AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ.. 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ವಶಕ್ಕೆ

ದುಬೈನಿಂದ ದೇವನಹಳ್ಳಿ ಬಳಿಯಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋಗೆ ಬಂದಿದ್ದ ಪಾರ್ಸಲ್​ಗಳನ್ನು ಪರಿಶೀಲನೆ ನಡೆಸುವಾಗ ಖದೀಮರ ಈ ಆಟ ಬಯಲಾಗಿದೆ. ಪಾರ್ಸಲ್​ಗಳ ಪರಿಶೀಲನೆ ವೇಳೆ ಲಕ್ಷ ಲಕ್ಷ ಮೌಲ್ಯದ ವಿದೇಶಿ ವಸ್ತುಗಳು ಪತ್ತೆಯಾಗಿವೆ.

ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ.. 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ವಶಕ್ಕೆ
ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
ಆಯೇಷಾ ಬಾನು
|

Updated on: Mar 11, 2021 | 3:32 PM

Share

ದೇವನಹಳ್ಳಿ: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ಕಳಿಸಿದ್ದ ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೊರಿಯರ್ ಮೂಲಕ ಸ್ಮಗ್ಲಿಂಗ್​ಗೆ ಯತ್ನಿಸಿದ ವೇಳೆ ವಶಕ್ಕೆ ಪಡೆಯಲಾಗಿದೆ.

ದುಬೈನಿಂದ ದೇವನಹಳ್ಳಿ ಬಳಿಯಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋಗೆ ಬಂದಿದ್ದ ಪಾರ್ಸಲ್​ಗಳನ್ನು ಪರಿಶೀಲನೆ ನಡೆಸುವಾಗ ಖದೀಮರ ಈ ಆಟ ಬಯಲಾಗಿದೆ. ಪಾರ್ಸಲ್​ಗಳ ಪರಿಶೀಲನೆ ವೇಳೆ ಲಕ್ಷ ಲಕ್ಷ ಮೌಲ್ಯದ ವಿದೇಶಿ ವಸ್ತುಗಳು ಪತ್ತೆಯಾಗಿವೆ. 20 ಸಾವಿರ ವಿದೇಶಿ ಸಿಗರೇಟ್, 15 ವಾಚ್​, 32 ಮದ್ಯದ ಬಾಟಲಿಗಳು, 30 ಐ ಫೋನ್​ಗಳು ಸೇರಿದಂತೆ ಒಟ್ಟು 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಲು ಸ್ಮಗ್ಲರ್ಸ್​ಗಳು ಕೋರಿಯರ್ ಮೂಲಕ ವಸ್ತುಗಳನ್ನು ಕಳಿಸುತ್ತಿದ್ದರು. ಸದ್ಯ ಈಗ ಎಲ್ಲಾ ವಸ್ತುಗಳನ್ನ ವಶಕ್ಕೆ ಪಡೆದಿದ್ದು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

customs officers seized iphone

ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಇನ್ನು ಕೆಲ ತಿಂಗಳ ಹಿಂದೆ ಇದೇ ರೀತಿ ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 13 ಲಕ್ಷ ಮೌಲ್ಯದ ಚಿನ್ನ ಮತ್ತು ವಿದೇಶಿ ಸಿಗರೇಟ್​ಗಳನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ದುಬೈನಿಂದ ಬಂದಿದ್ದ ಪ್ರಯಾಣಿಕರೊಬ್ಬರು ಫುಡ್ ಪ್ಯಾಕೆಟ್​ಗಳ ರೀತಿಯಲ್ಲಿ ಚಿನ್ನ ಮತ್ತು ಫಾರಿನ್ ಸಿಗರೇಟ್​ಗಳನ್ನು ಸಾಗಿಸುತ್ತಿದ್ದರು. ಲಗೇಜ್ ಸ್ಕ್ಯಾನ್ ಮಾಡಿದ ವೇಳೆ ಅನುಮಾನ ಬಂದು ಪರಿಶೀಲಿಸಿದಾಗ ₹ 13.02 ಲಕ್ಷ ಮೌಲ್ಯದ 165.89 ಗ್ರಾಂ ಚಿನ್ನ ಹಾಗೂ 12 ಸಾವಿರ ಗ್ರಾಂನಷ್ಟು ಸಿಗರೇಟ್ ಪತ್ತೆಯಾಗಿತ್ತು. ಬಳಿಕ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಅಕ್ರಮವಾಗಿ ಸಾಗಿಸುತ್ತಿದ್ದ 664 ಗ್ರಾಂ ಚಿನ್ನ ಜಪ್ತಿ: ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಬಂಗಾರ ವಶ

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!