AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ

ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದ್ದು, ಕಲಬುರಗಿ ಹಾಗೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗಳಿಗೆ ಇತ್ತೀಚೆಗೆ ಹುಸಿ ಬಾಂಬ್ ಇ-ಮೇಲ್ ಬೆದರಿಕೆ ಬಂದಿದೆ. ಬೆಂಗಳೂರಿನಲ್ಲಿ ತಮಿಳು ಭಾಷೆಯ ಇ-ಮೇಲ್ ಬಂದ ನಂತರ ಪೊಲೀಸರು ತೀವ್ರ ಶೋಧ ನಡೆಸಿದರು. ಯಾವುದೇ ಸ್ಫೋಟಕಗಳು ಪತ್ತೆಯಾಗದ ಕಾರಣ ಇದು ಹುಸಿ ಬೆದರಿಕೆ ಎಂದು ದೃಢಪಟ್ಟಿದೆ. ಅಪರಾಧಿಗಳನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ವಿಭಾಗದ ನೆರವು ಪಡೆಯಲಾಗುತ್ತಿದೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Mar 03, 2026 | 7:05 PM

Share

ಬೆಂಗಳೂರು, ಮಾ.3: ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಶಾಲೆ, ಇದೀಗ ಕೋರ್ಟ್​​​ಗೂ ಬೆದರಿಕೆ ಬರುತ್ತಿದೆ. ಇಂದು ಮಧ್ಯಾಹ್ನ ಕಲಬುರ್ಗಿಯ ಜಿಲ್ಲಾ ಕೋರ್ಟ್​​ಗೆ ಬೆದರಿಕೆ ಬಂದಿತ್ತು. ಇದೀಗ ರಾಜಧಾನಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ಅಪರಿಚಿತರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಮತ್ತು ಭದ್ರತಾ ಪಡೆಗಳು ಇಡೀ ಕೋರ್ಟ್ ಆವರಣವನ್ನು ಜಾಲಾಡಿದ್ದು, ಅಂತಿಮವಾಗಿ ಇದೊಂದು ‘ಹುಸಿ ಬಾಂಬ್ ಬೆದರಿಕೆ’ (Hoax Call) ಎಂದು ದೃಢಪಟ್ಟಿದೆ. ಇಂದು (ಮಾರ್ಚ್ 3, 2026) ಬೆಳಿಗ್ಗೆ ಕೋರ್ಟ್‌ನ ಅಧಿಕೃತ ಇ-ಮೇಲ್ ವಿಳಾಸಕ್ಕೆ ಸಂದೇಶ ಬಂದಿತ್ತು. ಇನ್ನು ಈ ಬೆದರಿಕೆ ಇ-ಮೇಲ್ ತಮಿಳು ಭಾಷೆಯಲ್ಲಿದೆ.

ಸುದ್ದಿ ತಿಳಿಯುತ್ತಿದ್ದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬಾಂಬ್ ನಿಷ್ಕ್ರಿಯ ದಳ (BDS) ಮತ್ತು ಶ್ವಾನದಳದೊಂದಿಗೆ ಕೋರ್ಟ್‌ನ ಪ್ರತಿ ಕೊಠಡಿ, ಕಾರಿಡಾರ್ ಮತ್ತು ಪಾರ್ಕಿಂಗ್ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸಲಾಯಿತು.

ಇದನ್ನೂ ಓದಿ: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಓಡಿದ ವಕೀಲರು

ಸುದೀರ್ಘ ಪರಿಶೀಲನೆಯ ನಂತರ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಸ್ಫೋಟಕಗಳು ಪತ್ತೆಯಾಗಿಲ್ಲ. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಲು ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇ-ಮೇಲ್ ಕಳುಹಿಸಿದ ಕಿಡಿಗೇಡಿಗಳ ಪತ್ತೆಗಾಗಿ ಸೈಬರ್ ಕ್ರೈಂ ವಿಭಾಗದ ನೆರವು ಪಡೆಯಲಾಗುತ್ತಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ