AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಾಂಗ್ರೆಸ್ ಶಾಸಕರ ಸಂಬಂಧಿ ಬ್ಯಾಗ್​ನಲ್ಲಿ 2 ಜೀವಂತ ಬುಲೆಟ್ ಪತ್ತೆ

Bangalore International Airport: ಎನ್​.ಎ ಹ್ಯಾರಿಸ್ ಅವರ ಅಂಕಲ್ ಆಗಿರುವ ಉಮರ್ ಫರೂಕ್ ಹ್ಯಾರಿಸ್ ನಲಪಾಡ್ ಅವರ ಬ್ಯಾಗ್​ನಲ್ಲಿ ಎರಡು ಜೀವಂತ ಬುಲೆಟ್​ಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ.

Bengaluru: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಾಂಗ್ರೆಸ್ ಶಾಸಕರ ಸಂಬಂಧಿ ಬ್ಯಾಗ್​ನಲ್ಲಿ 2 ಜೀವಂತ ಬುಲೆಟ್ ಪತ್ತೆ
ಬೆಂಗಳೂರು ವಿಮಾನ ನಿಲ್ದಾಣ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 13, 2021 | 2:20 PM

Share

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಅವರ ಸಂಬಂಧಿಯನ್ನು ಏರ್​ಪೋರ್ಟ್ ಅಧಿಕಾರಿಗಳು ತಡೆಹಿಡಿದಿದ್ದಾರೆ. ಎನ್​.ಎ ಹ್ಯಾರಿಸ್ ಅವರ ಅಂಕಲ್ ಆಗಿರುವ ಉಮರ್ ಫರೂಕ್ ಹ್ಯಾರಿಸ್ ನಲಪಾಡ್ ಅವರ ಬ್ಯಾಗ್​ನಲ್ಲಿ ಎರಡು ಜೀವಂತ ಬುಲೆಟ್​ಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ.

ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಅವರ ಅಂಕಲ್ ಫರೂಕ್ ನಲಪಾಡ್ ಬೆಂಗಳೂರಿನಿಂದ ದುಬೈ ವಿಮಾನವನ್ನು ಹತ್ತಲು ಇಂದು ಬೆಳಗ್ಗೆ 9.30ರ ವೇಳೆಗೆ ಬೆಂಗಳೂರಿನ ವಿಮಾನ ನಿಲ್ದಾಣದೊಳಗೆ ಹೋದಾಗ ಅವರ ಕ್ಯಾಬಿನ್ ಬ್ಯಾಗ್​ನಲ್ಲಿ ಎರಡು ಜೀವಂತ ಗುಂಡುಗಳು ಪತ್ತೆಯಾಗಿವೆ. ಅವರು ತೆಗೆದುಕೊಂಡು ಹೋಗುತ್ತಿದ್ದ ಬ್ಯಾಗ್​ನಲ್ಲಿ ಬುಲೆಟ್​ಗಳು ಪತ್ತೆಯಾಗುತ್ತಿದ್ದಂತೆ ತಕ್ಷಣ ಭದ್ರತಾ ಪಡೆಗೆ ಹಾಗೂ ಸಿಐಎಸ್​ಎಫ್ ಅಧಿಕಾರಿಗಳಿಗೆ ವಿಷಯ ತಿಳಿಸಲಾಯಿತು.

ಬಳಿಕ ಫರೂಕ್ ಹ್ಯಾರಿಸ್ ನಲಪಾಡ್ ತಮ್ಮ ಬಳಿ ಇದ್ದ ಗನ್​ನ ಲೈಸೆನ್ಸ್ ಅನ್ನು ಪೊಲೀಸರಿಗೆ ತೋರಿಸಿದರು. ತಾವು ಅದೇ ಬ್ಯಾಗ್​ನಲ್ಲಿ ಬುಲೆಟ್ ಹಾಗೂ ಗನ್ ಅನ್ನು ಇಟ್ಟಿದ್ದಾಗಿಯೂ, ಅವಸರದಲ್ಲಿ ಅದನ್ನು ಮನೆಯಲ್ಲಿ ತೆಗೆದಿಡಲು ಮರೆತಿದ್ದಾಗಿಯೂ ಅವರು ಪೊಲೀಸರಿಗೆ ತಿಳಿಸಿದರು. ಬೆಳಗ್ಗೆ ಬೇಗ ಗಡಿಬಿಡಿಯಿಂದ ಮನೆಯಿಂದ ಹೊರಟಿದ್ದರಿಂದ ಆ ಬುಲೆಟ್​ಗಳು ಬ್ಯಾಗ್​ನಲ್ಲಿಯೇ ಉಳಿದಿವೆ ಎಂದು ಅವರು ಸಮಜಾಯಿಷಿ ನೀಡಿದರು.

ಅವರು ನೀಡಿದ ಲೈಸೆನ್ಸ್ ಅನ್ನು ಪರಿಶೀಲಿಸಿದ ವಿಮಾನದ ಪೊಲೀಸ್ ಸಿಬ್ಬಂದಿ ಅದು ಅಸಲಿ ಎಂದು ಖಚಿತವಾದ ಬಳಿಕ ಅವರಿಗೆ ವಿಮಾನ ಏರಲು ಅವಕಾಶ ನೀಡಿದರು. ಅವರ ಬಳಿಯಿದ್ದ ಎರಡು ಬುಲೆಟ್​ಗಳನ್ನು ಸೀಜ್ ಮಾಡಲಾಗಿದೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಜಯನಗರ, ವೈಟ್​ಫೀಲ್ಡ್, ರಾಜಾಜಿನಗರ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

Karnataka Weather Today: ಬೆಂಗಳೂರಿನಲ್ಲಿ ಅ. 17ರವರೆಗೆ ವಿಪರೀತ ಮಳೆ; ಕರಾವಳಿಯಲ್ಲೂ ನಿಲ್ಲದ ವರುಣನ ಆರ್ಭಟ

Published On - 1:54 pm, Wed, 13 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ