AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಾಂಗ್ರೆಸ್ ಶಾಸಕರ ಸಂಬಂಧಿ ಬ್ಯಾಗ್​ನಲ್ಲಿ 2 ಜೀವಂತ ಬುಲೆಟ್ ಪತ್ತೆ

Bangalore International Airport: ಎನ್​.ಎ ಹ್ಯಾರಿಸ್ ಅವರ ಅಂಕಲ್ ಆಗಿರುವ ಉಮರ್ ಫರೂಕ್ ಹ್ಯಾರಿಸ್ ನಲಪಾಡ್ ಅವರ ಬ್ಯಾಗ್​ನಲ್ಲಿ ಎರಡು ಜೀವಂತ ಬುಲೆಟ್​ಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ.

Bengaluru: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಾಂಗ್ರೆಸ್ ಶಾಸಕರ ಸಂಬಂಧಿ ಬ್ಯಾಗ್​ನಲ್ಲಿ 2 ಜೀವಂತ ಬುಲೆಟ್ ಪತ್ತೆ
ಬೆಂಗಳೂರು ವಿಮಾನ ನಿಲ್ದಾಣ
TV9 Web
| Edited By: |

Updated on:Oct 13, 2021 | 2:20 PM

Share

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಅವರ ಸಂಬಂಧಿಯನ್ನು ಏರ್​ಪೋರ್ಟ್ ಅಧಿಕಾರಿಗಳು ತಡೆಹಿಡಿದಿದ್ದಾರೆ. ಎನ್​.ಎ ಹ್ಯಾರಿಸ್ ಅವರ ಅಂಕಲ್ ಆಗಿರುವ ಉಮರ್ ಫರೂಕ್ ಹ್ಯಾರಿಸ್ ನಲಪಾಡ್ ಅವರ ಬ್ಯಾಗ್​ನಲ್ಲಿ ಎರಡು ಜೀವಂತ ಬುಲೆಟ್​ಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ.

ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಅವರ ಅಂಕಲ್ ಫರೂಕ್ ನಲಪಾಡ್ ಬೆಂಗಳೂರಿನಿಂದ ದುಬೈ ವಿಮಾನವನ್ನು ಹತ್ತಲು ಇಂದು ಬೆಳಗ್ಗೆ 9.30ರ ವೇಳೆಗೆ ಬೆಂಗಳೂರಿನ ವಿಮಾನ ನಿಲ್ದಾಣದೊಳಗೆ ಹೋದಾಗ ಅವರ ಕ್ಯಾಬಿನ್ ಬ್ಯಾಗ್​ನಲ್ಲಿ ಎರಡು ಜೀವಂತ ಗುಂಡುಗಳು ಪತ್ತೆಯಾಗಿವೆ. ಅವರು ತೆಗೆದುಕೊಂಡು ಹೋಗುತ್ತಿದ್ದ ಬ್ಯಾಗ್​ನಲ್ಲಿ ಬುಲೆಟ್​ಗಳು ಪತ್ತೆಯಾಗುತ್ತಿದ್ದಂತೆ ತಕ್ಷಣ ಭದ್ರತಾ ಪಡೆಗೆ ಹಾಗೂ ಸಿಐಎಸ್​ಎಫ್ ಅಧಿಕಾರಿಗಳಿಗೆ ವಿಷಯ ತಿಳಿಸಲಾಯಿತು.

ಬಳಿಕ ಫರೂಕ್ ಹ್ಯಾರಿಸ್ ನಲಪಾಡ್ ತಮ್ಮ ಬಳಿ ಇದ್ದ ಗನ್​ನ ಲೈಸೆನ್ಸ್ ಅನ್ನು ಪೊಲೀಸರಿಗೆ ತೋರಿಸಿದರು. ತಾವು ಅದೇ ಬ್ಯಾಗ್​ನಲ್ಲಿ ಬುಲೆಟ್ ಹಾಗೂ ಗನ್ ಅನ್ನು ಇಟ್ಟಿದ್ದಾಗಿಯೂ, ಅವಸರದಲ್ಲಿ ಅದನ್ನು ಮನೆಯಲ್ಲಿ ತೆಗೆದಿಡಲು ಮರೆತಿದ್ದಾಗಿಯೂ ಅವರು ಪೊಲೀಸರಿಗೆ ತಿಳಿಸಿದರು. ಬೆಳಗ್ಗೆ ಬೇಗ ಗಡಿಬಿಡಿಯಿಂದ ಮನೆಯಿಂದ ಹೊರಟಿದ್ದರಿಂದ ಆ ಬುಲೆಟ್​ಗಳು ಬ್ಯಾಗ್​ನಲ್ಲಿಯೇ ಉಳಿದಿವೆ ಎಂದು ಅವರು ಸಮಜಾಯಿಷಿ ನೀಡಿದರು.

ಅವರು ನೀಡಿದ ಲೈಸೆನ್ಸ್ ಅನ್ನು ಪರಿಶೀಲಿಸಿದ ವಿಮಾನದ ಪೊಲೀಸ್ ಸಿಬ್ಬಂದಿ ಅದು ಅಸಲಿ ಎಂದು ಖಚಿತವಾದ ಬಳಿಕ ಅವರಿಗೆ ವಿಮಾನ ಏರಲು ಅವಕಾಶ ನೀಡಿದರು. ಅವರ ಬಳಿಯಿದ್ದ ಎರಡು ಬುಲೆಟ್​ಗಳನ್ನು ಸೀಜ್ ಮಾಡಲಾಗಿದೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಜಯನಗರ, ವೈಟ್​ಫೀಲ್ಡ್, ರಾಜಾಜಿನಗರ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

Karnataka Weather Today: ಬೆಂಗಳೂರಿನಲ್ಲಿ ಅ. 17ರವರೆಗೆ ವಿಪರೀತ ಮಳೆ; ಕರಾವಳಿಯಲ್ಲೂ ನಿಲ್ಲದ ವರುಣನ ಆರ್ಭಟ

Published On - 1:54 pm, Wed, 13 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ