆದ್ರೆ ನಿನ್ನೆ(ಅ.10) ಬೆಳಗ್ಗೆ ಲಾಡ್ಜ್ ನಲ್ಲಿ ಇಬ್ಬರಿಗೂ ಜಗಳ‌ ಆಗಿದ್ದು, ಮಧ್ಯಾಹ್ನ ಕಾವೇರಿ ರೂಂನಲ್ಲಿದ್ದರೆ, ರಮೇಶ್ ಹೊರಗಡೆ ಹೋಗಿ ಪೆಟ್ರೋಲ್ ತಂದಿದ್ನಂತೆ. ಈ ವೇಳೆ ರೂಮ್ ಗೆ ಮತ್ತೊಬ್ಬ ವ್ಯಕ್ತಿ ಬಂದು ಹೋಗಿರೋ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಯಲಹಂಕ ರೆಸ್ಟೋರೆಂಟ್​ ಅಗ್ನಿ ದುರಂತಕ್ಕೆ ಟ್ವಿಸ್ಟ್: ಮೃತ ಯುವಕ-ಯುವತಿ ಇದ್ದ ರೂಮಿಗೆ ಬಂದಿದ್ದ 3ನೇ ವ್ಯಕ್ತಿ ಯಾರು? ಆಗಿದ್ದೇನು?

ರೂಮಿನಲ್ಲಿ ಕಾವೇರಿ ಹಾಗೂ ರಮೇಶನಿಗೆ ಇಬ್ಬರಿಗೂ ಮತ್ತೆ ಗಲಾಟೆ ಆಗಿರೋ ಸಾಧ್ಯತೆಯಿದ್ದು ಈ ವೇಳೆ ರಮೇಶ ಪೆಟ್ರೋಲ್ ಸುರಿದುಕೊಂಡು ಮೇನ್ ಡೋರ್ ಲಾಕ್ ಮಾಡಿದ್ದಾನೆ. ಭಯದಲ್ಲಿ ಕಾವೇರಿ ಬೆಂಕಿಯಿಂದ ತಪ್ಪಿಸಿಕೊಳ್ಳಲು ಬಾತ್ ರೂಂಗೆ ಓಡಿ ಹೋಗಿ ಲಾಕ್ ಮಾಡಿಕೊಂಡಿದ್ದಾಳೆ. ಬಳಿಕ ತನ್ನ ಸ್ಪಾ ಮಾಲೀಕರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾಳೆ. ಆದ್ರೆ, ಅಷ್ಟೊತ್ತಿಗಾಗಲೇ ಬೆಂಕಿ ಇಡೀ ರೂಂ ವ್ಯಾಪಿಸಿದೆ. ಬೆಂಕಿಯಿಂದಾಗಿ ರಮೇಶ್ ಸಾವಾಗಿದ್ರೆ. ಹೊಗೆಯಿಂದ ಉಸಿರುಗಟ್ಟಿ ಕಾವೇರಿ ಸಾವನ್ನಪ್ಪಿದ್ದಾಳೆ. ಕಾವೇರಿಗೆ ಮದುವೆಯಾಗಿ ಮೂರು ಮಕ್ಕಳಿದ್ದು, ಪತಿ ಹಾಗೂ ಮಕ್ಕಳನ್ನ ಬಿಟ್ಟು ಬಂದವಳು ರಮೇಶನ ಜೊತೆ ಪರಲೋಕ ಸೇರಿದ್ದಾಳೆ. ಗಂಡ ಮಕ್ಕಳು ಅಂತಾ ಕಾವೇರಿ ಬದುಕಿದ್ರೆ ಇವತ್ತು ಈ ಪರಿಸ್ಥಿತಿ ಬರ್ತಿರಲಿಲ್ಲ. ಪರ ಪುರುಷನ ತೆಕ್ಕೆಗೆ ಬಿದ್ದು ಅತನ ಜೊತೆ ತಾನೂ ಹೆಣವಾಗಿದ್ದಾಳೆ.

ಇನ್ನು ರಮೇಶ್ ತಾನು ಆತ್ಮಹತ್ಯೆ ಮಾಡಿಕೊಳ್ಳುವುದರ ಜತೆಗೆ ಮದ್ವೆಗೆ ನಿರಾಕರಿಸಿದ ಪ್ರೇಯಸಿ ಕಾವೇರಿಯನ್ನೂ ಸಹ ಬಲಿ ಪಡೆದಿದ್ದಾರೆ.  ಸದ್ಯ ಈ ಬಗ್ಗೆ ಯಲಹಂಕ ಪೊಲೀಸ್ರು ತನಿಖೆ ನಡೆಸುತ್ತಿದ್ದಾರೆ.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್