Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ಮೋದಿಯಿಂದ ಚಾಲನೆ

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್​​ ಮೂಲಕ ಚಾಲನೆ ನೀಡಲಿದ್ದಾರೆ.

Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ಮೋದಿಯಿಂದ ಚಾಲನೆ
ವಂದೇಭಾರತ ಎಕ್ಸಪ್ರೆಸ್​​ (ಎಡಚಿತ್ರ) ಪ್ರಧಾನಿ ಮೋದಿ (ಬಲಚಿತ್ರ)
Follow us
ವಿವೇಕ ಬಿರಾದಾರ
|

Updated on:Jun 27, 2023 | 7:05 AM

ಧಾರವಾಡ: ಬೆಂಗಳೂರು-ಧಾರವಾಡ (Bengaluru-Dharwad) ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್​​ಪ್ರೆಸ್ (Vande Bharat Express)​​ ರೈಲು ಪ್ರಯೋಗಾರ್ಥ ಸಂಚಾರ ಜೂ.19 ರಂದು ಯಶಸ್ವಿಯಾಗಿದೆ. ಇಂದು (ಜೂ.27) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭೋಪಾಲ್‌ನ ರಾಣಿ ಕಮಲಾಪಥಿ ರೈಲ್ವೆ ನಿಲ್ದಾಣದಿಂದ ವರ್ಚುವಲ್​​ ಮೂಲಕ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಪ್ರತಿ ಮಂಗಳವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ರೈಲು ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಿ ಮಧ್ಯೆ ದಾವಣಗೆರೆಯಲ್ಲಿ ಮಾತ್ರ ನಿಲ್ಲುತ್ತದೆ. ವಂದೇ ಭಾರತ್ ರೈಲು ಬೆಂಗಳೂರು-ಧಾರವಾಡ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದ್ದು, ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ.

ಇದನ್ನೂ ಓದಿ: Vande Bharat: ವಿಡಿಯೋ ನೋಡಿ; ವಂದೇ ಭಾರತ್ ರೈಲಿನ ಬಗ್ಗೆ ಶಾಲಾ ಮಕ್ಕಳಿಗೆ ಸಚಿವ ಅಶ್ವಿನಿ ವೈಷ್ಣವ್ ಪಾಠ!

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಈ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ. ಪ್ರಯಾಣಿಕರ ಆದ್ಯತೆಯನುಸಾರ ಬೋಗಿಗಳ ಸಂಖ್ಯೆ ಹೆಚ್ಚಿಗೆ ಮಾಡಲಾಗುವುದು ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ವಂದೇ ಭಾರತ ಎಕ್ಸಪ್ರೆಸ್​ ರೈಲಿನ ಸಮಯ

ಬೆಳಿಗ್ಗೆ 5:54ಕ್ಕೆ ಬೆಂಗಳೂರಿನಿಂದ ಹೊರಟು, 5:55ಕ್ಕೆ ಯಶವಂತಪುರ, 9:15 ದಾವಣಗೆರೆ, 11:30 ಎಸ್​ಎಸ್​ಎಸ್​ ಹುಬ್ಬಳ್ಳಿ ಕೊನೆಯದಾಗಿ 12:10ಕ್ಕೆ ಧಾರವಾಡ ತಲುಪಲಿದೆ.

ಮರಳಿ ಧಾರವಾಡ ನಿಲ್ದಾಣದಿಂದ ಮಧ್ಯಾಹ್ನ 1:15ಕ್ಕೆ ಹೊರಟು, 1:35ಕ್ಕೆ ಎಸ್​ಎಸ್​ಎಸ್​ ಹುಬ್ಬಳ್ಳಿ 3.38ಕ್ಕೆ ದಾವಣಗೆರೆ, ರಾತ್ರಿ 7:13ಕ್ಕೆ ಯಶವಂತಪುರ ಹಾಗೂ 7:45ಕ್ಕೆ ಬೆಂಗಳೂರು ತಲುಪಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sat, 24 June 23

ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ