AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Update: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ನರೇಶ್​ ಗೌಡ ಹಾಗೂ ಶ್ರವಣ್​ಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್

Ramesh Jarkiholi CD case: ಕಳೆದ ಮಾರ್ಚ್ 2ರಿಂದ ತಲೆಮರೆಸಿಕೊಂಡಿರುವ ಈ ಇಬ್ಬರೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು ತನಿಖಾ ತಂಡ ಇಬ್ಬರನ್ನೂ ಪತ್ತೆಹಚ್ಚಲು ಶ್ರಮಿಸುತ್ತಿತ್ತು.

Big Update: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ನರೇಶ್​ ಗೌಡ ಹಾಗೂ ಶ್ರವಣ್​ಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್
ಪ್ರಮುಖ ಆರೋಪಿ ನರೇಶ್​
Follow us
TV9 Web
| Updated By: guruganesh bhat

Updated on:Jun 08, 2021 | 4:57 PM

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಸಿಡಿ ಪ್ರಕರಣದ ರೂವಾರಿಗಳು ಎಂದು ಹೇಳಲಾದ ನರೇಶ್​ ಗೌಡ ಹಾಗೂ ಶ್ರವಣ್​ಗೆ ಬೆಂಗಳೂರಿನ 91ನೇ ಸಿಸಿಹೆಚ್​ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆದ ಮಾರ್ಚ್ 2ರಿಂದ ತಲೆಮರೆಸಿಕೊಂಡಿರುವ ಈ ಇಬ್ಬರೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು ತನಿಖಾ ತಂಡ ಇಬ್ಬರನ್ನೂ ಪತ್ತೆಹಚ್ಚಲು ಶ್ರಮಿಸುತ್ತಿತ್ತು.

ತಮ್ಮ ಮೇಲೆ ಕೇಳಿಬಂದ ಸಿಡಿ ಪ್ರಕರಣದ ನಂತರ ಈ ಇಬ್ಬರ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹನಿಟ್ರ್ಯಾಪ್‌ ಮತ್ತು ಬ್ಲ್ಯಾಕ್​ಮೇಲ್‌ ಆರೋಪ ಮಾಡಿದ್ದರು. ನಂತರದ ಬೆಳವಣಿಗೆಗಳಲ್ಲಿ ಇಬ್ಬರು ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ನಾನು ಸುರಕ್ಷಿತವಾಗಿದ್ದೇನೆ, ನನಗೆ ಯಾವ ಅಪಾಯವೂ ಇಲ್ಲ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ

ಮೇ 31ರಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ಯುವತಿ ತಂದೆ ದಾಖಲಿಸಿದ್ದ ಹೆಬಿಯಸ್ ಕಾರ್ಪಸ್ ಅರ್ಜಿ ಇತ್ಯರ್ಥಗೊಳಿಸಿದೆ. ಈ ವೇಳೆ ವಿಡಿಯೋ ಸಂವಾದದಲ್ಲಿ ಹಾಜರಾದ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ತಾನು ಸುರಕ್ಷಿತವಾಗಿ ಇರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾಳೆ. ಯುವತಿಯ ಈ ಸ್ಪಷ್ಟೀಕರಣ ಆಲಿಸಿದ ಕೋರ್ಟ್ ಹೆಬಿಯಸ್ ಕಾರ್ಪಸ್ ಅರ್ಜಿಯನ್ನು ಇತ್ಯರ್ಥಗೊಳಿಸಿದೆ.

ಈ ಮುನ್ನ ಯುವತಿಯ ತಂದೆ ಧಾರವಾಡ ಹೈಕೋರ್ಟ್ ಪೀಠಕ್ಕೆ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದ ಕಾರಣ ಯುವತಿ ಇರುವ ಸ್ಥಳಕ್ಕೆ ತೆರಳಲು ರಿಜಿಸ್ಟ್ರಾರ್ ಜನರಲ್‌ಗೆ ಹೈಕೋರ್ಟ್ ಸೂಚಿಸಿತ್ತು. ಅದರಂತೆ ರಿಜಿಸ್ಟ್ರಾರ್ ಜನರಲ್ ಶಿವಶಂಕರೇಗೌಡ ಅವರು  ಯುವತಿ ನಿವಾಸಕ್ಕೆ  ಭೇಟಿ ನೀಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಯುವತಿ ಮಾತನಾಡಿದರು. ಈ ವೇಳೆ ತನ್ನ ತಂದೆಯೊಂದಿಗೆ ಸಮಾಲೋಚಿಸಲು ಯುವತಿ ನಕಾರ ವ್ಯಕ್ತಪಡಿಸಿದಳು.  ಎಲ್ಲವೂ ಸರಿ ಹೋದಾಗ ತಂದೆ ಜೊತೆ ಮಾತನಾಡುತ್ತೇನೆ. ಸದ್ಯ ತಂದೆಯೊಂದಿಗೆ ಮಾತನಾಡುವುದಿಲ್ಲ ಎಂದ ಸಂತ್ರಸ್ತ ಯುವತಿ,  ಅಕ್ರಮ ಬಂಧನದ ಆರೋಪ ನಿರಾಕರಿಸಿದಳು. ಹೀಗಾಗಿ ಕೋರ್ಟ್ ಹೆಬಿಯಸ್ ಕಾರ್ಪಸ್ ಅರ್ಜಿಯನ್ನು ಇತ್ಯರ್ಥಗೊಳಿಸಿತು.

ನಿಮಗೆ ನ್ಯಾಯಸಮ್ಮತ ತನಿಖೆ ಇಷ್ಟವಿಲ್ಲವೇ? ಇದೇ ವೇಳೆ ಇಂದು (ಮೇ 31)  ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (Central Bureau of Investigation – CBI) ತನಿಖೆ ನಡೆಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್​ ವಿಚಾರಣೆ ನಡೆಸಿತು. ಈ ವೇಳೆ ಪ್ರಕರಣದ ತನಿಖೆಗೆಂದು ರಚಿಸಿರುವ ವಿಶೇಷ ತನಿಖಾ ದಳ (Special Investigation Team – SIT) ಹೈಕೋರ್ಟ್​ಗೆ ತನಿಖೆಯ ಪ್ರಗತಿ ವರದಿ ಸಲ್ಲಿಸಿತು. ಸೀಲ್ ಮಾಡಿದ್ದ ಮುಚ್ಚಿದ ಲಕೋಟೆಯಲ್ಲಿದ್ದ ವರದಿಯನ್ನು ಸೀಲ್ ತೆರೆದು ವಿಭಾಗೀಯ ಪೀಠ ಪರಿಶೀಲಿಸಿತು.

ಪೋಷಕರು ಸಲ್ಲಿಸಿದ್ದ ದೂರಿನಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂಬ ಹೇಳಿಕೆಯಿತ್ತು. ಯುವತಿ ನೀಡಿದ ಕೇಸ್‌ನ ತನಿಖೆ ಅಂತಿಮ ಹಂತದಲ್ಲಿದೆ ಎಂದು ಹೈಕೋರ್ಟ್‌ಗೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹೇಳಿಕೆ ನೀಡಿದರು. ಸಂತ್ರಸ್ತ ಯುವತಿಯು ಸುಪ್ರೀಂಕೋರ್ಟ್​ ಮುಖ್ಯನ್ಯಾಯಮೂರ್ತಿಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ, ಆ ಪತ್ರದ ಬಗ್ಗೆಯೂ ಹೈಕೋರ್ಟ್​ ಎಸ್​ಐಟಿಯಿಂದ ವರದಿ ಕೇಳಿತು.

ಸಿಬಿಐ ತನಿಖೆ ನಡೆಸಬೇಕು ಎಂದು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ರಮೇಶ್ ಜಾರಕಿಹೊಳಿ ಪರ ವಕೀಲ ಸಿ.ವಿ.ನಾಗೇಶ್ ಆಕ್ಷೇಪಣೆ ಸಲ್ಲಿಸಿದರು. ಮೂರನೇ ವ್ಯಕ್ತಿಗಳು ತನಿಖೆಯನ್ನು ನಿರ್ಧರಿಸಬಾರದು ಎಂದು ಅವರು ವಾದಿಸಿದರು. ಈ ವೇಳೆ ಮಾತನಾಡಿದ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ, ‘ನ್ಯಾಯ ಸಮ್ಮತ ತನಿಖೆ ನಡೆಸುವುದು ನಮ್ಮ ಉದ್ದೇಶ. ನಿಮಗೆ ನ್ಯಾಯಸಮ್ಮತ ತನಿಖೆ ಇಷ್ಟವಿಲ್ಲವೇ. ನೀವು ಆಕ್ಷೇಪ ಎತ್ತಿದರೆ ನಾವು ಹಾಗೆ ಭಾವಿಸಬೇಕಾಗುತ್ತದೆ’ ಎಂದು ತಿಳಿಸಿದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ರಕ್ತ, ವೀರ್ಯ, ಉಗುರು, ಕೂದಲ ಸ್ಯಾಂಪಲ್ ಪಡೆದು ತನಿಖೆ ನಡೆಸಿಲ್ಲ: ಹೈಕೋರ್ಟ್‌ಗೆ ಯುವತಿಯಿಂದ‌ ಅರ್ಜಿ

TV9 Digital Live: ರಮೇಶ್ ಜಾರಕಿಹೊಳಿ ಹೊಸ ಹೇಳಿಕೆಯಿಂದ ಪ್ರಕರಣ ಎತ್ತ ಸಾಗಲಿದೆ? ಪರಿಣಾಮ ಏನಾಗಬಹುದು?

(Bengaluru Court grants anticipatory bail to Naresh Gowda and Shravan in Ramesh Jarkiholi CD Case)

Published On - 4:42 pm, Tue, 8 June 21

ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್