AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ.. 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ವಶಕ್ಕೆ

ದುಬೈನಿಂದ ದೇವನಹಳ್ಳಿ ಬಳಿಯಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋಗೆ ಬಂದಿದ್ದ ಪಾರ್ಸಲ್​ಗಳನ್ನು ಪರಿಶೀಲನೆ ನಡೆಸುವಾಗ ಖದೀಮರ ಈ ಆಟ ಬಯಲಾಗಿದೆ. ಪಾರ್ಸಲ್​ಗಳ ಪರಿಶೀಲನೆ ವೇಳೆ ಲಕ್ಷ ಲಕ್ಷ ಮೌಲ್ಯದ ವಿದೇಶಿ ವಸ್ತುಗಳು ಪತ್ತೆಯಾಗಿವೆ.

ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ.. 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ವಶಕ್ಕೆ
ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
ಆಯೇಷಾ ಬಾನು
ಆಯೇಷಾ ಬಾನು|

Updated on: Mar 11, 2021 | 3:32 PM

Share

ದೇವನಹಳ್ಳಿ: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ಕಳಿಸಿದ್ದ ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೊರಿಯರ್ ಮೂಲಕ ಸ್ಮಗ್ಲಿಂಗ್​ಗೆ ಯತ್ನಿಸಿದ ವೇಳೆ ವಶಕ್ಕೆ ಪಡೆಯಲಾಗಿದೆ.

ದುಬೈನಿಂದ ದೇವನಹಳ್ಳಿ ಬಳಿಯಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋಗೆ ಬಂದಿದ್ದ ಪಾರ್ಸಲ್​ಗಳನ್ನು ಪರಿಶೀಲನೆ ನಡೆಸುವಾಗ ಖದೀಮರ ಈ ಆಟ ಬಯಲಾಗಿದೆ. ಪಾರ್ಸಲ್​ಗಳ ಪರಿಶೀಲನೆ ವೇಳೆ ಲಕ್ಷ ಲಕ್ಷ ಮೌಲ್ಯದ ವಿದೇಶಿ ವಸ್ತುಗಳು ಪತ್ತೆಯಾಗಿವೆ. 20 ಸಾವಿರ ವಿದೇಶಿ ಸಿಗರೇಟ್, 15 ವಾಚ್​, 32 ಮದ್ಯದ ಬಾಟಲಿಗಳು, 30 ಐ ಫೋನ್​ಗಳು ಸೇರಿದಂತೆ ಒಟ್ಟು 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಲು ಸ್ಮಗ್ಲರ್ಸ್​ಗಳು ಕೋರಿಯರ್ ಮೂಲಕ ವಸ್ತುಗಳನ್ನು ಕಳಿಸುತ್ತಿದ್ದರು. ಸದ್ಯ ಈಗ ಎಲ್ಲಾ ವಸ್ತುಗಳನ್ನ ವಶಕ್ಕೆ ಪಡೆದಿದ್ದು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

customs officers seized iphone

ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಇನ್ನು ಕೆಲ ತಿಂಗಳ ಹಿಂದೆ ಇದೇ ರೀತಿ ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 13 ಲಕ್ಷ ಮೌಲ್ಯದ ಚಿನ್ನ ಮತ್ತು ವಿದೇಶಿ ಸಿಗರೇಟ್​ಗಳನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ದುಬೈನಿಂದ ಬಂದಿದ್ದ ಪ್ರಯಾಣಿಕರೊಬ್ಬರು ಫುಡ್ ಪ್ಯಾಕೆಟ್​ಗಳ ರೀತಿಯಲ್ಲಿ ಚಿನ್ನ ಮತ್ತು ಫಾರಿನ್ ಸಿಗರೇಟ್​ಗಳನ್ನು ಸಾಗಿಸುತ್ತಿದ್ದರು. ಲಗೇಜ್ ಸ್ಕ್ಯಾನ್ ಮಾಡಿದ ವೇಳೆ ಅನುಮಾನ ಬಂದು ಪರಿಶೀಲಿಸಿದಾಗ ₹ 13.02 ಲಕ್ಷ ಮೌಲ್ಯದ 165.89 ಗ್ರಾಂ ಚಿನ್ನ ಹಾಗೂ 12 ಸಾವಿರ ಗ್ರಾಂನಷ್ಟು ಸಿಗರೇಟ್ ಪತ್ತೆಯಾಗಿತ್ತು. ಬಳಿಕ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಅಕ್ರಮವಾಗಿ ಸಾಗಿಸುತ್ತಿದ್ದ 664 ಗ್ರಾಂ ಚಿನ್ನ ಜಪ್ತಿ: ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಬಂಗಾರ ವಶ

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’