Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ.. 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ವಶಕ್ಕೆ

ದುಬೈನಿಂದ ದೇವನಹಳ್ಳಿ ಬಳಿಯಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋಗೆ ಬಂದಿದ್ದ ಪಾರ್ಸಲ್​ಗಳನ್ನು ಪರಿಶೀಲನೆ ನಡೆಸುವಾಗ ಖದೀಮರ ಈ ಆಟ ಬಯಲಾಗಿದೆ. ಪಾರ್ಸಲ್​ಗಳ ಪರಿಶೀಲನೆ ವೇಳೆ ಲಕ್ಷ ಲಕ್ಷ ಮೌಲ್ಯದ ವಿದೇಶಿ ವಸ್ತುಗಳು ಪತ್ತೆಯಾಗಿವೆ.

ಏರ್​ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ.. 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ವಶಕ್ಕೆ
ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
Follow us
ಆಯೇಷಾ ಬಾನು
|

Updated on: Mar 11, 2021 | 3:32 PM

ದೇವನಹಳ್ಳಿ: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ಕಳಿಸಿದ್ದ ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೊರಿಯರ್ ಮೂಲಕ ಸ್ಮಗ್ಲಿಂಗ್​ಗೆ ಯತ್ನಿಸಿದ ವೇಳೆ ವಶಕ್ಕೆ ಪಡೆಯಲಾಗಿದೆ.

ದುಬೈನಿಂದ ದೇವನಹಳ್ಳಿ ಬಳಿಯಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋಗೆ ಬಂದಿದ್ದ ಪಾರ್ಸಲ್​ಗಳನ್ನು ಪರಿಶೀಲನೆ ನಡೆಸುವಾಗ ಖದೀಮರ ಈ ಆಟ ಬಯಲಾಗಿದೆ. ಪಾರ್ಸಲ್​ಗಳ ಪರಿಶೀಲನೆ ವೇಳೆ ಲಕ್ಷ ಲಕ್ಷ ಮೌಲ್ಯದ ವಿದೇಶಿ ವಸ್ತುಗಳು ಪತ್ತೆಯಾಗಿವೆ. 20 ಸಾವಿರ ವಿದೇಶಿ ಸಿಗರೇಟ್, 15 ವಾಚ್​, 32 ಮದ್ಯದ ಬಾಟಲಿಗಳು, 30 ಐ ಫೋನ್​ಗಳು ಸೇರಿದಂತೆ ಒಟ್ಟು 44.98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಲು ಸ್ಮಗ್ಲರ್ಸ್​ಗಳು ಕೋರಿಯರ್ ಮೂಲಕ ವಸ್ತುಗಳನ್ನು ಕಳಿಸುತ್ತಿದ್ದರು. ಸದ್ಯ ಈಗ ಎಲ್ಲಾ ವಸ್ತುಗಳನ್ನ ವಶಕ್ಕೆ ಪಡೆದಿದ್ದು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

customs officers seized iphone

ಐಫೋನ್, ವಾಚ್​ಗಳು, ವಿದೇಶಿ ಸಿಗರೇಟ್ ಪ್ಯಾಕ್​ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಇನ್ನು ಕೆಲ ತಿಂಗಳ ಹಿಂದೆ ಇದೇ ರೀತಿ ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 13 ಲಕ್ಷ ಮೌಲ್ಯದ ಚಿನ್ನ ಮತ್ತು ವಿದೇಶಿ ಸಿಗರೇಟ್​ಗಳನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ದುಬೈನಿಂದ ಬಂದಿದ್ದ ಪ್ರಯಾಣಿಕರೊಬ್ಬರು ಫುಡ್ ಪ್ಯಾಕೆಟ್​ಗಳ ರೀತಿಯಲ್ಲಿ ಚಿನ್ನ ಮತ್ತು ಫಾರಿನ್ ಸಿಗರೇಟ್​ಗಳನ್ನು ಸಾಗಿಸುತ್ತಿದ್ದರು. ಲಗೇಜ್ ಸ್ಕ್ಯಾನ್ ಮಾಡಿದ ವೇಳೆ ಅನುಮಾನ ಬಂದು ಪರಿಶೀಲಿಸಿದಾಗ ₹ 13.02 ಲಕ್ಷ ಮೌಲ್ಯದ 165.89 ಗ್ರಾಂ ಚಿನ್ನ ಹಾಗೂ 12 ಸಾವಿರ ಗ್ರಾಂನಷ್ಟು ಸಿಗರೇಟ್ ಪತ್ತೆಯಾಗಿತ್ತು. ಬಳಿಕ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಅಕ್ರಮವಾಗಿ ಸಾಗಿಸುತ್ತಿದ್ದ 664 ಗ್ರಾಂ ಚಿನ್ನ ಜಪ್ತಿ: ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಬಂಗಾರ ವಶ

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ