ಪ್ರತಿಭಟನಾಕಾರರಲ್ಲಿ ದೇಶಾಭಿಮಾನ ಕಂಡು ರಾಷ್ಟ್ರಗೀತೆ ಹಾಡಿದ ಡಿಸಿಪಿ

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಿನ್ನೆ ಟೌನ್​ಹಾಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರನ್ನು ಟ್ಯಾಕಲ್ ಮಾಡಲು ಪ್ರತಿಭಟನಾಕಾರರು ಮುಂದಾಗಿದ್ರು. ಮಾನವ ಸರಪಳಿ ಮಾಡಿ ಪೌರತ್ವ ಕಿಚ್ಚನ್ನು ಹಬ್ಬಿಸಿದ್ರು. ಪೊಲೀಸರು ಪ್ರತಿಭಟನಾಕಾರರನ್ನು ನಿಭಾಯಿಸಲು ಹರಸಾಹಸ ಪಟ್ರು. ಈ ವೇಳೆ ಡಿಸಿಪಿ ಚೇತನ್ ಸಿಂಗ್ ರಾಠೋರ್ ಎಲ್ಲಾ ಪ್ರತಿಭಟನಾಕಾರರ ಜೊತೆ ಸೇರಿ ರಾಷ್ಟ್ರಗೀತೆಯನ್ನು ಹಾಡಿ ದೇಶ ಪ್ರೇಮವನ್ನು ಸಾರಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ ವೈರಲ್ ಆಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಡಿಸಿಪಿ ಚೇತನ್, ಪ್ರತಿಭಟನೆಯಲ್ಲಿ ಸ್ಕೂಲ್ ಮಕ್ಕಳು, […]

ಪ್ರತಿಭಟನಾಕಾರರಲ್ಲಿ ದೇಶಾಭಿಮಾನ ಕಂಡು ರಾಷ್ಟ್ರಗೀತೆ ಹಾಡಿದ ಡಿಸಿಪಿ
ಸಾಧು ಶ್ರೀನಾಥ್​

Updated on: Dec 20, 2019 | 4:57 PM

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಿನ್ನೆ ಟೌನ್​ಹಾಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರನ್ನು ಟ್ಯಾಕಲ್ ಮಾಡಲು ಪ್ರತಿಭಟನಾಕಾರರು ಮುಂದಾಗಿದ್ರು. ಮಾನವ ಸರಪಳಿ ಮಾಡಿ ಪೌರತ್ವ ಕಿಚ್ಚನ್ನು ಹಬ್ಬಿಸಿದ್ರು. ಪೊಲೀಸರು ಪ್ರತಿಭಟನಾಕಾರರನ್ನು ನಿಭಾಯಿಸಲು ಹರಸಾಹಸ ಪಟ್ರು. ಈ ವೇಳೆ ಡಿಸಿಪಿ ಚೇತನ್ ಸಿಂಗ್ ರಾಠೋರ್ ಎಲ್ಲಾ ಪ್ರತಿಭಟನಾಕಾರರ ಜೊತೆ ಸೇರಿ ರಾಷ್ಟ್ರಗೀತೆಯನ್ನು ಹಾಡಿ ದೇಶ ಪ್ರೇಮವನ್ನು ಸಾರಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ ವೈರಲ್ ಆಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಡಿಸಿಪಿ ಚೇತನ್, ಪ್ರತಿಭಟನೆಯಲ್ಲಿ ಸ್ಕೂಲ್ ಮಕ್ಕಳು, ಮಹಿಳೆಯರು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ರು. ಇವರಲ್ಲಿ ಕೆಲವರು ವಿಡಿಯೋ ಮಾಡ್ತಿದ್ರು, ಕೆಲವರು ಕೂಗಾಡ್ತಿದ್ರು, ಕೆಲವರು ರಾಷ್ಟ್ರಧ್ವಜ ಹಿಡಿದಿದ್ರು. ಅವರಲ್ಲಿ ನಾನು ದೇಶಾಭಿಮಾನ ಕಂಡೆ. ಆಗ ರಾಷ್ಟ್ರಗೀತೆ ಹಾಡ್ಬೇಕು ಅನಿಸಿತು ಅದಕ್ಕೆ ಹಾಡಿದೆ ಎಂದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us