AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ.. 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ವಶಕ್ಕೆ

ದುಬೈನಿಂದ ದೇವನಹಳ್ಳಿ ಬಳಿಯಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋಗೆ ಬಂದಿದ್ದ ಪಾರ್ಸಲ್​ಗಳನ್ನು ಪರಿಶೀಲನೆ ನಡೆಸುವಾಗ ಖದೀಮರ ಈ ಆಟ ಬಯಲಾಗಿದೆ. ಪಾರ್ಸಲ್​ಗಳ ಪರಿಶೀಲನೆ ವೇಳೆ ಲಕ್ಷ ಲಕ್ಷ ಮೌಲ್ಯದ ವಿದೇಶಿ ವಸ್ತುಗಳು ಪತ್ತೆಯಾಗಿವೆ.

ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ.. 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ವಶಕ್ಕೆ
ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
ಆಯೇಷಾ ಬಾನು
|

Updated on: Mar 11, 2021 | 3:32 PM

Share

ದೇವನಹಳ್ಳಿ: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ಕಳಿಸಿದ್ದ ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೊರಿಯರ್ ಮೂಲಕ ಸ್ಮಗ್ಲಿಂಗ್​ಗೆ ಯತ್ನಿಸಿದ ವೇಳೆ ವಶಕ್ಕೆ ಪಡೆಯಲಾಗಿದೆ.

ದುಬೈನಿಂದ ದೇವನಹಳ್ಳಿ ಬಳಿಯಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋಗೆ ಬಂದಿದ್ದ ಪಾರ್ಸಲ್​ಗಳನ್ನು ಪರಿಶೀಲನೆ ನಡೆಸುವಾಗ ಖದೀಮರ ಈ ಆಟ ಬಯಲಾಗಿದೆ. ಪಾರ್ಸಲ್​ಗಳ ಪರಿಶೀಲನೆ ವೇಳೆ ಲಕ್ಷ ಲಕ್ಷ ಮೌಲ್ಯದ ವಿದೇಶಿ ವಸ್ತುಗಳು ಪತ್ತೆಯಾಗಿವೆ. 20 ಸಾವಿರ ವಿದೇಶಿ ಸಿಗರೇಟ್, 15 ವಾಚ್​, 32 ಮದ್ಯದ ಬಾಟಲಿಗಳು, 30 ಐ ಫೋನ್​ಗಳು ಸೇರಿದಂತೆ ಒಟ್ಟು 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಲು ಸ್ಮಗ್ಲರ್ಸ್​ಗಳು ಕೋರಿಯರ್ ಮೂಲಕ ವಸ್ತುಗಳನ್ನು ಕಳಿಸುತ್ತಿದ್ದರು. ಸದ್ಯ ಈಗ ಎಲ್ಲಾ ವಸ್ತುಗಳನ್ನ ವಶಕ್ಕೆ ಪಡೆದಿದ್ದು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

customs officers seized iphone

ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಇನ್ನು ಕೆಲ ತಿಂಗಳ ಹಿಂದೆ ಇದೇ ರೀತಿ ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 13 ಲಕ್ಷ ಮೌಲ್ಯದ ಚಿನ್ನ ಮತ್ತು ವಿದೇಶಿ ಸಿಗರೇಟ್​ಗಳನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ದುಬೈನಿಂದ ಬಂದಿದ್ದ ಪ್ರಯಾಣಿಕರೊಬ್ಬರು ಫುಡ್ ಪ್ಯಾಕೆಟ್​ಗಳ ರೀತಿಯಲ್ಲಿ ಚಿನ್ನ ಮತ್ತು ಫಾರಿನ್ ಸಿಗರೇಟ್​ಗಳನ್ನು ಸಾಗಿಸುತ್ತಿದ್ದರು. ಲಗೇಜ್ ಸ್ಕ್ಯಾನ್ ಮಾಡಿದ ವೇಳೆ ಅನುಮಾನ ಬಂದು ಪರಿಶೀಲಿಸಿದಾಗ ₹ 13.02 ಲಕ್ಷ ಮೌಲ್ಯದ 165.89 ಗ್ರಾಂ ಚಿನ್ನ ಹಾಗೂ 12 ಸಾವಿರ ಗ್ರಾಂನಷ್ಟು ಸಿಗರೇಟ್ ಪತ್ತೆಯಾಗಿತ್ತು. ಬಳಿಕ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಅಕ್ರಮವಾಗಿ ಸಾಗಿಸುತ್ತಿದ್ದ 664 ಗ್ರಾಂ ಚಿನ್ನ ಜಪ್ತಿ: ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಬಂಗಾರ ವಶ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!