AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Train: ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್​ ಜುಲೈ ಅಂತ್ಯದ ವೇಳೆಗೆ ಆರಂಭ

ಜುಲೈ ಅಂತ್ಯದೊಳಗೆ ಕರ್ನಾಟಕಕ್ಕೆ ಎರಡನೇ ವಂದೇ ಭಾರತ್ ರೈಲು (Vande Bharat Express) ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಗುರುವಾರ ಘೋಷಿಸಿದ್ದಾರೆ.

Vande Bharat Train: ಬೆಂಗಳೂರು - ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್​ ಜುಲೈ ಅಂತ್ಯದ ವೇಳೆಗೆ ಆರಂಭ
ವಂದೇ ಭಾರತ್ ರೈಲು
Follow us
Ganapathi Sharma
|

Updated on:Jun 01, 2023 | 3:10 PM

ಬೆಂಗಳೂರು: ಜುಲೈ ಅಂತ್ಯದೊಳಗೆ ಕರ್ನಾಟಕಕ್ಕೆ ಎರಡನೇ ವಂದೇ ಭಾರತ್ ರೈಲು (Vande Bharat Express) ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಗುರುವಾರ ಘೋಷಿಸಿದ್ದಾರೆ. ಬೆಂಗಳೂರು-ಧಾರವಾಡ ನಡುವೆ ರೈಲು ಸಂಚಾರ ನಡೆಯಲಿದೆ. ಪ್ರಲ್ಹಾದ್ ಜೋಶಿ ಅವರು ಬುಧವಾರ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರನ್ನು ಭೇಟಿ ಮಾಡಿ ಕರ್ನಾಟಕದ ಐಟಿ ಹಬ್ ಮತ್ತು ಧಾರವಾಡವನ್ನು ಸಂಪರ್ಕಿಸುವ ವಂದೇ ಭಾರತ್ ರೈಲಿನ ಬಗ್ಗೆ ಚರ್ಚಿಸಿದ್ದರು. ವಂದೇ ಭಾರತ್ ರೈಲು ಓಡಿಸಲು ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರೈಲು ಸಂಚಾರ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ ಎಂಬುದಾಗಿ ಜೋಶಿ ತಿಳಿಸಿದರು.

ಬೆಂಗಳೂರು ಮತ್ತು ಧಾರವಾಡ ನಡುವಿನ ವಂದೇ ಭಾರತ್ ರೈಲು 2023 ರ ಮಾರ್ಚ್​​​ನಲ್ಲಿ ಉದ್ಘಾಟನೆಯಾಗಬೇಕಿತ್ತು. ಹಳಿಗಳ ವಿದ್ಯುದೀಕರಣ ಮತ್ತು ಟ್ರಾಕ್ಷನ್ ಸಬ್‌ಸ್ಟೇಷನ್‌ನಲ್ಲಿ ವಿಳಂಬ ಮತ್ತು ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಸೇರಿದಂತೆ ಹಲವು ಕಾರಣಗಳಿಂದ ಇದು ವಿಳಂಬವಾಗಿದೆ.

ಇದು ಕರ್ನಾಟಕದಲ್ಲಿ ಆರಂಭವಾಗಲಿರುವ ಎರಡನೇ ವಂದೇ ಭಾರತ್ ರೈಲು. ಮೊದಲ ರೈಲು ಈಗಾಗಲೇ ಮೈಸೂರು-ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ಸಂಚರಿಸುತ್ತಿದೆ. ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಿದ್ದರು. ಮೈಸೂರು-ಬೆಂಗಳೂರು-ಚೆನ್ನೈ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಸಹ ಹೌದು.

ಇದನ್ನೂ ಓದಿ: Vande Bharat Express: ವಂದೇ ಭಾರತ್ ಎಕ್ಸ್​ಪ್ರೆಸ್, ಆನ್​ಲೈನ್​ ಟಿಕೆಟ್ ಬುಕಿಂಗ್ ವಿಧಾನ ಇಲ್ಲಿದೆ ನೋಡಿ ದಕ್ಷಿಣ ಭಾರತದ ಮತ್ತೊಂದು ವಂದೇ ಭಾರತ್ ರೈಲಿಗೆ ಏಪ್ರಿಲ್​​ನಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಈ ರೈಲು ಕೇರಳದ ತಿರುವನಂತಪುರ ಮತ್ತು ಕಾಸರಗೋಡು ಮಧ್ಯೆ ಸಂಚರಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Thu, 1 June 23

‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್