AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ಮೋದಿಯಿಂದ ಚಾಲನೆ

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್​​ ಮೂಲಕ ಚಾಲನೆ ನೀಡಲಿದ್ದಾರೆ.

Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ಮೋದಿಯಿಂದ ಚಾಲನೆ
ವಂದೇಭಾರತ ಎಕ್ಸಪ್ರೆಸ್​​ (ಎಡಚಿತ್ರ) ಪ್ರಧಾನಿ ಮೋದಿ (ಬಲಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 27, 2023 | 7:05 AM

Share

ಧಾರವಾಡ: ಬೆಂಗಳೂರು-ಧಾರವಾಡ (Bengaluru-Dharwad) ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್​​ಪ್ರೆಸ್ (Vande Bharat Express)​​ ರೈಲು ಪ್ರಯೋಗಾರ್ಥ ಸಂಚಾರ ಜೂ.19 ರಂದು ಯಶಸ್ವಿಯಾಗಿದೆ. ಇಂದು (ಜೂ.27) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭೋಪಾಲ್‌ನ ರಾಣಿ ಕಮಲಾಪಥಿ ರೈಲ್ವೆ ನಿಲ್ದಾಣದಿಂದ ವರ್ಚುವಲ್​​ ಮೂಲಕ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಪ್ರತಿ ಮಂಗಳವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ರೈಲು ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಿ ಮಧ್ಯೆ ದಾವಣಗೆರೆಯಲ್ಲಿ ಮಾತ್ರ ನಿಲ್ಲುತ್ತದೆ. ವಂದೇ ಭಾರತ್ ರೈಲು ಬೆಂಗಳೂರು-ಧಾರವಾಡ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದ್ದು, ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ.

ಇದನ್ನೂ ಓದಿ: Vande Bharat: ವಿಡಿಯೋ ನೋಡಿ; ವಂದೇ ಭಾರತ್ ರೈಲಿನ ಬಗ್ಗೆ ಶಾಲಾ ಮಕ್ಕಳಿಗೆ ಸಚಿವ ಅಶ್ವಿನಿ ವೈಷ್ಣವ್ ಪಾಠ!

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಈ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ. ಪ್ರಯಾಣಿಕರ ಆದ್ಯತೆಯನುಸಾರ ಬೋಗಿಗಳ ಸಂಖ್ಯೆ ಹೆಚ್ಚಿಗೆ ಮಾಡಲಾಗುವುದು ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ವಂದೇ ಭಾರತ ಎಕ್ಸಪ್ರೆಸ್​ ರೈಲಿನ ಸಮಯ

ಬೆಳಿಗ್ಗೆ 5:54ಕ್ಕೆ ಬೆಂಗಳೂರಿನಿಂದ ಹೊರಟು, 5:55ಕ್ಕೆ ಯಶವಂತಪುರ, 9:15 ದಾವಣಗೆರೆ, 11:30 ಎಸ್​ಎಸ್​ಎಸ್​ ಹುಬ್ಬಳ್ಳಿ ಕೊನೆಯದಾಗಿ 12:10ಕ್ಕೆ ಧಾರವಾಡ ತಲುಪಲಿದೆ.

ಮರಳಿ ಧಾರವಾಡ ನಿಲ್ದಾಣದಿಂದ ಮಧ್ಯಾಹ್ನ 1:15ಕ್ಕೆ ಹೊರಟು, 1:35ಕ್ಕೆ ಎಸ್​ಎಸ್​ಎಸ್​ ಹುಬ್ಬಳ್ಳಿ 3.38ಕ್ಕೆ ದಾವಣಗೆರೆ, ರಾತ್ರಿ 7:13ಕ್ಕೆ ಯಶವಂತಪುರ ಹಾಗೂ 7:45ಕ್ಕೆ ಬೆಂಗಳೂರು ತಲುಪಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sat, 24 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು