AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲನೆ ಸಿಕ್ಕ ಮೊದಲ ದಿನವೇ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನ ಟಿಕೆಟ್ ದರ ಪರಿಷ್ಕರಣೆ: ಇಲ್ಲಿದೆ ಹೊಸ ದರ ವಿವರ

ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಚಾಲಕೆ ಸಿಕ್ಕ ಬೆನ್ನಲ್ಲೇ ಟಿಕೆಟ್​ ದರದ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದ್ದ, ಇದರ ಬೆನ್ನಲ್ಲೇ ನೈರುತ್ಯ ರೈಲ್ವೆ ಇಲಾಖೆ ಟಿಕೆಟ್​ ದರವನ್ನು ಪರಿಷ್ಕರಣೆ ಮಾಡಿದೆ. ಹೊಸ ಟಿಕೆಟ್ ದರ ವಿವರ ಈ ಕೆಳಗಿನಂತಿದೆ.​

ಚಾಲನೆ ಸಿಕ್ಕ ಮೊದಲ ದಿನವೇ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನ ಟಿಕೆಟ್ ದರ ಪರಿಷ್ಕರಣೆ: ಇಲ್ಲಿದೆ ಹೊಸ ದರ ವಿವರ
ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು
ರಮೇಶ್ ಬಿ. ಜವಳಗೇರಾ
|

Updated on: Jun 28, 2023 | 1:25 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ (ಜೂನ್ 27) ಅಷ್ಟೇ ಒಟ್ಟು ಐದು ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿಗೆ ಚಾಲನೆ ನೀಡಿದ್ದರು. ಇದರಲ್ಲಿ ಬೆಂಗಳೂರು-ಧಾರವಾಡ ರೈಲಿಗೂ ಚಾಲನೆ ಸಿಕ್ಕಿತ್ತು. ಆದ್ರೆ, ಈ ರೈಲಿನ ಟಿಕೆಟ್​ ದರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿತ್ತು. ಬಡವರು ಓಡಾಡುವ ರೈಲು ಇದಲ್ಲ ಅಂತೆಲ್ಲ ಟೀಕೆಗಳು ವ್ಯಕ್ತವಾಗುತ್ತಿದ್ದವು. ಇದರ ಬೆನ್ನಲ್ಲೇ ನೈಋುತ್ಯ ರೈಲ್ವೆಯು ಬೆಂಗಳೂರು-ಧಾರವಾಡ-ಬೆಂಗಳೂರು ವಂದೇ ಭಾರತ್‌ ರೈಲು ಟಿಕೆಟ್​ ದರವನ್ನು ಪರಿಷ್ಕರಣೆ ಮಾಡಿದೆ. ಎಕ್ಸಿಕ್ಯೂಟಿವ್‌ ಕ್ಲಾಸ್‌ ಟಿಕೆಟ್​ ದರ ಹೆಚ್ಚಿಸಿದ್ದರೆ, ಎಸಿ ಕಾರ್‌ಚೇರ್‌ ಟಿಕೆಟ್​ ದರ ಇಳಿಕೆ ಮಾಡಲಾಗಿದೆ. ಜತೆಗೆ ಪ್ರತಿ ನಿಲ್ದಾಣಗಳ ನಡುವಿನ ಪ್ರಯಾಣದ ದರವನ್ನು 20 ರೂ. ಹೆಚ್ಚಿಸಲಾಗಿದೆ. ಹಾಗಾದ್ರೆ, ಎಷ್ಟೆಷ್ಟು ಇಳಿಕೆಯಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ: ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ವಿಶೇಷತೆ ಏನು? ಎಲ್ಲೆಲ್ಲಿ ನಿಲ್ಲುತ್ತೆ? ಟಿಕೆಟ್​ ಎಷ್ಟು?

ಈ ಮೊದಲು ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದ (ಕೆಎಸ್‌ಆರ್‌) ಯಶವಂತಪುರಕ್ಕೆ 410 ರೂ. ಟಿಕೆಟ್​ ದರ ನಿಗದಿ ಮಾಡಲಾಗಿತ್ತು. ಈಗ 365 ರೂ.ಗೆ ಇಳಿಕೆ ಮಾಡಲಾಗಿದೆ. ಅದೇ ರೀತಿ ಧಾರವಾಡದಿಂದ ಹುಬ್ಬಳ್ಳಿಗೆ ಇದೇ ರೀತಿ ಕಡಿಮೆ ಮಾಡಲಾಗಿದೆ. ಆದರೆ ಎಕ್ಸಿಕ್ಯೂಟಿವ್‌ ಕ್ಲಾಸ್‌ನಲ್ಲಿ ಇದೇ ನಿಲ್ದಾಣಗಳ ನಡುವೆ ಸಂಚರಿಸಲು ಈ ಮೊದಲು ನಿಗದಿ ಮಾಡಿದ್ದ 545 ರೂ. ಬದಲು 690 ರೂ.ಗೆ ಹೆಚ್ಚಿಸಲಾಗಿದೆ.

ಪರಿಷ್ಕೃತ ಟಿಕೆಟ್​ ದರ ಇಂತಿದೆ

ಕೇವಲ ಎಸಿ ಕಾರ್‌ಚೇರ್‌ ಟಿಕೆಟ್​ ದರ ಇಳಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಇಂತಿದೆ. ಬೆಂಗಳೂರು-ಧಾರವಾಡ 1185 ರೂ., ಬೆಂಗಳೂರು- ಹುಬ್ಬಳ್ಳಿ 1155 ರೂ., ಬೆಂಗಳೂರು- ದಾವಣಗೆರೆ 935 ರೂ., ಯಶವಂತಪುರ-ದಾವಣಗೆರೆ 920 ರೂ, ಯಶವಂತಪುರ-ಹುಬ್ಬಳ್ಳಿ 1155 ರೂ., ಯಶವಂತಪುರ-ಧಾರವಾಡ 1185 ರೂ., ದಾವಣಗೆರೆ-ಧಾರವಾಡ ರೂ.555, ದಾವಣಗೆರೆ-ಹುಬ್ಬಳ್ಳಿ 520 ರೂ, ಹುಬ್ಬಳ್ಳಿಯಿಂದ ಧಾರವಾಡಕ್ಕೆ 365 ರೂ. ನಿಗದಿಪಡಿಸಲಾಗಿದೆ.

ಎಕ್ಸಿಕ್ಯೂಟಿವ್‌ ಕ್ಲಾಸ್‌ ಟಿಕೆಟ್ ದರ

ಇನ್ನು ರೂಲಿನ ಎಕ್ಸಿಕ್ಯೂಟಿವ್‌ ಕ್ಲಾಸ್‌ ಟಿಕೆಟ್​ ದರ ಏರಿಕೆ ಮಾಡಲಾಗಿದ್ದು, ಅದು ಇಂತಿದೆ. ಬೆಂಗಳೂರು- ಧಾರವಾಡ 2265 ರೂ., ಬೆಂಗಳೂರು- ಹುಬ್ಬಳ್ಳಿ 2200ರೂ., ಬೆಂಗಳೂರು-ದಾವಣಗೆರೆ 1760ರೂ., ಯಶವಂತಪುರ- ಧಾರವಾಡ .2265ರೂ, ಯಶವಂತಪುರ- ಹುಬ್ಬಳ್ಳಿ 2200ರೂ., ಯಶವಂತಪುರ- ದಾವಣಗೆರೆ 1730ರೂ., ದಾವಣಗೆರೆ- ಹುಬ್ಬಳ್ಳಿ 1005ರೂ., ದಾವಣಗೆರೆ- ಧಾರವಾಡ 1075ರೂ., ಹುಬ್ಬಳ್ಳಿ -ಧಾರವಾಡ 690ರೂ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು