AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಹಿಳಾ ವಿಜ್ಞಾನಿಗೆ ಡಿಜಿಟಲ್ ಅರೆಸ್ಟ್; ಸೈಬರ್ ವಂಚಕರು ದೋಚಿದ್ದೆಷ್ಟು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಹಲವಾರು ಜನರು ಸೈಬರ್ ವಂಚನೆಗೆ ಒಳಗಾಗಿದ್ದಾರೆ. ಇದೀಗ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಐಐಎಸ್‌ಸಿಯ ನ್ಯೂ ಹೌಸಿಂಗ್ ಕಾಲೋನಿ ನಿವಾಸಿ ಮಹಿಳಾ ವಿಜ್ಞಾನಿ ಸೈಬರ್ ವಂಚನೆಗೆ ತುತ್ತಾಗಿ ಬರೋಬ್ಬರಿ 8.8 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮಾನವ ಕಳ್ಳ ಸಾಗಣೆ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿ ಹಣ ಪೀಕಿದ್ದಾರೆ.

ಬೆಂಗಳೂರು: ಮಹಿಳಾ ವಿಜ್ಞಾನಿಗೆ ಡಿಜಿಟಲ್ ಅರೆಸ್ಟ್; ಸೈಬರ್ ವಂಚಕರು ದೋಚಿದ್ದೆಷ್ಟು ಗೊತ್ತಾ?
ಸೈಬರ್ ವಂಚನೆಗೆ ಒಳಗಾದ IISC ವಿಜ್ಞಾನಿ
Shivaprasad B
| Edited By: |

Updated on: Sep 28, 2025 | 12:06 PM

Share

ಬೆಂಗಳೂರು, ಸೆಪ್ಟೆಂಬರ್ 28: ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆಯ ಜಾಲ ಹೆಚ್ಚುತ್ತಲೇ ಇದೆ. ಪ್ರಖ್ಯಾತ ನಟರು, ಶ್ರೀಮಂತರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುವ ಈ ವಂಚಕರು ಈಗ ಜನ ಸಾಮಾನ್ಯರನ್ನೂ ಬಿಡುತ್ತಿಲ್ಲ. ಹೀಗೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಐಐಎಸ್‌ಸಿಯ ನ್ಯೂ ಹೌಸಿಂಗ್ ಕಾಲೋನಿ ನಿವಾಸಿ ಮಹಿಳಾ ವಿಜ್ಞಾನಿ  ಡಾ.ಸಂಧ್ಯಾ ಡಿಜಿಟಲ್ ಅರೆಸ್ಟ್​ ಒಳಗಾಗಿದ್ದಾರೆ.ಸೈಬರ್ ವಂಚಕರು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಮಾನವ ಕಳ್ಳ ಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದೀರಿ ಎಂದು ಬೆದರಿಕೆ ಹಾಕಿದ್ದು, ಜೊತೆಗೆ ಬರೋಬ್ಬರಿ 8.8 ಲಕ್ಷ ರೂ. ದೋಚಿದ್ದಾರೆ.

ಇದನ್ನೂ ಓದಿ ಸೈಬರ್ ವಂಚಕರಿಂದ ಸುಧಾಮೂರ್ತಿ ಗ್ರೇಟ್ ಎಸ್ಕೇಪ್: ಮಾಡಿದ್ದೇನು ಗೊತ್ತಾ?

ಮಹಿಳಾ ವಿಜ್ಞಾನಿ ಮೋಸ ಹೋಗಿದ್ದೇಗೆ?

ಸೆ.16ರಂದು ಸಂಧ್ಯಾ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ, ‘ನಿಮ್ಮ ಮೊಬೈಲ್ ನಂಬರ್ ಬೇರೆ ಕಡೆಗಳಲ್ಲಿ ಬಳಸಲಾಗುತ್ತಿದೆ’ ಎಂದಿದ್ದಾನೆ. ಕೆಲ ಹೊತ್ತಿನ ಬಳಿಕ ಮತ್ತೊಂದು ನಂಬರ್​ನಿಂದ ಸಂಧ್ಯಾ  ಹೆಸರಿನಲ್ಲಿ 17 ಪ್ರಕರಣಗಳು ದಾಖಲಾಗಿವೆ ಎಂದು ಮೆಸೇಜ್ ಮಾಡಿದ್ದಾನೆ. ಅಷ್ಟೇ ಅಲ್ಲದೇ ‘ಈ ಪ್ರಕರಣದ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ನಿಮ್ಮ ಬಳಿ ಮಾತನಾಡುತ್ತಾರೆ’ ಎಂದು ಇನ್ನೋರ್ವ ಕರೆ ಮಾಡಿದ್ದಾನೆ. ‘ನೀವು ಮಾನವ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದೀರಿ, ಸುಪ್ರೀಂ ಕೋರ್ಟ್‌ ಕೆಲ ದಾಖಲೆಗಳನ್ನು ತೋರಿಸಿ, ನಿಮ್ಮನ್ನು ಸಿಬಿಐ ಅಧಿಕಾರಿಗಳು ಅರೆಸ್ಟ್ ಮಾಡುತ್ತಾರೆ’ ಎಂದು ಬೆದರಿಕೆ ಹಾಕಿದ್ದಾನೆ.

ಅದಕ್ಕೆ ಗಾಬರಿಗೊಂಡ ಸಂಧ್ಯಾ , ಆ ರೀತಿ ಯಾವುದೇ ಅಕ್ರಮ ಕೆಲಸದಲ್ಲಿ ತಾನು ತೊಡಗಿಲ್ಲ ಎಂದಿದ್ದಾರೆ. ಆದರೂ ಪ್ರಕರಣದಿಂದ ಪಾರಾಗಬೇಕಾದರೆ ಅವರು ಸೂಚಿಸಿದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬೇಕೆಂದು ಹೆದರಿಸಿದ್ದಾರೆ. 8.8 ಲಕ್ಷ ರೂ.ಗಳನ್ನು ತಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿದ್ದಾರೆ. ವಿಜ್ಞಾನಿ ಸಂಧ್ಯಾ ದೂರಿನ ಮೇರೆಗೆ ಕೇಂದ್ರ ವಿಭಾಗದ CEN  ಠಾಣೆಯಲ್ಲಿ FIR ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್