AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ಮೋದಿಯಿಂದ ಚಾಲನೆ

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್​​ ಮೂಲಕ ಚಾಲನೆ ನೀಡಲಿದ್ದಾರೆ.

Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ಮೋದಿಯಿಂದ ಚಾಲನೆ
ವಂದೇಭಾರತ ಎಕ್ಸಪ್ರೆಸ್​​ (ಎಡಚಿತ್ರ) ಪ್ರಧಾನಿ ಮೋದಿ (ಬಲಚಿತ್ರ)
ವಿವೇಕ ಬಿರಾದಾರ
|

Updated on:Jun 27, 2023 | 7:05 AM

Share

ಧಾರವಾಡ: ಬೆಂಗಳೂರು-ಧಾರವಾಡ (Bengaluru-Dharwad) ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್​​ಪ್ರೆಸ್ (Vande Bharat Express)​​ ರೈಲು ಪ್ರಯೋಗಾರ್ಥ ಸಂಚಾರ ಜೂ.19 ರಂದು ಯಶಸ್ವಿಯಾಗಿದೆ. ಇಂದು (ಜೂ.27) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭೋಪಾಲ್‌ನ ರಾಣಿ ಕಮಲಾಪಥಿ ರೈಲ್ವೆ ನಿಲ್ದಾಣದಿಂದ ವರ್ಚುವಲ್​​ ಮೂಲಕ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಪ್ರತಿ ಮಂಗಳವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ರೈಲು ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಿ ಮಧ್ಯೆ ದಾವಣಗೆರೆಯಲ್ಲಿ ಮಾತ್ರ ನಿಲ್ಲುತ್ತದೆ. ವಂದೇ ಭಾರತ್ ರೈಲು ಬೆಂಗಳೂರು-ಧಾರವಾಡ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದ್ದು, ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ.

ಇದನ್ನೂ ಓದಿ: Vande Bharat: ವಿಡಿಯೋ ನೋಡಿ; ವಂದೇ ಭಾರತ್ ರೈಲಿನ ಬಗ್ಗೆ ಶಾಲಾ ಮಕ್ಕಳಿಗೆ ಸಚಿವ ಅಶ್ವಿನಿ ವೈಷ್ಣವ್ ಪಾಠ!

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಈ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ. ಪ್ರಯಾಣಿಕರ ಆದ್ಯತೆಯನುಸಾರ ಬೋಗಿಗಳ ಸಂಖ್ಯೆ ಹೆಚ್ಚಿಗೆ ಮಾಡಲಾಗುವುದು ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ವಂದೇ ಭಾರತ ಎಕ್ಸಪ್ರೆಸ್​ ರೈಲಿನ ಸಮಯ

ಬೆಳಿಗ್ಗೆ 5:54ಕ್ಕೆ ಬೆಂಗಳೂರಿನಿಂದ ಹೊರಟು, 5:55ಕ್ಕೆ ಯಶವಂತಪುರ, 9:15 ದಾವಣಗೆರೆ, 11:30 ಎಸ್​ಎಸ್​ಎಸ್​ ಹುಬ್ಬಳ್ಳಿ ಕೊನೆಯದಾಗಿ 12:10ಕ್ಕೆ ಧಾರವಾಡ ತಲುಪಲಿದೆ.

ಮರಳಿ ಧಾರವಾಡ ನಿಲ್ದಾಣದಿಂದ ಮಧ್ಯಾಹ್ನ 1:15ಕ್ಕೆ ಹೊರಟು, 1:35ಕ್ಕೆ ಎಸ್​ಎಸ್​ಎಸ್​ ಹುಬ್ಬಳ್ಳಿ 3.38ಕ್ಕೆ ದಾವಣಗೆರೆ, ರಾತ್ರಿ 7:13ಕ್ಕೆ ಯಶವಂತಪುರ ಹಾಗೂ 7:45ಕ್ಕೆ ಬೆಂಗಳೂರು ತಲುಪಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sat, 24 June 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ